ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರವು ಪರೀಕ್ಷೆ ನಡೆಸಿದ ಮರುದಿನವೇ ಯುಜಿಸಿ-ನೆಟ್ ಪರೀಕ್ಷೆಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.
ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರವು ಯುಜಿಸಿ ನೆಟ್ ಪರೀಕ್ಷೆಯಲ್ಲಿ ಅಕ್ರಮದ ಶಂಕೆ ವ್ಯಕ್ತಿಪಡಿಸಿ ಈ ಮಹತ್ವದ ನಿರ್ಧಾರ ತೆಗೆದುಕೊಂಡು, ಮರು ಪರೀಕ್ಷೆಗೆ ಆದೇಶಿಸಿದೆ.
ಕೇಂದ್ರ ಸರ್ಕಾರ ಯುಜಿಸಿ ನೆಟ್ ಅಕ್ರಮದ ಬಗ್ಗೆ ಸಿಬಿಐಗೆ ವಹಿಸಿದ್ದು, ಮರು ಮರು ಪರೀಕ್ಷೆಯ ದಿನಾಂಕವನ್ನು ಶೀಘ್ರವೆ ಪ್ರಕಟಿಸಲಾಗುವುದು ಎಂದು ಯುಜಿಸಿ ತಿಳಿಸಿದೆ.
ವಿಶ್ವವಿದ್ಯಾನಿಲಯಗಳು ಮತ್ತು ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕ, ಜೂನಿಯರ್ ಸಂಶೋಧನಾ ಪೇಲೊಶಿಪ್ ಹಾಗೂ ಪಿಎಚ್ಡಿ ಪದವಿಗೆ ಅರ್ಹತೆ ನಿರ್ಧರಿಸಲು ಜೂನ್ 18 ರಂದು ನಡೆದ ಈ ಪರೀಕ್ಷೆಯಲ್ಲಿ ಸುಮಾರು 11 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಹಾಜರಾಗಿದ್ದರು.
ಭಾರತೀಯ ಸೈಬರ್ ಕ್ರೈಮ್ ಕೋ ಆರ್ಡಿನೇಶನ್ ಸೆಂಟರ್ನ ರಾಷ್ಟ್ರೀಯ ಸೈಬರ್ ಕ್ರೈಮ್ ಥ್ರೆಟ್ ಅನಾಲಿಟಿಕ್ಸ್ ಯೂನಿಟ್ನಿಂದ ಪರೀಕ್ಷೆಯಲ್ಲಿ ಅಕ್ರಮ ನಡೆದಿರಬಹುದು ಎಂಬ ಮಾಹಿತಿಯನ್ನು ಪಡೆದ ನಂತರ ಶಿಕ್ಷಣ ಸಚಿವಾಲಯವು ಪರೀಕ್ಷೆಯನ್ನು ರದ್ದುಗೊಳಿಸಿದೆ ಎಂದು ತಿಳಿದುಬಂದಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…