ಮುಂಬೈ: 2001ರಲ್ಲಿ ಮಹಾರಾಷ್ಟ್ರ ಮೂಲದ ಹೋಟೆಲ್ ಉದ್ಯಮಿ ಜಯಶೆಟ್ಟಿ ಕೊಲೆ ಪ್ರಕರಣದಲ್ಲಿ ಭೂಗತ ಪಾತಕಿ ಛೋಟಾ ರಾಜನ್ಗೆ ಮುಂಬೈನ ವಿಶೇಷ ನ್ಯಾಯಾಲಯ ಇಂದು(ಮೇ.30) ಜೀವಾವಧಿ ಶಿಕ್ಷೆ ವಿಧಿಸಿದೆ.
ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆಯಡಿ ಸ್ಥಾಪಿತವಾಗಿರುವ ನ್ಯಾಯಾಲಯದ ನ್ಯಾಯಾಧೀಶ ಎಂ.ಎಂ ಪಾಟೀಲ್ ಅವರು 23 ವರ್ಷಗಳ ಹಿಂದೆ ನಡೆದ ಹತ್ಯೆಗೆ ಸಂಬಂಧಿಸಿದಂತೆ ಛೋಟಾ ರಾಜನ್ ಅಪರಾಧಿ ಎಂದು ಘೋಷಿಸಿದ್ದಾರೆ.
ಕೊಲೆಯಾಗಿದ್ದ ಜಯಶೆಟ್ಟಿ ಪ್ರಸಿದ್ಧ ಗೋಲ್ಡನ್ ಕ್ರೌನ್ ಹೋಟೆಲ್ನ ಮಾಲೀಕನಾಗಿದ್ದ. 2001 ಮೇ 4ರ ರಾತ್ರಿ ಛೋಟಾ ರಾಜನ್ ಅವರ ಇಬ್ಬರು ಶೂಟರ್ಗಳು ಹೋಟೆಲ್ ಆವರಣದಲ್ಲಿ ಜಯಶೆಟ್ಟಿಯನ್ನು ಕೊಲೆ ಮಾಡಿದ್ದರು.
ಛೋಟಾ ರಾಜನ್ ಸಹಚರರಿಂದ ಸುಲಿಗೆ, ಬೆದರಿಕೆ ಕರೆಗಳು ಬರುತ್ತಿವೆ ಎಂದು ಜಯಶೆಟ್ಟಿ ದೂರು ನೀಡಿ, ಪೊಲೀಸ್ ಭದ್ರತೆಯನ್ನು ಸಹ ಪಡೆದಿದ್ದರು. ನಂತರ ಅವರು ಪೊಲೀಸ್ ಭದ್ರತೆಯನ್ನು ಹಿಂತಿರುಗಿಸಿದ್ದರು. ಭದ್ರತೆ ಹಿಂತೆಗೆದುಕೊಂಡ ಎರಡು ತಿಂಗಳ ನಂತರ ಅವರು ಹತ್ಯೆಯಾಗಿದ್ದರು.
ಛೋಟಾ ರಾಜನ್ ಪ್ರಸ್ತುತ ಪರ್ತಕರ್ತ ಜೆ.ಡೇ ಅವರ ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿ ತಿಹಾರ್ ಜೈಲಿನಲ್ಲಿದ್ದಾರೆ.
ಮುಖ್ಯಮಂತ್ರಿಗಳಾದ ಕೆಲವೇ ದಿನಗಳಲ್ಲಿ ಡಿ.ಕೆ.ಶಿವಕುಮಾರ್ ಅವರು ಸರ್ಕಾರಿ ಅಧಿಕಾರಿಗಳು, ನೌಕರರು ಹಾಗೂ ಸಿಬ್ಬಂದಿಗಳು ಬೆಳಿಗ್ಗೆ ೧೦ ಗಂಟೆಗೆ ಹಾಜರಾತಿ ದಾಖಲಿಸುವಂತೆ…
ಸರ್ಕಾರಿ ಶಾಲೆಗಳಿಗೆ ಮಕ್ಕಳು ಬರುತ್ತಿಲ್ಲ ಅಂತ ನೆಪ ಹೇಳಿ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿರುವುದು ಸರಿಯಲ್ಲ. ಖಾಸಗಿ ಶಾಲೆಗಳಲ್ಲಿ ಪ್ರವೇಶ…
ರಾಜ್ಯದಲ್ಲಿ ಕ್ರಿಕೆಟ್ ಗೀಳಿನ ಅಬ್ಬರದಲ್ಲಿ ಫುಟ್ಬಾಲ್ ಕ್ರೀಡೆ ಧೂಳೀಪಟ ವಾಗುತ್ತಿರುವುದು ಅತ್ಯಂತ ಆಘಾತಕಾರಿ. ಶೇ. ೯೦ ಕ್ಕೂ ಹೆಚ್ಚು ಫುಟ್ಬಾಲ್…
ಇಂದು ಜಗತ್ತಿಗೆ ಗಾಂಧಿ ಚಿಂತನೆ ಹೆಚ್ಚು ಪ್ರಸ್ತುತ: ಗಾಂಧಿ ಎಂದರೆ ಕೇವಲ ಇತಿಹಾಸದ ಪುಟಗಳಲ್ಲಿ ಉಳಿದಿರುವ ಸ್ವಾತಂತ್ರ್ಯ ಹೋರಾಟಗಾರ ಮಾತ್ರ ಅಲ್ಲ. ಸದಾ…
ಡಾ.ರಹಮತ್ ತರೀಕೆರೆ ಕರ್ನಾಟಕದಲ್ಲಿ ಗಾಂಧಿಗೆ ಸಂಬಂಧಿಸಿದಂತೆ ಪರಸ್ಪರ ವಿರುದ್ಧವೆನಿಸುವ ವಿದ್ಯಮಾನಗಳು ಜರುಗುತ್ತಿವೆ. ಉದಾ ಹರಣೆಗೆ- ೧. ಗಾಂಧಿ ಹಂತಕ ಗೋಡ್ಸೆ ಮತ್ತು…
ಗಾಂಧಿ ಅಭಿಯಾನ ಅರಿವಿನ ಯಾನ ನಾನು ಮೊದಲೇ ಹೇಳಿರುವಂತೆ, ನಮ್ಮ ತಂದೆ ಭಗಂದರ ರೋಗದಿಂದ ನರಳುತ್ತಿದ್ದರು. ಅವರ ಶುಶ್ರೂಷೆಯ ಅಧಿಕಾಂಶದ ಹೊರೆ…