ಮುಂಬೈ: 2001ರಲ್ಲಿ ಮಹಾರಾಷ್ಟ್ರ ಮೂಲದ ಹೋಟೆಲ್ ಉದ್ಯಮಿ ಜಯಶೆಟ್ಟಿ ಕೊಲೆ ಪ್ರಕರಣದಲ್ಲಿ ಭೂಗತ ಪಾತಕಿ ಛೋಟಾ ರಾಜನ್ಗೆ ಮುಂಬೈನ ವಿಶೇಷ ನ್ಯಾಯಾಲಯ ಇಂದು(ಮೇ.30) ಜೀವಾವಧಿ ಶಿಕ್ಷೆ ವಿಧಿಸಿದೆ.
ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆಯಡಿ ಸ್ಥಾಪಿತವಾಗಿರುವ ನ್ಯಾಯಾಲಯದ ನ್ಯಾಯಾಧೀಶ ಎಂ.ಎಂ ಪಾಟೀಲ್ ಅವರು 23 ವರ್ಷಗಳ ಹಿಂದೆ ನಡೆದ ಹತ್ಯೆಗೆ ಸಂಬಂಧಿಸಿದಂತೆ ಛೋಟಾ ರಾಜನ್ ಅಪರಾಧಿ ಎಂದು ಘೋಷಿಸಿದ್ದಾರೆ.
ಕೊಲೆಯಾಗಿದ್ದ ಜಯಶೆಟ್ಟಿ ಪ್ರಸಿದ್ಧ ಗೋಲ್ಡನ್ ಕ್ರೌನ್ ಹೋಟೆಲ್ನ ಮಾಲೀಕನಾಗಿದ್ದ. 2001 ಮೇ 4ರ ರಾತ್ರಿ ಛೋಟಾ ರಾಜನ್ ಅವರ ಇಬ್ಬರು ಶೂಟರ್ಗಳು ಹೋಟೆಲ್ ಆವರಣದಲ್ಲಿ ಜಯಶೆಟ್ಟಿಯನ್ನು ಕೊಲೆ ಮಾಡಿದ್ದರು.
ಛೋಟಾ ರಾಜನ್ ಸಹಚರರಿಂದ ಸುಲಿಗೆ, ಬೆದರಿಕೆ ಕರೆಗಳು ಬರುತ್ತಿವೆ ಎಂದು ಜಯಶೆಟ್ಟಿ ದೂರು ನೀಡಿ, ಪೊಲೀಸ್ ಭದ್ರತೆಯನ್ನು ಸಹ ಪಡೆದಿದ್ದರು. ನಂತರ ಅವರು ಪೊಲೀಸ್ ಭದ್ರತೆಯನ್ನು ಹಿಂತಿರುಗಿಸಿದ್ದರು. ಭದ್ರತೆ ಹಿಂತೆಗೆದುಕೊಂಡ ಎರಡು ತಿಂಗಳ ನಂತರ ಅವರು ಹತ್ಯೆಯಾಗಿದ್ದರು.
ಛೋಟಾ ರಾಜನ್ ಪ್ರಸ್ತುತ ಪರ್ತಕರ್ತ ಜೆ.ಡೇ ಅವರ ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿ ತಿಹಾರ್ ಜೈಲಿನಲ್ಲಿದ್ದಾರೆ.
೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…
ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…
ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…
‘ಸಪೋರ್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್ವೇ ಯೋಜನೆಗೆ ವೇಗ ದೊರೆತಿದೆ.…
ಕೆ.ಬಿ.ರಮೇಶನಾಯಕ ಮೈಸೂರು: ಹಲವು ರೋಗಗಳಿಗೆ ರಾಮಬಾಣವಾದ ಹಾಗೂ ಆರೋಗ್ಯಕ್ಕೆ ಹಿತಕರ ಎನ್ನಲಾಗಿರುವ ಮೀನು ಆಹಾರವನ್ನು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಮಾಡಲು…