ದೇಶ- ವಿದೇಶ

20 ವರ್ಷಗಳ ನಂತರ ಒಂದಾದ ಉದ್ಧವ್‌-ರಾಜ್‌ ಠಾಕ್ರೆ

ಮುಂಬೈ: ಕಳೆದ ಎರಡು ದಶಕಗಳಿಂದ ಹಾವು-ಮುಂಗೂಸಿಯಂತಿದ್ದ ಹಿಂದೂ ಹೃದಯ ಸಾಮ್ರಾಟದ ಬಾಳಠಾಕ್ರೆ ಕುಟುಂಬದ ಕುಡಿಗಳಾದ ರಾಜ್ ಠಾಕ್ರೆ-ಉದ್ದವ್ ಠಾಕ್ರೆ ಪರಸ್ಪರ ವೈಮನಸ್ಸು ಮರೆತು ಒಂದಾಗಿ ಕೈ ಜೋಡಿಸಿದ ಅಪರೂಪದ ಪ್ರಸಂಗಕ್ಕೆ ವಾಣಿಜ್ಯ ನಗರಿ ಮುಂಬೈ ಸಾಕ್ಷಿಯಾಯಿತು.

ರಾಜ್ಯ ಸರ್ಕಾರಿ ಶಾಲೆಗಳಲ್ಲಿ ಹಿಂದಿ ಭಾಷೆಯನ್ನು ಕಡ್ಡಾಯಗೊಳಿಸಿದ್ದ ಸರ್ಕಾರದ ವಿರುದ್ಧ ರಾಜ್ ಠಾಕ್ರೆ ಮತ್ತು ಉದ್ದವ್ ಠಾಕ್ರೆ ಅವರುಗಳು ಮುಂಬೈನ ಪ್ರತಿಷ್ಠಿತ ವರ್ಲಿಯಲ್ಲಿ ಬೃಹತ್ ವಿಜಯೋತ್ಸವ ರ್ಯಾಲಿ ನಡೆಸಿದರು.

ರ್ಯಾಲಿ ಪ್ರಯುಕ್ತ ರಾಜ್ ಠಾಕ್ರೆ ಮತ್ತು ಉದ್ದವ್ ಠಾಕ್ರೆ ಎರಡು ದಶಕಗಳ ನಂತರ ಒಂದೇ ವೇದಿಕೆಯಲ್ಲಿ ತಮ್ಮ ಅಹಂ ಮರೆತು ಒಂದಾಗಿದ್ದು, ಮಹಾರಾಷ್ಟ್ರ ರಾಜಕಾರಣದಲ್ಲಿ ಹೊಸ ಸಮೀಕರಣವನ್ನು ಬರೆಯಲಿದ್ದಾರೆ ಎಂದು ವ್ಯಾಖ್ಯಾನಿಸಲಾಗಿದೆ.

ಶಿವಸೇನೆ ಸಂಸ್ಥಾಪಕರಾಗಿದ್ದ ಬಾಳಾ ಠಾಕ್ರೆ ನಿಧನದ ನಂತರ ಕೆಲವು ಕೌಟುಂಬಿಕ ಕಾರಣಗಳ ಹಿನ್ನೆಲೆಯಿಂದ ರಾಜ್ ಠಾಕ್ರೆ ಶಿವಸೇನೆಯಿಂದ ಹೊರಬಂದು ಮಹಾರಾಷ್ಟ್ರ ನವ ನಿರ್ಮಾಣ್ ಸೇನೆ ಎಂಬ ಹೊಸ ಪಕ್ಷವನ್ನು ಕಟ್ಟಿದ್ದರು.

ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಶಿವಸೇನೆ, ಎನ್‍ಎಂಎಸ್, ಎನ್‍ಸಿಪಿ ಸೇರಿದಂತೆ ಹಲವು ರಾಜಕೀಯ ಪಕ್ಷಗಳು ಎನ್‍ಡಿಎ ಅಬ್ಬರದ ಮುಂದೆ ಮಕಾಡೆ ಮಲಗಿದ್ದವು. ರಾಷ್ಟ್ರೀಯ ಶಿಕ್ಷಣ ನೀತಿ(ಎನ್‍ಇಎಸ್) ಪ್ರಕಾರ ಕೇಂದ್ರ ಸರ್ಕಾರ ತ್ರಿಭಾಷಾ ಸೂತ್ರವನ್ನು ಅಳವಡಿಸಲು ಮುಂದಾಗಿತ್ತು.

ಈ ಪ್ರಕಾರ ರಾಜ್ಯಗಳು ಸ್ಥಳೀಯ ಭಾಷೆಯ ಜೊತೆಗೆ ಇಂಗ್ಲೀಷ್ ಹಾಗೂ ಹಿಂದಿಯನ್ನು ಕಡ್ಡಾಯಗೊಳಿಸಲು ಮುಂದಾಗಿತ್ತು. ಇದನ್ನು ಮಹಾರಾಷ್ಟ್ರ ಕೂಡ ಸರ್ಕಾರಿ ಶಾಲೆಗಳಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಗಳು ಕಡ್ಡಾಯವಾಗಿ ಹಿಂದಿ ಭಾಷೆಯನ್ನು ಕಲಿಯಬೇಕೆಂದು ಅಧಿಸೂಚನೆ ಹೊರಡಿಸಲಾಗಿತ್ತು. ಇದು ರಾಜ್ಯದಲ್ಲಿ ದೊಡ್ಡ ವಿವಾದವನ್ನೇ ಸೃಷ್ಟಿಸಿತ್ತು.

ಮರಾಠಿ ಅಸ್ಮಿತೆಗೆ ಧಕ್ಕೆ ಬರಲಿದೆ ಎಂಬ ಏಕೈಕ ಕಾರಣಕ್ಕಾಗಿ ತಮ್ಮ ಹಿಂದಿನ ಎಲ್ಲಾ ವೈಮನಸ್ಸು ಮರೆತು ಠಾಕ್ರೆ ಕುಟುಂಬದ ಇಬ್ಬರು ಬಲಿಷ್ಠ ನಾಯಕರು ಮರಾಠಿಗರಿಗಾಗಿ ಕೈ ಜೋಡಿಸಿ, ಮಾತೃಭಾಷೆ ವಿಷಯದಲ್ಲಿ ರಾಜೀ ಇಲ್ಲ ಎಂಬ ಸಂದೇಶ ರವಾನಿಸಿದರು.

ಆಂದೋಲನ ಡೆಸ್ಕ್

Recent Posts

ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್‌ ಮನೆ ಮೇಲೆ ಇ.ಡಿ ದಾಳಿ

ತಿರುವನಂತಪುರ: ಸಿಎಂಆರ್‌ಎಲ್‌ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ ಇಂದು ಕೇರಳದ ಮಾಜಿ ಸಿಎಂ…

34 mins ago

ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ

ಬೆಂಗಳೂರು: ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸುವ ಸಾಧ್ಯತೆಗಳು ದಟ್ಟವಾಗಿವೆ. ಮೇ.29ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ನಡೆಯುವ…

1 hour ago

ಕಪಿಲಾ ತೀರದಲ್ಲಿ ಮುಂದುವರಿದ ಬಿಸಿ ನೀರಿನ ಸುಲಿಗೆ

ಎಸ್.ಎಸ್.ಭಟ್ ನಂಜನಗೂಡು: ಅಧಿಕಾರಿಗಳ ನೋಟಿಸ್‌ಗೂ ಕ್ಯಾರೆ ಎನ್ನದ ಶ್ರೀಕಂಠೇಶ್ವರ ದೇವಾಲಯದ ಸಿಬ್ಬಂದಿ ನಂಜನಗೂಡು: ಇಲ್ಲಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಾಲಯದ ಕಪಿಲಾ…

5 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಆಸಿಡ್ ದಾಳಿಯ ಸಂತ್ರಸ್ತೆಯರನ್ನು ಸಂತೈಸುವ ‘ದಿ ನೆಸ್ಟ್ ಸಲೂನ್’

ಬ್ಯೂಟಿ ಪಾರ್ಲರ್‌ಗಳನ್ನು ತೆರೆದು ಅದರಿಂದ ಬದುಕು ನಡೆಸಲು ತರಬೇತಿ ೨೦೧೪ರಲ್ಲಿ ದೆಹಲಿಯ ಅಂಶು ರಜಪೂತ್ ೧೫ ವರ್ಷದವಳಾಗಿದ್ದಾಗ ಎಂದಿನಂತೆ ತನ್ನ…

5 hours ago

ಜಿರಳೆಗಳು ಎದ್ದಿವೆ, ವ್ಯವಸ್ಥೆಯ ಗಟಾರ ತೊಳೆಯುವವರು ಯಾರು?

ಎಸ್.ಸಿ. ದಿನೇಶ್ ಕುಮಾರ್, ಹಿರಿಯ ಪತ್ರಕರ್ತರು ಕಾಕ್ರೋಚ್ ಜನತಾ ಪಾರ್ಟಿ ನಮ್ಮ ದೇಶದ ಯುವಜನರ ಹತಾಶೆ, ಸಿಟ್ಟು, ಆಕ್ರೋಶಕ್ಕೆ  ಹಿಡಿದ…

5 hours ago

ಅಕಾಲಿಕ ಮಳೆ; ಮಾವು ಇಳುವರಿ ಕುಂಠಿತ

ಚಿರಂಜೀವಿ ಸಿ. ಹುಲ್ಲಹಳ್ಳಿ ಬೆಳೆಗಾರ ಕಂಗಾಲು; ನಷ್ಟಕ್ಕೆ ಪರಿಹಾರ ಕಲ್ಪಿಸಲು ರೈತರ ಒತ್ತಾಯ ಮೈಸೂರು: ಮಳೆ ಕೊರತೆ ಮತ್ತು ಹವಾಮಾನ ವೈಪರೀತ್ಯದಿಂದಾಗಿ…

5 hours ago