ಮುಂಬೈ: 2001ರಲ್ಲಿ ಮಹಾರಾಷ್ಟ್ರ ಮೂಲದ ಹೋಟೆಲ್ ಉದ್ಯಮಿ ಜಯಶೆಟ್ಟಿ ಕೊಲೆ ಪ್ರಕರಣದಲ್ಲಿ ಭೂಗತ ಪಾತಕಿ ಛೋಟಾ ರಾಜನ್ಗೆ ಮುಂಬೈನ ವಿಶೇಷ ನ್ಯಾಯಾಲಯ ಇಂದು(ಮೇ.30) ಜೀವಾವಧಿ ಶಿಕ್ಷೆ ವಿಧಿಸಿದೆ.
ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆಯಡಿ ಸ್ಥಾಪಿತವಾಗಿರುವ ನ್ಯಾಯಾಲಯದ ನ್ಯಾಯಾಧೀಶ ಎಂ.ಎಂ ಪಾಟೀಲ್ ಅವರು 23 ವರ್ಷಗಳ ಹಿಂದೆ ನಡೆದ ಹತ್ಯೆಗೆ ಸಂಬಂಧಿಸಿದಂತೆ ಛೋಟಾ ರಾಜನ್ ಅಪರಾಧಿ ಎಂದು ಘೋಷಿಸಿದ್ದಾರೆ.
ಕೊಲೆಯಾಗಿದ್ದ ಜಯಶೆಟ್ಟಿ ಪ್ರಸಿದ್ಧ ಗೋಲ್ಡನ್ ಕ್ರೌನ್ ಹೋಟೆಲ್ನ ಮಾಲೀಕನಾಗಿದ್ದ. 2001 ಮೇ 4ರ ರಾತ್ರಿ ಛೋಟಾ ರಾಜನ್ ಅವರ ಇಬ್ಬರು ಶೂಟರ್ಗಳು ಹೋಟೆಲ್ ಆವರಣದಲ್ಲಿ ಜಯಶೆಟ್ಟಿಯನ್ನು ಕೊಲೆ ಮಾಡಿದ್ದರು.
ಛೋಟಾ ರಾಜನ್ ಸಹಚರರಿಂದ ಸುಲಿಗೆ, ಬೆದರಿಕೆ ಕರೆಗಳು ಬರುತ್ತಿವೆ ಎಂದು ಜಯಶೆಟ್ಟಿ ದೂರು ನೀಡಿ, ಪೊಲೀಸ್ ಭದ್ರತೆಯನ್ನು ಸಹ ಪಡೆದಿದ್ದರು. ನಂತರ ಅವರು ಪೊಲೀಸ್ ಭದ್ರತೆಯನ್ನು ಹಿಂತಿರುಗಿಸಿದ್ದರು. ಭದ್ರತೆ ಹಿಂತೆಗೆದುಕೊಂಡ ಎರಡು ತಿಂಗಳ ನಂತರ ಅವರು ಹತ್ಯೆಯಾಗಿದ್ದರು.
ಛೋಟಾ ರಾಜನ್ ಪ್ರಸ್ತುತ ಪರ್ತಕರ್ತ ಜೆ.ಡೇ ಅವರ ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿ ತಿಹಾರ್ ಜೈಲಿನಲ್ಲಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…