ದೇಶ- ವಿದೇಶ

Union Budget 2025| ದೇಶದ ಕೃಷಿ, ಕೈಗಾರಿಕೆ ಹೆಚ್ಚಿನ ಆದ್ಯತೆ: ಯುವಜನ, ಮಹಿಳೆಯರು, ಬಡವರಿಗೆ ಪ್ರಯೋಜನ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಬಜೆಟ್‌ ಮಂಡಿಸಿದ್ದು, ನಮ್ಮ ಸರ್ಕಾರ ಈ ಬಜೆಟ್‌ನಲ್ಲಿ ದೇಶದ ಕೃಷಿ, ಕೈಗಾರಿಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಸಂಸತ್‌ ಭವನದಲ್ಲಿ ಇಂದು(ಫೆಬ್ರವರಿ.1) ವಿತ್ತ ಸಚಿವೆ ಬಜೆಟ್‌ ಮಂಡನೆ ಮಾಡುವ ವೇಳೆ ಈ ಬಾರಿಯ
ಬಜೆಟ್‌ ಅನ್ನು ಯುವಜನತೆ, ದಲಿತರು, ಕೃಷಿಕರು ಹಾಗೂ ಮಹಿಳೆಯರನ್ನು ಉದ್ದೇಶವಾಗಿಟ್ಟುಕೊಂಡು ಬಜೆಟ್‌ ಮಂಡಿಸಲಾಗುತ್ತಿದೆ ಎಂದರು.

ದೇಶದಲ್ಲಿ, ಆತ್ಮನಿರ್ಭರ ಭಾರತದ ಮೂಲಕ ಸ್ಟಾರ್ಟ್‌ಅಪ್‌ಗಳಿಗೆ 10 ಕೋಟಿಯಿಂದ 20 ಕೋಟಿ ರೂಪಾಯಿಗಳವರೆಗೂ ಕಡಿಮೆ ಬಡ್ಡಿ ಸಾಲ ನೀಡಲಾಗುವುದು. ಮೈಕ್ರೋ ಕಂಪೆನಿಗಳಿಗೆ 5 ಲಕ್ಷ ರೂಪಾಯಿವರೆಗಿನ ಕ್ರೆಡಿಟ್‌ ಕಾರ್ಡ್‌ ವಿತರಣೆ ಮಾಡಲಾಗುವುದು. ಅಲ್ಲದೇ ಇಂತಹ 10 ಲಕ್ಷ ಕಾರ್ಡ್‌ಗಳನ್ನು ಮೊದಲ ಹಂತದಲ್ಲಿ ಹಂಚಿಕೆ ಮಾಡಲಾಗುವುದು ಎಂದು ಹೇಳಿದರು.

ಮುಂದಿನ ಐದು ವರ್ಷಗಳ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಆರು ಅಂಶಗಳನ್ನು ಅಂದರೆ ಕೃಷಿ, ಕೈಗಾರಿಕೆ, ಗಣಿಗಾರಿಕೆ, ಆರ್ಥಿಕತೆ, ಬಡತನ ನಿರ್ಮೂಲನೆ ಮತ್ತು ಇಂಧನಗಳಿಗೆ ಹೆಚ್ಚು ಒತ್ತು ನೀಡಲಾಗಿದೆ. 60 ಸಾವಿರ ಕೋಟಿ ರಫ್ತು ವಹಿವಾಟು ಹೊಂದಿರುವ ಮೀನುಗಾರಿಕೆಯಲ್ಲಿ ಅಂಡಮಾನ್‌ ಮತ್ತು ನಿಕೋಬಾರ್‌ ಹಾಗೂ ಲಕ್ಷ್ಯದ್ವೀಪಗಳನ್ನು ಗುರಿಯಾಗಿಟ್ಟುಕೊಂಡು ಒತ್ತು ನೀಡಲಾಗುವುದು. ಇದಕ್ಕಾಗಿ ವಿಶೇಷ ವಲಯ ನಿರ್ಮಿಸಲಾಗುವುದು. ಅಲ್ಲದೇ ಪೌಷ್ಟಿಕತೆಯಲ್ಲಿ ಅಧಿಕ ಬೇಡಿಕೆ ಇರುವ ತಾವರೆ ಬೀಜ(ಮಕಾನಾ) ಬೆಳೆಗೆ ಅಧಿಕ ಆದ್ಯತೆಡ ನೀಡಲಾಗುವುದು ಎಂದು ತಿಳಿಸಿದರು.

ಅರ್ಚನ ಎಸ್‌ ಎಸ್

Recent Posts

ರಾಜಸ್ಥಾನದಲ್ಲಿ ಪ್ಯಾರಾಮೆಡಿಕಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ನಾಲ್ವರು ಅರೆಸ್ಟ್‌

ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್‌ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್‌ ಮೇಲೆ ಪೊಲೀಸರು…

6 mins ago

ಎಸ್‌ಐಆರ್‌ ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್‌

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌…

38 mins ago

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

1 hour ago

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

2 hours ago

ಅಪ್ಪಟ ಸಮಾಜವಾದಿ, ಗುಡಿಸಲೂ ಇರದಿದ್ದ ಜೋಗಿ ಕಿಶನ್ ಪಟ್ನಾಯಕ್

ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…

10 hours ago

ಶೀಘ್ರವೇ ಆಟೋ ಬಾಡಿಗೆ ಪರಿಷ್ಕೃತ ದರ ಪ್ರಕಟ

ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ…

10 hours ago