ದೇಶ- ವಿದೇಶ

20 ವರ್ಷಗಳ ನಂತರ ಒಂದಾದ ಉದ್ಧವ್‌-ರಾಜ್‌ ಠಾಕ್ರೆ

ಮುಂಬೈ: ಕಳೆದ ಎರಡು ದಶಕಗಳಿಂದ ಹಾವು-ಮುಂಗೂಸಿಯಂತಿದ್ದ ಹಿಂದೂ ಹೃದಯ ಸಾಮ್ರಾಟದ ಬಾಳಠಾಕ್ರೆ ಕುಟುಂಬದ ಕುಡಿಗಳಾದ ರಾಜ್ ಠಾಕ್ರೆ-ಉದ್ದವ್ ಠಾಕ್ರೆ ಪರಸ್ಪರ ವೈಮನಸ್ಸು ಮರೆತು ಒಂದಾಗಿ ಕೈ ಜೋಡಿಸಿದ ಅಪರೂಪದ ಪ್ರಸಂಗಕ್ಕೆ ವಾಣಿಜ್ಯ ನಗರಿ ಮುಂಬೈ ಸಾಕ್ಷಿಯಾಯಿತು.

ರಾಜ್ಯ ಸರ್ಕಾರಿ ಶಾಲೆಗಳಲ್ಲಿ ಹಿಂದಿ ಭಾಷೆಯನ್ನು ಕಡ್ಡಾಯಗೊಳಿಸಿದ್ದ ಸರ್ಕಾರದ ವಿರುದ್ಧ ರಾಜ್ ಠಾಕ್ರೆ ಮತ್ತು ಉದ್ದವ್ ಠಾಕ್ರೆ ಅವರುಗಳು ಮುಂಬೈನ ಪ್ರತಿಷ್ಠಿತ ವರ್ಲಿಯಲ್ಲಿ ಬೃಹತ್ ವಿಜಯೋತ್ಸವ ರ್ಯಾಲಿ ನಡೆಸಿದರು.

ರ್ಯಾಲಿ ಪ್ರಯುಕ್ತ ರಾಜ್ ಠಾಕ್ರೆ ಮತ್ತು ಉದ್ದವ್ ಠಾಕ್ರೆ ಎರಡು ದಶಕಗಳ ನಂತರ ಒಂದೇ ವೇದಿಕೆಯಲ್ಲಿ ತಮ್ಮ ಅಹಂ ಮರೆತು ಒಂದಾಗಿದ್ದು, ಮಹಾರಾಷ್ಟ್ರ ರಾಜಕಾರಣದಲ್ಲಿ ಹೊಸ ಸಮೀಕರಣವನ್ನು ಬರೆಯಲಿದ್ದಾರೆ ಎಂದು ವ್ಯಾಖ್ಯಾನಿಸಲಾಗಿದೆ.

ಶಿವಸೇನೆ ಸಂಸ್ಥಾಪಕರಾಗಿದ್ದ ಬಾಳಾ ಠಾಕ್ರೆ ನಿಧನದ ನಂತರ ಕೆಲವು ಕೌಟುಂಬಿಕ ಕಾರಣಗಳ ಹಿನ್ನೆಲೆಯಿಂದ ರಾಜ್ ಠಾಕ್ರೆ ಶಿವಸೇನೆಯಿಂದ ಹೊರಬಂದು ಮಹಾರಾಷ್ಟ್ರ ನವ ನಿರ್ಮಾಣ್ ಸೇನೆ ಎಂಬ ಹೊಸ ಪಕ್ಷವನ್ನು ಕಟ್ಟಿದ್ದರು.

ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಶಿವಸೇನೆ, ಎನ್‍ಎಂಎಸ್, ಎನ್‍ಸಿಪಿ ಸೇರಿದಂತೆ ಹಲವು ರಾಜಕೀಯ ಪಕ್ಷಗಳು ಎನ್‍ಡಿಎ ಅಬ್ಬರದ ಮುಂದೆ ಮಕಾಡೆ ಮಲಗಿದ್ದವು. ರಾಷ್ಟ್ರೀಯ ಶಿಕ್ಷಣ ನೀತಿ(ಎನ್‍ಇಎಸ್) ಪ್ರಕಾರ ಕೇಂದ್ರ ಸರ್ಕಾರ ತ್ರಿಭಾಷಾ ಸೂತ್ರವನ್ನು ಅಳವಡಿಸಲು ಮುಂದಾಗಿತ್ತು.

ಈ ಪ್ರಕಾರ ರಾಜ್ಯಗಳು ಸ್ಥಳೀಯ ಭಾಷೆಯ ಜೊತೆಗೆ ಇಂಗ್ಲೀಷ್ ಹಾಗೂ ಹಿಂದಿಯನ್ನು ಕಡ್ಡಾಯಗೊಳಿಸಲು ಮುಂದಾಗಿತ್ತು. ಇದನ್ನು ಮಹಾರಾಷ್ಟ್ರ ಕೂಡ ಸರ್ಕಾರಿ ಶಾಲೆಗಳಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಗಳು ಕಡ್ಡಾಯವಾಗಿ ಹಿಂದಿ ಭಾಷೆಯನ್ನು ಕಲಿಯಬೇಕೆಂದು ಅಧಿಸೂಚನೆ ಹೊರಡಿಸಲಾಗಿತ್ತು. ಇದು ರಾಜ್ಯದಲ್ಲಿ ದೊಡ್ಡ ವಿವಾದವನ್ನೇ ಸೃಷ್ಟಿಸಿತ್ತು.

ಮರಾಠಿ ಅಸ್ಮಿತೆಗೆ ಧಕ್ಕೆ ಬರಲಿದೆ ಎಂಬ ಏಕೈಕ ಕಾರಣಕ್ಕಾಗಿ ತಮ್ಮ ಹಿಂದಿನ ಎಲ್ಲಾ ವೈಮನಸ್ಸು ಮರೆತು ಠಾಕ್ರೆ ಕುಟುಂಬದ ಇಬ್ಬರು ಬಲಿಷ್ಠ ನಾಯಕರು ಮರಾಠಿಗರಿಗಾಗಿ ಕೈ ಜೋಡಿಸಿ, ಮಾತೃಭಾಷೆ ವಿಷಯದಲ್ಲಿ ರಾಜೀ ಇಲ್ಲ ಎಂಬ ಸಂದೇಶ ರವಾನಿಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕೊರಿಯನ್ ಗೇಮ್ಸ್ ನಿಷೇಧಿಸಿ

ಕೊರಿಯನ್ ಗೇಮ್ಸ್ ವ್ಯಸನದಿಂದ ಮಕ್ಕಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಇಂದು ನಮ್ಮ ಯುವಜನತೆ ಕೆ ಪಾಪ್ ಮತ್ತು ಕೆ…

1 hour ago

ಓದುಗರ ಪತ್ರ: ಖಾಲಿ ನಿವೇಶನದಲ್ಲಿರುವ ಕಸ ತೆರವುಗೊಳಿಸಿ

ಮೈಸೂರಿನ ಶ್ರೀರಾಂಪುರ ೨ನೇ ಹಂತದಲ್ಲಿ ನಿವೇಶನನವೊಂದು ಕಳೆದ ೨೬ ವರ್ಷಗಳಿಂದ ಖಾಲಿಬಿದ್ದಿದೆ. ಈ ಖಾಲಿ ನಿವೇಶನದಲ್ಲಿ ಅಕ್ಕಪಕ್ಕದ ಮನೆಯ ನಿವಾಸಿಗಳು…

1 hour ago

ಓದುಗರ ಪತ್ರ: ಬೆಳವಾಡಿ ಕೆರೆ ಸ್ವಚ್ಛಗೊಳಿಸಿ

ಮೈಸೂರು ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯಾಗಿರುವುದು ಸ್ವಾಗತಾರ್ಹ ಸಂಗತಿ. ಆದರೆ ಗ್ರಾಮದ ನೈಸರ್ಗಿಕ ಸಂಪತ್ತಾದ ‘ಬೆಳವಾಡಿ ಕೆರೆ’ಗೆ…

1 hour ago

‘ಮಾದಕ ವಸ್ತು ಮಾರಾಟ ಮಾಡಿದರೆ ಕ್ರಮ’

ನವೀನ್ ಡಿಸೋಜ ಜನವರಿಯಲ್ಲಿ ೬೩ ಎನ್‌ಡಿಪಿಎಸ್ ಪ್ರಕರಣಗಳು ದಾಖಲು; ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರ ಮೆಚ್ಚುಗೆ ಮಡಿಕೇರಿ: ಮಾದಕ ವಸ್ತುಗಳ ಮಾರಾಟ…

1 hour ago

ಆಶ್ರಮ ಶಾಲೆಯಲ್ಲಿ ಅಡುಗೆ ಸಿಬ್ಬಂದಿಯವರ ಸರಸ ಸಲ್ಲಾಪ

ಮಂಜು ಕೋಟೆ ಜಕ್ಕಹಳ್ಳಿ ಆಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮುಜುಗರ; ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಪೋಷಕರ ಆಗ್ರ ಎಚ್.ಡಿ.ಕೋಟೆ: ಗಿರಿಜನ ಮಕ್ಕಳ…

1 hour ago

ಮಾನಂದವಾಡಿ ರಸ್ತೆಯಲ್ಲಿ ಅಪಘಾತಕ್ಕೆ ಬೀಳಬೇಕಿದೆ ಬ್ರೇಕ್…

ಪ್ರಶಾಂತ್ ಎಸ್. ವೇಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದಿದ್ದರೆ ಅನಾಹುತಕ್ಕೆ ಹಾದಿ ಎನ್.ಎಚ್.ಪಾಳ್ಯ,ಟೋಲ್‌ಗೇಟ್, ಶಿವಪುರ ತಿರುವಿನಲ್ಲಿ ರಿಫ್ಲೆಕ್ಟರ್,ಬ್ಯಾರಿಕೇಡ್ ಅಳವಡಿಕೆ ಅಗತ್ಯ ಮೈಸೂರು:…

1 hour ago