ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡಿಸಿದ್ದು, ನಮ್ಮ ಸರ್ಕಾರ ಈ ಬಜೆಟ್ನಲ್ಲಿ ದೇಶದ ಕೃಷಿ, ಕೈಗಾರಿಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಸಂಸತ್ ಭವನದಲ್ಲಿ ಇಂದು(ಫೆಬ್ರವರಿ.1) ವಿತ್ತ ಸಚಿವೆ ಬಜೆಟ್ ಮಂಡನೆ ಮಾಡುವ ವೇಳೆ ಈ ಬಾರಿಯ
ಬಜೆಟ್ ಅನ್ನು ಯುವಜನತೆ, ದಲಿತರು, ಕೃಷಿಕರು ಹಾಗೂ ಮಹಿಳೆಯರನ್ನು ಉದ್ದೇಶವಾಗಿಟ್ಟುಕೊಂಡು ಬಜೆಟ್ ಮಂಡಿಸಲಾಗುತ್ತಿದೆ ಎಂದರು.
ದೇಶದಲ್ಲಿ, ಆತ್ಮನಿರ್ಭರ ಭಾರತದ ಮೂಲಕ ಸ್ಟಾರ್ಟ್ಅಪ್ಗಳಿಗೆ 10 ಕೋಟಿಯಿಂದ 20 ಕೋಟಿ ರೂಪಾಯಿಗಳವರೆಗೂ ಕಡಿಮೆ ಬಡ್ಡಿ ಸಾಲ ನೀಡಲಾಗುವುದು. ಮೈಕ್ರೋ ಕಂಪೆನಿಗಳಿಗೆ 5 ಲಕ್ಷ ರೂಪಾಯಿವರೆಗಿನ ಕ್ರೆಡಿಟ್ ಕಾರ್ಡ್ ವಿತರಣೆ ಮಾಡಲಾಗುವುದು. ಅಲ್ಲದೇ ಇಂತಹ 10 ಲಕ್ಷ ಕಾರ್ಡ್ಗಳನ್ನು ಮೊದಲ ಹಂತದಲ್ಲಿ ಹಂಚಿಕೆ ಮಾಡಲಾಗುವುದು ಎಂದು ಹೇಳಿದರು.
ಮುಂದಿನ ಐದು ವರ್ಷಗಳ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಆರು ಅಂಶಗಳನ್ನು ಅಂದರೆ ಕೃಷಿ, ಕೈಗಾರಿಕೆ, ಗಣಿಗಾರಿಕೆ, ಆರ್ಥಿಕತೆ, ಬಡತನ ನಿರ್ಮೂಲನೆ ಮತ್ತು ಇಂಧನಗಳಿಗೆ ಹೆಚ್ಚು ಒತ್ತು ನೀಡಲಾಗಿದೆ. 60 ಸಾವಿರ ಕೋಟಿ ರಫ್ತು ವಹಿವಾಟು ಹೊಂದಿರುವ ಮೀನುಗಾರಿಕೆಯಲ್ಲಿ ಅಂಡಮಾನ್ ಮತ್ತು ನಿಕೋಬಾರ್ ಹಾಗೂ ಲಕ್ಷ್ಯದ್ವೀಪಗಳನ್ನು ಗುರಿಯಾಗಿಟ್ಟುಕೊಂಡು ಒತ್ತು ನೀಡಲಾಗುವುದು. ಇದಕ್ಕಾಗಿ ವಿಶೇಷ ವಲಯ ನಿರ್ಮಿಸಲಾಗುವುದು. ಅಲ್ಲದೇ ಪೌಷ್ಟಿಕತೆಯಲ್ಲಿ ಅಧಿಕ ಬೇಡಿಕೆ ಇರುವ ತಾವರೆ ಬೀಜ(ಮಕಾನಾ) ಬೆಳೆಗೆ ಅಧಿಕ ಆದ್ಯತೆಡ ನೀಡಲಾಗುವುದು ಎಂದು ತಿಳಿಸಿದರು.
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…
ಕೇಶವ್ ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…
ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…