Mysore
28
few clouds

Social Media

ಬುಧವಾರ, 11 ಮಾರ್ಚ್ 2026
Light
Dark

ಹೊರ್ಮುಜ್‌ನಲ್ಲಿ ಹಡಗುಯಾನ ಅಡಚಣೆ : ಎಲ್ಲ ದೇಶಗಳಿಗೆ ಎಚ್ಚರಿಕೆ ನೀಡಿದ ವಿಶ್ವಸಂಸ್ಥೆ

ವಿಶ್ವಸಂಸ್ಥೆ : ಪಶ್ಚಿಮ ಏಷ್ಯಾ ಸಂಘರ್ಷದ ಹಿನ್ನೆಲೆಯಲ್ಲಿ ಹೊರ್ಮುಜ್ ಜಲಸಂಧಿ ಮುಚ್ಚಿದರೆ ಜಾಗತಿಕ ವ್ಯಾಪಾರ ಮತ್ತು ಅಭಿವೃದ್ಧಿ ಕುಂಠಿತದ ಜೊತೆಗೆ ಆಹಾರದ ಬೆಲೆ ತೀವ್ರ ಏರಿಕೆ ಮತ್ತು ಜೀವನ ವೆಚ್ಚ ಹೆಚ್ಚಳದ ಕುರಿತಂತೆ ವಿಶ್ವಸಂಸ್ಥೆಯು ಎಲ್ಲ ದೇಶಗಳನ್ನು ಎಚ್ಚರಿಸಿದೆ.

ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಗಳು ಹಾಗೂ ಇರಾನ್ನ ಪ್ರತೀಕಾರದಿಂದಾಗಿ ಈ ಪ್ರದೇಶದಲ್ಲಿ ನಡೆಯುತ್ತಿರುವ ಮಿಲಿಟರಿ ಸಂಘರ್ಷವು ವಿಶ್ವದ ಅತ್ಯಂತ ನಿರ್ಣಾಯಕ ಕಡಲ ಮಾರ್ಗಗಳಲ್ಲಿ ಒಂದಾದ ಹೊರ್ಮುಜ್ ಜಲಸಂಧಿಯಲ್ಲಿ ಹಡಗುಗಳ ಸಂಚಾರಕ್ಕೆ ಅಡ್ಡಿಪಡಿಸಿದೆ ಎಂದು ವಿಶ್ವಸಂಸ್ಥೆಯ ವ್ಯಾಪಾರ ಮತ್ತು ಅಭಿವೃದ್ಧಿ ಸಮ್ಮೇಳನದ ವರದಿಯಲ್ಲಿ ತಿಳಿಸಿದೆ.

ಈ ಜಲಮಾರ್ಗದಲ್ಲಿ ಜಾಗತಿಕ ಸಮುದ್ರ ಮಾರ್ಗದ ತೈಲ ವ್ಯಾಪಾರದ ಕಾಲು ಭಾಗದಷ್ಟು ಮತ್ತು ದ್ರವೀಕೃತ ನೈಸರ್ಗಿಕ ಅನಿಲ ಹಾಗೂ ರಸಗೊಬ್ಬರ ಗಮನಾರ್ಹ ಪ್ರಮಾಣದಲ್ಲಿ ಸರಬರಾಜಾಗುತ್ತದೆ. ಇದನ್ನು ಮುಚ್ಚುವಿಕೆಯಿಂದ ಇಂಧನ ಮಾರುಕಟ್ಟೆಗಳು, ಕಡಲ ಸಾರಿಗೆ ಮತ್ತು ಜಾಗತಿಕ ಪೂರೈಕೆ ಸರಪಳಿಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ವರದಿ ಹೇಳಿದೆ.

 

Tags:
error: Content is protected !!