ದೇಶ- ವಿದೇಶ

ಉಕ್ರೇನ್ ಸಂಘರ್ಷ ಬೇಗ ಕೊನೆಗೊಳ್ಳಲಿ : ರಷ್ಯಾ ಅಧ್ಯಕ್ಷ ಪುಟಿನ್ ಜೊತೆ ಮೋದಿ ದ್ವಿಪಕ್ಷೀಯ ಮಾತುಕತೆ

ಟಿಯಾಂಜಿನ್ : ಚೀನಾದ ಟಿಯಾಂಜಿನ್‌ನಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಸ್ಥೆ ಶೃಂಗಸಭೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸೋಮವಾರ ದ್ವಿಪಕ್ಷೀಯ ಸಭೆ ನಡೆಸಿದರು. ಈ ವೇಳೆ ಇಬ್ಬರೂ ನಾಯಕರು ಉಕ್ರೇನ್ ಹಾಗೂ ರಷ್ಯಾದ ನಡುವಿನ ಸಂಘರ್ಷ ಸೇರಿದಂತೆ ಪ್ರಮುಖ ಜಾಗತಿಕ ವಿಷಯಗಳ ಕುರಿತು ಚರ್ಚಿಸಿದರು. ಹಾಗೇ, ಪ್ರಧಾನಿ ಮೋದಿ ಮತ್ತು ಪುಟಿನ್ ತಮ್ಮ ದ್ವಿಪಕ್ಷೀಯ ಮಾತುಕತೆಯ ಸಮಯದಲ್ಲಿ ಭಾರತ-ರಷ್ಯಾ ಪಾಲುದಾರಿಕೆಯನ್ನು ಪುನರುಚ್ಚರಿಸಿದರು.

ಉಕ್ರೇನ್ ಬಿಕ್ಕಟ್ಟಿನ ಕುರಿತು ಮಾತನಾಡಿದ ಪ್ರಧಾನಿ ಮೋದಿ, ‘ನಾವು ಉಕ್ರೇನ್ ಬಗ್ಗೆ ಚರ್ಚಿಸುತ್ತಿದ್ದೇವೆ. ರಷ್ಯಾ ಮತ್ತು ಉಕ್ರೇನ್ ಎರಡೂ ದೇಶಗಳು ಶಾಂತಿಯನ್ನು ಸಾಧಿಸಲು ಮುಂದುವರಿಯಬೇಕೆಂದು ಆಶಿಸುತ್ತೇವೆ. ಈ ಸಂಘರ್ಷ ಆದಷ್ಟು ಬೇಗ ಕೊನೆಗೊಳ್ಳಬೇಕೆಂದು ಭಾರತ ಬಯಸುತ್ತದೆ. ಉಕ್ರೇನ್ ಮತ್ತು ರಷ್ಯಾದ ನಡುವೆ ಶಾಶ್ವತ ಶಾಂತಿಯನ್ನು ಕಂಡುಕೊಳ್ಳುವ ಮಾರ್ಗವು ಇಡೀ ಜಗತ್ತಿನ ಮಾನವೀಯತೆಯ ಕರೆಯಾಗಿದೆ’ ಎಂದು ಹೇಳಿದ್ದಾರೆ.

‘ಪುಟಿನ್ ಅವರೊಂದಿಗಿನ ಭೇಟಿ ಯಾವಾಗಲೂ ಸ್ಮರಣೀಯ. ಡಿಸೆಂಬರ್‌ನಲ್ಲಿ ಪುಟಿನ್ ಅವರು ಭಾರತಕ್ಕೆ ಭೇಟಿ ನೀಡುವುದನ್ನು ನಾವು ಕಾಯುತ್ತಿದ್ದೇವೆ’ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಈ ವರ್ಷ ಡಿಸೆಂಬರ್‌ನಲ್ಲಿ ನಡೆಯಲಿರುವ ೨೩ನೇ ಭಾರತ-ರಷ್ಯಾ ಶೃಂಗಸಭೆಗೆ ಪ್ರಧಾನಿ ಅಧ್ಯಕ್ಷ ಪುಟಿನ್ ಅವರಿಗೆ ಆತ್ಮೀಯ ಆಹ್ವಾನವನ್ನು ನೀಡಿದರು. ‘೧೪೦ ಕೋಟಿ ಭಾರತೀಯರು ನಿಮಗಾಗಿ ಕಾತರದಿಂದ ಕಾಯುತ್ತಿದ್ದಾರೆ’ ಎಂದು ಮೋದಿ ಹೇಳಿದರು.

‘ಕಷ್ಟದ ಸಮಯದಲ್ಲಿ ಕೂಡ ಭಾರತ ಮತ್ತು ರಷ್ಯಾ ಒಟ್ಟಾಗಿ ನಿಂತಿರುವುದು ನಮ್ಮ ವಿಶೇಷ. ಕಠಿಣ ಸಂದರ್ಭದಲ್ಲೂ ಎರಡೂ ದೇಶಗಳು ಹೆಗಲಿಗೆ ಹೆಗಲು ಕೊಟ್ಟು ನಿಂತಿದೆ’ ಎಂದು ಮೋದಿ ಹೇಳಿದ್ದಾರೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರಷ್ಯಾದ ತೈಲವನ್ನು ಖರೀದಿಸಿದ ಕಾರಣಕ್ಕೆ ಭಾರತದ ಮೇಲೆ ಹೆಚ್ಚಿನ ಸುಂಕ ಹೇಳಿದ ಬೆನ್ನಲ್ಲೇ ಭಾರತ ಮತ್ತು ರಷ್ಯಾ ತಮ್ಮ ದ್ವಿಪಕ್ಷೀಯ ಸಂಬಂಧವನ್ನು ಬಲಪಡಿಸುವ ಮಾತುಗಳನ್ನಾಡಿವೆ. ಅಮೆರಿಕವು ಭಾರತೀಯ ಸರಕುಗಳ ಮೇಲೆ ಶೇ. ೫೦ರಷ್ಟು ಸುಂಕವನ್ನು ವಿಽಸಿದೆ. ಇದರಲ್ಲಿ ಮಾಸ್ಕೋದಿಂದ ರಿಯಾಯಿತಿ ದರದಲ್ಲಿ ಕಚ್ಚಾ ತೈಲವನ್ನು ಖರೀದಿಸುವುದಕ್ಕೆ ಶೇ. ೨೫ರಷ್ಟು ದಂಡವೂ ಸೇರಿದೆ.

ತತ್ವಾಧಾರಿತ ಸಂಬಂಧ
‘ನಮ್ಮ ಸಂಬಂಧವು ತತ್ವಗಳನ್ನು ಆಧರಿಸಿದೆ ಎಂದು ನಾವು ಹೇಳಬಹುದು. ನಮ್ಮ ನಡುವೆ ಬಹುಮುಖಿ ಸಹಕಾರವಿದೆ. ಇಂದಿನ ಸಭೆಯು ನಮ್ಮ ಸಂಬಂಧಗಳನ್ನು ಮತ್ತಷ್ಟು ಬಲಪಡಿಸಲು ಮತ್ತೊಂದು ಉತ್ತಮ ಅವಕಾಶವಾಗಿದೆ. ರಷ್ಯಾ ಮತ್ತು ಭಾರತದ ನಡುವೆ ಅತ್ಯಂತ ವಿಶ್ವಾಸಾರ್ಹ ಸಂಬಂಧವಿದೆ, ಅದು ರಾಜಕೀಯವನ್ನು ಆಧರಿಸಿಲ್ಲ’ ಎಂದು ಪುಟಿನ್ ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕಾರ್ಮಿಕರ ಮೇಲೆ ಕಾಡಾನೆ ದಾಳಿ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…

2 hours ago

ಕಾವೇರಿ ವನ್ಯಜೀವಿಧಾಮದಲ್ಲಿ ಎನ್‌ಕೌಂಟರ್: ಮೃತ 3 ಕುಟುಂಬಗಳಿಗೆ ಶಾಸಕ ಎಂ.ಆರ್. ಮಂಜುನಾಥ್ 15 ಲಕ್ಷ ಪರಿಹಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…

2 hours ago

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

3 hours ago

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

6 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

6 hours ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

6 hours ago