ದೇಶ- ವಿದೇಶ

Union Budget 2025| ದೇಶದ ಕೃಷಿ, ಕೈಗಾರಿಕೆ ಹೆಚ್ಚಿನ ಆದ್ಯತೆ: ಯುವಜನ, ಮಹಿಳೆಯರು, ಬಡವರಿಗೆ ಪ್ರಯೋಜನ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಬಜೆಟ್‌ ಮಂಡಿಸಿದ್ದು, ನಮ್ಮ ಸರ್ಕಾರ ಈ ಬಜೆಟ್‌ನಲ್ಲಿ ದೇಶದ ಕೃಷಿ, ಕೈಗಾರಿಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಸಂಸತ್‌ ಭವನದಲ್ಲಿ ಇಂದು(ಫೆಬ್ರವರಿ.1) ವಿತ್ತ ಸಚಿವೆ ಬಜೆಟ್‌ ಮಂಡನೆ ಮಾಡುವ ವೇಳೆ ಈ ಬಾರಿಯ
ಬಜೆಟ್‌ ಅನ್ನು ಯುವಜನತೆ, ದಲಿತರು, ಕೃಷಿಕರು ಹಾಗೂ ಮಹಿಳೆಯರನ್ನು ಉದ್ದೇಶವಾಗಿಟ್ಟುಕೊಂಡು ಬಜೆಟ್‌ ಮಂಡಿಸಲಾಗುತ್ತಿದೆ ಎಂದರು.

ದೇಶದಲ್ಲಿ, ಆತ್ಮನಿರ್ಭರ ಭಾರತದ ಮೂಲಕ ಸ್ಟಾರ್ಟ್‌ಅಪ್‌ಗಳಿಗೆ 10 ಕೋಟಿಯಿಂದ 20 ಕೋಟಿ ರೂಪಾಯಿಗಳವರೆಗೂ ಕಡಿಮೆ ಬಡ್ಡಿ ಸಾಲ ನೀಡಲಾಗುವುದು. ಮೈಕ್ರೋ ಕಂಪೆನಿಗಳಿಗೆ 5 ಲಕ್ಷ ರೂಪಾಯಿವರೆಗಿನ ಕ್ರೆಡಿಟ್‌ ಕಾರ್ಡ್‌ ವಿತರಣೆ ಮಾಡಲಾಗುವುದು. ಅಲ್ಲದೇ ಇಂತಹ 10 ಲಕ್ಷ ಕಾರ್ಡ್‌ಗಳನ್ನು ಮೊದಲ ಹಂತದಲ್ಲಿ ಹಂಚಿಕೆ ಮಾಡಲಾಗುವುದು ಎಂದು ಹೇಳಿದರು.

ಮುಂದಿನ ಐದು ವರ್ಷಗಳ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಆರು ಅಂಶಗಳನ್ನು ಅಂದರೆ ಕೃಷಿ, ಕೈಗಾರಿಕೆ, ಗಣಿಗಾರಿಕೆ, ಆರ್ಥಿಕತೆ, ಬಡತನ ನಿರ್ಮೂಲನೆ ಮತ್ತು ಇಂಧನಗಳಿಗೆ ಹೆಚ್ಚು ಒತ್ತು ನೀಡಲಾಗಿದೆ. 60 ಸಾವಿರ ಕೋಟಿ ರಫ್ತು ವಹಿವಾಟು ಹೊಂದಿರುವ ಮೀನುಗಾರಿಕೆಯಲ್ಲಿ ಅಂಡಮಾನ್‌ ಮತ್ತು ನಿಕೋಬಾರ್‌ ಹಾಗೂ ಲಕ್ಷ್ಯದ್ವೀಪಗಳನ್ನು ಗುರಿಯಾಗಿಟ್ಟುಕೊಂಡು ಒತ್ತು ನೀಡಲಾಗುವುದು. ಇದಕ್ಕಾಗಿ ವಿಶೇಷ ವಲಯ ನಿರ್ಮಿಸಲಾಗುವುದು. ಅಲ್ಲದೇ ಪೌಷ್ಟಿಕತೆಯಲ್ಲಿ ಅಧಿಕ ಬೇಡಿಕೆ ಇರುವ ತಾವರೆ ಬೀಜ(ಮಕಾನಾ) ಬೆಳೆಗೆ ಅಧಿಕ ಆದ್ಯತೆಡ ನೀಡಲಾಗುವುದು ಎಂದು ತಿಳಿಸಿದರು.

ಅರ್ಚನ ಎಸ್‌ ಎಸ್

Recent Posts

ಅಮೇರಿಕಾದಲ್ಲಿ ಕಾಣೆಯಾಗಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿ ಮೃತದೇಹ ಪತ್ತೆ

ನ್ಯೂಯಾರ್ಕ್: ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ (22) ಅವರ ಮೃತದೇಹ ಪತ್ತೆಯಾಗಿದೆ ಎಂದು ಸ್ಯಾನ್…

21 mins ago

ವಿವಾಹಪೂರ್ವ ದೈಹಿಕ ಸಂಬಂಧದಲ್ಲಿ ಎಚ್ಚರಿಕೆ ಅಗತ್ಯ : ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ವಿವಾಹಪೂರ್ವ ದೈಹಿಕ ಸಂಬಂಧಗಳಲ್ಲಿ ಅತ್ಯಂತ ಜಾಗರೂಕತೆ ವಹಿಸಬೇಕು ಎಂದು ಸುಪ್ರೀಂ ಕೋರ್ಟ್‌ ಎಚ್ಚರಿಕೆ ನೀಡಿದೆ. ಮದುವೆಯ ಸುಳ್ಳು…

1 hour ago

ಎಕ್ಸ್‌ ವೆಬ್‌ಸೈಟ್‌ ಸ್ಥಗಿತ : ಜಾಗತಿಕ ಬಳಕೆದಾರರ ಪರದಾಟ

ಮೈಸೂರು : ಎಲಾನ್ ಮಸ್ಕ್ ಒಡೆತನದ ಸಾಮಾಜಿಕ ಜಾಲತಾಣ ಎಕ್ಸ್ (X, ಹಿಂದಿನ ಟ್ವಿಟರ್) ಇಂದು ಸಂಜೆ (ಫೆಬ್ರವರಿ 16)…

2 hours ago

ರಾಹುಲ್‌ ಗಾಂಧಿ ಪ್ರಶ್ನೆಗೆ ಪ್ರಾಮಾಣಿಕವಾಗಿ ಉತ್ತರಿಸಿ : ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರೈತರ ಮೇಲೆ ಪರಿಣಾಮ ಬೀರುವ ಭಾರತ-ಅಮೆರಿಕ ವ್ಯಾಪಾರ…

2 hours ago

ಕಾಡಾನೆಗಳ ದಾಳಿ ; ಗುಡಿಸಲು, ಸೋಲಾರ್ ತಂತಿಬೇಲಿ ನಾಶ

ಮಲ್ಕುಂಡಿ : ಕಾಡಾನೆಗಳ ದಾಳಿಯಿಂದ ಗುಡಿಸಲು ಹಾಗೂ ಸೋಲಾರ್ ತಂತಿ ಬೇಲಿ ನಾಶವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಾಯಶೆಟ್ಟಿಪುರ ಗ್ರಾಮದಲ್ಲಿ…

3 hours ago

ಮೈಸೂರು | ಅಪರಾಧ ನಿಯಂತ್ರಣ ಕುರಿತು ಎಡಿಜಿಪಿ ಸಭೆ

ಮೈಸೂರು : ನಗರದಲ್ಲಿ ಅಪರಾಧ ನಿಯಂತ್ರಣ ಮತ್ತು ಪತ್ತೆ ಸಂಬಂಧ ರಾಜ್ಯ ಪೊಲೀಸ್ ಇಲಾಖೆಯ ಅಪರಾಧ ಮತ್ತು ತಾಂತ್ರಿಕ ಸೇವೆ…

3 hours ago