ತಿರುವನಂತಪುರ: ಕೇಂದ್ರ ಸರ್ಕಾರ ಒಂದು ರಾಷ್ಟ್ರ, ಒಂದು ಚುನಾವಣೆ ಯೋಜನೆಯನ್ನು ಜಾರಿಗೊಳಿಸಲು ನಿರ್ಧರಿಸಿರುವುದು ಸಾಂವಿಧಾನಿಕವಾಗಿ ಊರ್ಜಿತವಲ್ಲ. ಈ ನಿರ್ಧಾರ ದೇಶದ ಒಕ್ಕೂಟ ವ್ಯವಸ್ಥೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ತಮಿಳುನಾಡು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ತಿಳಿಸಿದ್ದಾರೆ.
ತಿರುವನಂತಪುರದಲ್ಲಿ ಇಂದು(ಫೆಬ್ರವರಿ.6) ನಡೆದ ಮಾತೃಭೂಮಿ ಅಂತರಾಷ್ಟ್ರೀಯ ಅಕ್ಷರಗಳ ಉತ್ಸವದ ಆರನೇ ಆವೃತ್ತಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಈ ಪ್ರಸ್ತಾವನೆಯೂ ಒಕ್ಕೂಟ ವ್ಯವಸ್ಥೆಯನ್ನು ಬಲಪಡಿಸುವ ಸಂವಿಧಾನದ ಮೂಲ ರಚನೆಯನ್ನು ಉಲ್ಲಂಘಿಸುತ್ತದೆ. ಹೀಗಾಗಿ ಈ ನಿರ್ಧಾರ ಸಾಂವಿಧಾನಿಕವಾಗಿ ಊರ್ಜಿತವಲ್ಲ ಎಂದರು.
ಒಂದು ರಾಷ್ಟ್ರ, ಒಂದು ಚುನಾವಣೆಯ ಮೂಲಕ ದೇಶದಲ್ಲಿ ಚುನಾವಣೆ ನಡೆಸಿದಾಗ ಪಕ್ಷಾಂತರ ಅಥವಾ ಆತ್ಮವಿಶ್ವಾಸದ ನಿರ್ಣಯದಿಂದ ರಾಜ್ಯ ಸರ್ಕಾರ ಪತನವಾದರೆ, ಮುಂದಿನ ಲೋಕಸಭೆ ಚುನಾವಣೆ ನಡೆಯುವರೆಗೂ ಆಯಾಯ ರಾಜ್ಯಗಳು ಕಾಯಬೇಕಾಗುತ್ತದೆ. ಅಲ್ಲದೇ ಈ ತೀರ್ಮಾನದಿಂದ ಸಂವಿಧಾನದ 174ನೇ ವಿಧಿಯನ್ನು ದುರ್ಬಲಗೊಳಿಸುತ್ತದೆ ಹಾಗೂ ಒಕ್ಕೂಟ ವ್ಯವಸ್ಥೆಯ ಮೂಲ ರಚನೆಯನ್ನು ಉಲ್ಲಂಘಿಸಲಾಗುತ್ತದೆ ಎಂದು ಹೇಳಿದರು.
ಇನ್ನೂ ಕೇಂದ್ರ ಬಜೆಟ್ನಲ್ಲಿ ಈ ಬಾರಿ ತಮಿಳುನಾಡು ಮತ್ತು ಕೇರಳ ರಾಜ್ಯಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ ಎಂದು ಆರೋಪಿಸಿದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…