ದೇಶ- ವಿದೇಶ

ರಷ್ಯಾ ಮೇಲೆ ಉಕ್ರೇನ್‌ ಪ್ರತಿದಾಳಿ : ತೈಲ ಪೈಪ್‌ಲೈನ್‌ ನಾಶ

ಮಾಸ್ಕೊ : ರಷ್ಯಾ ನಡೆಸಿದ ಭೀಕರ ವಾಯುದಾಳಿಗೆ ಉಕ್ರೇನ್‌ ಪ್ರತಿದಾಳಿ ನಡೆಸಿದ್ದು, ರಷ್ಯಾದ ಬ್ರಿಯಾನ್ಸ್ಕ್‌ ಪ್ರದೇಶದಲ್ಲಿನ ಡ್ರುಜ್ಬಾ ತೈಲ ಪೈಪ್‌ಲೈನ್‌ ಮೇಲೆ ದಾಳಿ ಮಾಡಿದೆ. ಇದು ಭಾರೀ ಪ್ರಮಾಣದಲ್ಲಿ ಹಾನಿಯಾಗಿದೆ ಎಂದು ಉಕ್ರೇನ್‌ ಸೇನಾಪಡೆಗಳು ತಿಳಿಸಿವೆ.

ಒಂದು ದಿನದ ಹಿಂದಷ್ಟೇ ರಷ್ಯಾ-ಉಕ್ರೇನ್‌ ಮೇಲೆ ಭೀಕರ ವಾಯುದಾಳಿ ನಡೆಸಿತ್ತು. ಬರೋಬ್ಬರಿ 800 ಡ್ರೋನ್‌, 4 ಖಂಡಾಂತರ ಕ್ಷಿಪಣಿ ಸೇರಿದಂತೆ 13 ಮಿಸೈಲ್‌ಗಳಿಂದ ದಾಳಿ ನಡೆಸಿತ್ತು. ಇದರಿಂದ ಕೈವ್‌ನ ಪೆಚೆರ್ಸ್ಕಿ ಆಡಳಿತ ಕಚೇರಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು ಎಂದು ಮಿಲಿಟರಿ ಆಡಳಿತದ ಮುಖ್ಯಸ್ಥ ತಿಮರ್ ಟ್ಕಾಚೆಂಕೊ ಭಾನುವಾರ ತಿಳಿಸಿದ್ದಾರೆ. ಅಲ್ಲದೇ ರಷ್ಯಾದ ದಾಳಿಯಿಂದ ಸರ್ಕಾರಿ ಕಟ್ಟಡಗಳು ಹಾನಿಗೆ ಒಳಗಾಗಿರುವುದು ಇದೇ ಮೊದಲು ಎಂದೂ ಅವರು ಹೇಳಿದ್ದಾರೆ. ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಕೂಡ ಈ ಬಗ್ಗೆ ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ರಷ್ಯಾ 800ಕ್ಕೂ ಹೆಚ್ಚು ಡ್ರೋನ್‌ಗಳು 13 ಕ್ಷಿಪಣಿಗಳನ್ನು ಹಾರಿಸಿದೆ ಎಂದು ಖಚಿತಪಡಿಸಿದ್ದಾರೆ.

ಪ್ರತಿದಿನ, ನಮ್ಮ ಜನರು ಸಾಧ್ಯವಾದಷ್ಟು ಹೆಚ್ಚಿನ ಸೇವೆ ಮಾಡುತ್ತಿದ್ದಾರೆ. ಶತ್ರುಗಳ ದೌರ್ಬಲ್ಯ ಕಂಡುಕೊಂಡು, ಪ್ರತಿದಾಳಿ ನಡೆಸುತ್ತಿದ್ದಾರೆ. ಒಂದೆಡೆ ನಮ್ಮ ದೇಶವನ್ನು ಬಲಪಡಿಸುತ್ತಾ, ಮತ್ತೊಂದು ಕಡೆ ಆಕ್ರಮಣಕಾರರನ್ನ ದುರ್ಬಲಗೊಳಿಸುತ್ತಿದ್ದಾರೆ. ನಿಮ್ಮ ಧೈರ್ಯ, ಸಾಹಸ, ದೇಶ ಭಕ್ತಿಗೆ ಧನ್ಯವಾದಗಳು ಎಂದು ಎಕ್ಸ್‌ನಲ್ಲಿ ಸಂದೇಶ ಹಂಚಿಕೊಂಡಿದ್ದಾರೆ. ಇನ್ನೂ ರಷ್ಯಾದ ದಾಳಿಯಿಂದ ಕೈವ್‌ನಲ್ಲಿ ಒಂದು ಮಗು ಸೇರಿ ಮೂವರು ಸಾವನ್ನಪ್ಪಿದ್ದಾರೆ. 18 ಮಂದಿ ಗಾಯಗೊಂಡಿದ್ದಾರೆ. ಹಲವು ಕಟ್ಟಡಗಳು ಹಾನಿಗೆ ಒಳಗಾಗಿದ್ದು, ಇದರಲ್ಲಿ ಸರ್ಕಾರಿ ಕಟ್ಟಡಗಳೂ ಸೇರಿವೆ ಎಂದು ಉಕ್ರೇನಿಯನ್ ಅಧಿಕಾರಿಗಳು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಶಿವಾಜಿ ಗಣೇಶನ್‌ ಅವರ ದೆಹಲಿ ಕಣ್ಣೋಟ | ರಾಮಮಂದಿರ ಅಕ್ರಮ ಮಂಕಾಗಿಸಿದ ಬಿಜೆಪಿ ಭವಿಷ್ಯ

ಧಾರ್ಮಿಕ ಶ್ರದ್ಧಾ ಕೇಂದ್ರಗಳ ಬಗೆಗೆ ಭಕ್ತರು ಭಕ್ತಿಯಿಂದ ನಡೆದುಕೊಳ್ಳುವುದು ಮಾತ್ರವಲ್ಲ, ತಮ್ಮ ಇಚ್ಛೆಯ ಈಡೇರಿಕೆಗಾಗಿ ಹರಕೆ ಹೊತ್ತವರು , ದಾನ…

1 hour ago

ಭಾನುವಾರದ ಹಾಡುಪಾಡು | ಈಗ ಕೇರಳದಲ್ಲೂ ಫ್ರೀ ಬಸ್ ಪ್ರಿಯದರ್ಶಿನಿ

ಕೇರಳಂ ಎಂಬ ಈ ಸ್ತ್ರೀ ರಾಜ್ಯದ ಮಹಿಳೆಯರು ಉಚಿತ ಪ್ರಯಾಣದ ಸಂಪೂರ್ಣ ಸುಖವನ್ನು ಪಡೆಯುತ್ತಿದ್ದಾರೆ. ಈ ಸುಖ ಕ್ಷಣಿಕವೋ, ಶಾಶ್ವತವೋ…

2 hours ago

ಭಾನುವಾರದ ಹಾಡುಪಾಡು | ಕೊಡಗು ಕಾಡಿನ ಆ ಕಾಲದ ಮಳೆಗಾಲ ವೈಭವ

ಕೃಪಾ ದೇವರಾಜ್, ಮಡಿಕೇರಿ ಧೋ... ಎಂದು ಸುರಿಯುವ ಮಳೆ, ಅಜ್ಜ ಕಟ್ಟಿದ ಹಳೇ ನಾಡ ಹೆಂಚಿನ ಮನೆ, ನಿರಂತರವಾಗಿ ಸುರಿಯುವ…

3 hours ago

ಭಾನುವಾರದ ಹಾಡುಪಾಡು | ಹತ್ತನೆಯ ಸಾಹಿತ್ಯ ಸಂಭ್ರಮದ ಹೊತ್ತಲ್ಲಿ ಹದಿನಾರರ ಹರಯದ ಬುಕ್ ಕ್ಲಬ್ ಕುರಿತು

ಜುಲೈ ನಾಲ್ಕು ಮತ್ತು ಐದರ ಶನಿವಾರ ಮತ್ತು ಭಾನುವಾರ ಮೈಸೂರಿನ ಸದರ್ನ್ ಸ್ಟಾರ್‌ನಲ್ಲಿ ವಾರ್ಷಿಕ ಸಾಹಿತ್ಯ ರಸದೂಟ ಪೃಥ್ವಿ ಸುಧೀಂದ್ರ…

3 hours ago

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

19 hours ago

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

21 hours ago