ದೇಶ- ವಿದೇಶ

ನೇಪಾಳದಲ್ಲಿ ಭೂಕಂಪ: 6 ಮಂದಿ ಸಾವು

ಕಠ್ಮಂಡು : ನೇಪಾಳದಲ್ಲಿ ಮಂಗಳವಾರ ತಡರಾತ್ರಿ ಸಂಭವಿಸಿದ 6.6 ತೀವ್ರತೆಯ ಭೂಕಂಪದಿಂದಾಗಿ 6 ಮಂದಿ ಮೃತಪಟ್ಟಿದ್ದಾರೆ. ಪಶ್ಚಿಮ ನೇಪಾಳದ ದೋತಿ ಜಿಲ್ಲೆಯಲ್ಲಿ ಹೆಚ್ಚಿನ ಅವಘಡ ಸಂಭವಿಸಿದ್ದು, ಹಲವು ಮನೆ ಮತ್ತು ಕಟ್ಟಡಗಳು ಕುಸಿದು ಬಿದ್ದಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಭೂಕಂಪದಿಂದಾಗಿ ಕುಸಿದ ಕಟ್ಟಡಗಳಲ್ಲಿ ಸಿಲುಕಿದ್ದವರ ಪೈಕಿ ಐವರು ಗಂಭೀರವಾಗಿ ಗಾಯಗೊಂಡಿದ್ದು ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದಂತೆ ರಕ್ಷಣಾ ಮತ್ತು ಪರಿಹಾರ ಕಾರ್ಯಚರಣೆ ಮುಂದುವರಿದಿದೆ ಎಂದು ನೇಪಾಳದ ಗೃಹ ಸಚಿವಾಲಯದ ಅಧಿಕಾರಿ ತುಳಸಿ ರಿಜಾಲ್ ತಿಳಿಸಿದ್ದಾರೆ. 2015ರಲ್ಲಿ ನೇಪಾಳದಲ್ಲಿ ಸಂಭವಿಸಿದ್ದ ಎರಡು ಭೀಕರ ಭೂಕಂಪದಲ್ಲಿ ಸುಮಾರು 9000 ಜನರು ಮೃತಪಟ್ಟಿದ್ದರು.

andolana

Recent Posts

ಶ್ರೀ ಮುತ್ತಪ್ಪ ಭಗವತಿ ದೇವಾಲಯದ ವಾರ್ಷಿಕೋತ್ಸವಕ್ಕೆ ತೆರೆ

ಸಿದ್ದಾಪುರ: ಇಲ್ಲಿನ ಶ್ರೀ ಮುತ್ತಪ್ಪ ದೇವಾಲಯದ 51ನೇ ವರ್ಷದ ಹಾಗೂ ಭಗವತಿ ದೇವಾಲಯದ 25ನೇ ವಾರ್ಷಿಕೋತ್ಸವವು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ…

7 hours ago

ಹನೂರು| ಆಕಸ್ಮಿಕ ಬೆಂಕಿ ತಗುಲಿ ಜೋಳದ ಮೆದೆ ಸಂಪೂರ್ಣ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲ್ಲೂಕಿನ ಮೂಗೆಗೌಡದೊಡ್ಡಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಜೋಳದ ಮೆದೆ…

7 hours ago

ಗಾಂಜಾ ಮಾರಾಟ, ಸೇವನೆ: ಪ್ರತ್ಯೇಕ ಪ್ರಕರಣದಲ್ಲಿ ನಾಲ್ವರ ಬಂಧನ

ಸಿದ್ದಾಪುರ: ನಿಷೇದಿತ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಗೆ ಸಂಬಂಧಿಸಿದಂತೆ ಪ್ರತ್ಯೇಕ ಪ್ರಕರಣಗಳಲ್ಲಿ ಇಲ್ಲಿನ ಪೊಲೀಸರು ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…

7 hours ago

ಹನೂರು| ತಾಲ್ಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ: ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವ ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ…

7 hours ago

ಟಿ.ನರಸೀಪುರ: ಕೆಎಸ್‌ಐಸಿ ಫ್ಯಾಕ್ಟರಿ ಆವರಣದಲ್ಲಿ ಸ್ಟೇಡಿಯಂ ನಿರ್ಮಿಸುವ ಪ್ರಸ್ತಾವನೆ: ಬೀದಿಗಿಳಿದ ಕಾರ್ಮಿಕರು

ಟಿ.ನರಸೀಪುರ: ಟಿ.ನರಸೀಪುರದಲ್ಲಿರುವ ಕೆಎಸ್‌ಐಸಿ ಫಿಲೇಚರ್‌ ಫ್ಯಾಕ್ಟರಿ ಆವರಣದ ಐದು ಎಕರೆ ಜಾಗದಲ್ಲಿ ಕ್ರೀಡಾಂಗಣ ನಿರ್ಮಿಸುವ ಪ್ರಸ್ತಾವನೆಗೆ ವಿರೋಧ ವ್ಯಕ್ತವಾಗಿದೆ. ಇಂದು…

7 hours ago

ಕೇರಳ ಇನ್ನು ಮುಂದೆ ಕೇರಳಂ: ಹೆಸರು ಬದಲಾವಣೆಗೆ ಕೇಂದ್ರ ಸರ್ಕಾರ ಅಸ್ತು

ನವದೆಹಲಿ: ಕೇರಳ ರಾಜ್ಯದ ಹೆಸರನ್ನು ಅಧಿಕೃತವಾಗಿ ಕೇರಳಂ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಹಸಿರು ನಿಶಾನೆ…

8 hours ago