ದೇಶ- ವಿದೇಶ

20 ವರ್ಷಗಳ ನಂತರ ಒಂದಾದ ಉದ್ಧವ್‌-ರಾಜ್‌ ಠಾಕ್ರೆ

ಮುಂಬೈ: ಕಳೆದ ಎರಡು ದಶಕಗಳಿಂದ ಹಾವು-ಮುಂಗೂಸಿಯಂತಿದ್ದ ಹಿಂದೂ ಹೃದಯ ಸಾಮ್ರಾಟದ ಬಾಳಠಾಕ್ರೆ ಕುಟುಂಬದ ಕುಡಿಗಳಾದ ರಾಜ್ ಠಾಕ್ರೆ-ಉದ್ದವ್ ಠಾಕ್ರೆ ಪರಸ್ಪರ ವೈಮನಸ್ಸು ಮರೆತು ಒಂದಾಗಿ ಕೈ ಜೋಡಿಸಿದ ಅಪರೂಪದ ಪ್ರಸಂಗಕ್ಕೆ ವಾಣಿಜ್ಯ ನಗರಿ ಮುಂಬೈ ಸಾಕ್ಷಿಯಾಯಿತು.

ರಾಜ್ಯ ಸರ್ಕಾರಿ ಶಾಲೆಗಳಲ್ಲಿ ಹಿಂದಿ ಭಾಷೆಯನ್ನು ಕಡ್ಡಾಯಗೊಳಿಸಿದ್ದ ಸರ್ಕಾರದ ವಿರುದ್ಧ ರಾಜ್ ಠಾಕ್ರೆ ಮತ್ತು ಉದ್ದವ್ ಠಾಕ್ರೆ ಅವರುಗಳು ಮುಂಬೈನ ಪ್ರತಿಷ್ಠಿತ ವರ್ಲಿಯಲ್ಲಿ ಬೃಹತ್ ವಿಜಯೋತ್ಸವ ರ್ಯಾಲಿ ನಡೆಸಿದರು.

ರ್ಯಾಲಿ ಪ್ರಯುಕ್ತ ರಾಜ್ ಠಾಕ್ರೆ ಮತ್ತು ಉದ್ದವ್ ಠಾಕ್ರೆ ಎರಡು ದಶಕಗಳ ನಂತರ ಒಂದೇ ವೇದಿಕೆಯಲ್ಲಿ ತಮ್ಮ ಅಹಂ ಮರೆತು ಒಂದಾಗಿದ್ದು, ಮಹಾರಾಷ್ಟ್ರ ರಾಜಕಾರಣದಲ್ಲಿ ಹೊಸ ಸಮೀಕರಣವನ್ನು ಬರೆಯಲಿದ್ದಾರೆ ಎಂದು ವ್ಯಾಖ್ಯಾನಿಸಲಾಗಿದೆ.

ಶಿವಸೇನೆ ಸಂಸ್ಥಾಪಕರಾಗಿದ್ದ ಬಾಳಾ ಠಾಕ್ರೆ ನಿಧನದ ನಂತರ ಕೆಲವು ಕೌಟುಂಬಿಕ ಕಾರಣಗಳ ಹಿನ್ನೆಲೆಯಿಂದ ರಾಜ್ ಠಾಕ್ರೆ ಶಿವಸೇನೆಯಿಂದ ಹೊರಬಂದು ಮಹಾರಾಷ್ಟ್ರ ನವ ನಿರ್ಮಾಣ್ ಸೇನೆ ಎಂಬ ಹೊಸ ಪಕ್ಷವನ್ನು ಕಟ್ಟಿದ್ದರು.

ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಶಿವಸೇನೆ, ಎನ್‍ಎಂಎಸ್, ಎನ್‍ಸಿಪಿ ಸೇರಿದಂತೆ ಹಲವು ರಾಜಕೀಯ ಪಕ್ಷಗಳು ಎನ್‍ಡಿಎ ಅಬ್ಬರದ ಮುಂದೆ ಮಕಾಡೆ ಮಲಗಿದ್ದವು. ರಾಷ್ಟ್ರೀಯ ಶಿಕ್ಷಣ ನೀತಿ(ಎನ್‍ಇಎಸ್) ಪ್ರಕಾರ ಕೇಂದ್ರ ಸರ್ಕಾರ ತ್ರಿಭಾಷಾ ಸೂತ್ರವನ್ನು ಅಳವಡಿಸಲು ಮುಂದಾಗಿತ್ತು.

ಈ ಪ್ರಕಾರ ರಾಜ್ಯಗಳು ಸ್ಥಳೀಯ ಭಾಷೆಯ ಜೊತೆಗೆ ಇಂಗ್ಲೀಷ್ ಹಾಗೂ ಹಿಂದಿಯನ್ನು ಕಡ್ಡಾಯಗೊಳಿಸಲು ಮುಂದಾಗಿತ್ತು. ಇದನ್ನು ಮಹಾರಾಷ್ಟ್ರ ಕೂಡ ಸರ್ಕಾರಿ ಶಾಲೆಗಳಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಗಳು ಕಡ್ಡಾಯವಾಗಿ ಹಿಂದಿ ಭಾಷೆಯನ್ನು ಕಲಿಯಬೇಕೆಂದು ಅಧಿಸೂಚನೆ ಹೊರಡಿಸಲಾಗಿತ್ತು. ಇದು ರಾಜ್ಯದಲ್ಲಿ ದೊಡ್ಡ ವಿವಾದವನ್ನೇ ಸೃಷ್ಟಿಸಿತ್ತು.

ಮರಾಠಿ ಅಸ್ಮಿತೆಗೆ ಧಕ್ಕೆ ಬರಲಿದೆ ಎಂಬ ಏಕೈಕ ಕಾರಣಕ್ಕಾಗಿ ತಮ್ಮ ಹಿಂದಿನ ಎಲ್ಲಾ ವೈಮನಸ್ಸು ಮರೆತು ಠಾಕ್ರೆ ಕುಟುಂಬದ ಇಬ್ಬರು ಬಲಿಷ್ಠ ನಾಯಕರು ಮರಾಠಿಗರಿಗಾಗಿ ಕೈ ಜೋಡಿಸಿ, ಮಾತೃಭಾಷೆ ವಿಷಯದಲ್ಲಿ ರಾಜೀ ಇಲ್ಲ ಎಂಬ ಸಂದೇಶ ರವಾನಿಸಿದರು.

ಆಂದೋಲನ ಡೆಸ್ಕ್

Recent Posts

ಆಂಧ್ರದಲ್ಲಿ ಮತ್ತೆ ಕೋವಿಡ್‌ ಆತಂಕ: ಇಬ್ಬರು ಬಲಿ

ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್‌ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್‌ಆರ್‌ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್‌…

10 hours ago

ಪಂಚಭೂತಗಳಲ್ಲಿ ಲೀನರಾದ ಗಾನಕೋಗಿಲೆ ಎಸ್.ಜಾನಕಿ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…

11 hours ago

ಹೇಮಾವತಿ ನದಿ ಹಿನ್ನೀರಿನಲ್ಲಿ ಕಣ್ಮರೆಯಾಗಿದ್ದ ಇಬ್ಬರ ಮೃತದೇಹ ಪತ್ತೆ

ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…

12 hours ago

ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ: ಹಾರ್ಮುಜ್‌ ಜಲಸಂಧಿ ಮುಚ್ಚಿದ ಇರಾನ್‌

ಟೆಹರಾನ್:‌ ಹಾರ್ಮುಜ್‌ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್‌ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…

12 hours ago

ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತೆ ದುರ್ಬಲ: ತೀವ್ರಗೊಂಡ ಬರದ ಛಾಯೆ

ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…

12 hours ago

ಕಣಿಯನಹುಂಡಿ ತೋಟದ ಮನೆಯಲ್ಲಿ ನೆರವೇರಲಿದೆ ಎಸ್‌.ಜಾನಕಿ ಅವರ ಅಂತ್ಯಕ್ರಿಯೆ

ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…

13 hours ago