ಮುಂಬೈ: 2001ರಲ್ಲಿ ಮಹಾರಾಷ್ಟ್ರ ಮೂಲದ ಹೋಟೆಲ್ ಉದ್ಯಮಿ ಜಯಶೆಟ್ಟಿ ಕೊಲೆ ಪ್ರಕರಣದಲ್ಲಿ ಭೂಗತ ಪಾತಕಿ ಛೋಟಾ ರಾಜನ್ಗೆ ಮುಂಬೈನ ವಿಶೇಷ ನ್ಯಾಯಾಲಯ ಇಂದು(ಮೇ.30) ಜೀವಾವಧಿ ಶಿಕ್ಷೆ ವಿಧಿಸಿದೆ.
ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆಯಡಿ ಸ್ಥಾಪಿತವಾಗಿರುವ ನ್ಯಾಯಾಲಯದ ನ್ಯಾಯಾಧೀಶ ಎಂ.ಎಂ ಪಾಟೀಲ್ ಅವರು 23 ವರ್ಷಗಳ ಹಿಂದೆ ನಡೆದ ಹತ್ಯೆಗೆ ಸಂಬಂಧಿಸಿದಂತೆ ಛೋಟಾ ರಾಜನ್ ಅಪರಾಧಿ ಎಂದು ಘೋಷಿಸಿದ್ದಾರೆ.
ಕೊಲೆಯಾಗಿದ್ದ ಜಯಶೆಟ್ಟಿ ಪ್ರಸಿದ್ಧ ಗೋಲ್ಡನ್ ಕ್ರೌನ್ ಹೋಟೆಲ್ನ ಮಾಲೀಕನಾಗಿದ್ದ. 2001 ಮೇ 4ರ ರಾತ್ರಿ ಛೋಟಾ ರಾಜನ್ ಅವರ ಇಬ್ಬರು ಶೂಟರ್ಗಳು ಹೋಟೆಲ್ ಆವರಣದಲ್ಲಿ ಜಯಶೆಟ್ಟಿಯನ್ನು ಕೊಲೆ ಮಾಡಿದ್ದರು.
ಛೋಟಾ ರಾಜನ್ ಸಹಚರರಿಂದ ಸುಲಿಗೆ, ಬೆದರಿಕೆ ಕರೆಗಳು ಬರುತ್ತಿವೆ ಎಂದು ಜಯಶೆಟ್ಟಿ ದೂರು ನೀಡಿ, ಪೊಲೀಸ್ ಭದ್ರತೆಯನ್ನು ಸಹ ಪಡೆದಿದ್ದರು. ನಂತರ ಅವರು ಪೊಲೀಸ್ ಭದ್ರತೆಯನ್ನು ಹಿಂತಿರುಗಿಸಿದ್ದರು. ಭದ್ರತೆ ಹಿಂತೆಗೆದುಕೊಂಡ ಎರಡು ತಿಂಗಳ ನಂತರ ಅವರು ಹತ್ಯೆಯಾಗಿದ್ದರು.
ಛೋಟಾ ರಾಜನ್ ಪ್ರಸ್ತುತ ಪರ್ತಕರ್ತ ಜೆ.ಡೇ ಅವರ ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿ ತಿಹಾರ್ ಜೈಲಿನಲ್ಲಿದ್ದಾರೆ.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…