ದೇಶ- ವಿದೇಶ

Union Budget 2025| ಔಷಧ ಮೇಲಿನ ಅಬಕಾರಿ ಸುಂಕ ವಿನಾಯಿತಿ – ಸಚಿವೆ

ಹೊಸದಿಲ್ಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಲೋಕಸಭೆಯಲ್ಲಿ 2025-26ನೇ ಸಾಲಿನ ಕೇಂದ್ರ ಬಜೆಟ್‌ ಮಂಡಿಸುತ್ತಿದ್ದಾರೆ.

ಹಣಕಾಸು ಸಚಿವರ ಬಜೆಟ್ ಭಾಷಣದ ಮುಖ್ಯಾಂಶಗಳು

  • ಜಲ್ ಜೀವನ್ ಮಿಷನ್‌ನ ಬಜೆಟ್ ಔಟ್‌ಲೆಟ್ ಅನ್ನು 100% ಕವರೇಜ್ ಸಾಧಿಸಲು ಹೆಚ್ಚಿಸಲಾಗಿದೆ. ಹೊಸ ಯೋಜನೆಗಳಲ್ಲಿ ರೂ 10 ಲಕ್ಷ ಕೋಟಿ
  • ಬಂಡವಾಳವನ್ನು ತುಂಬಲು ಆಸ್ತಿ ಹಣಗಳಿಸುವ ಯೋಜನೆ 2025-30 ಅನ್ನು ಪ್ರಾರಂಭಿಸಲಾಗುವುದು.
  • ಹೆಚ್ಚುವರಿ 40,000 ಯೂನಿಟ್ ಕೈಗೆಟುಕುವ ದರದಲ್ಲಿ 2025ರಲ್ಲಿ ಪೂರ್ಣಗೊಳ್ಳಲಿದೆ.
  • ವಿದ್ಯುತ್ ವಿತರಣೆ ಮತ್ತು ಪ್ರಸರಣ ಕಂಪನಿಗಳನ್ನು ಬಲಪಡಿಸಲಾಗುವುದು
  • ಪ್ರವಾಸೋದ್ಯಮ ಹೆಚ್ಚಿಸಲು ಬುದ್ಧ ಸರ್ಕ್ಯೂಟ್‌ಗೆ ಒತ್ತು.
  • ಬೋಧಗಯಾವನ್ನು ಅಭಿವೃದ್ಧಿಪಡಿಸಲಾಗುವುದು.
  • ಇದರೊಂದಿಗೆ ಬಿಹಾರದಲ್ಲಿ ಹೊಸ ಕಾಲುವೆ ಯೋಜನೆಗೆ ಅನುಮೋದನೆ ನೀಡಲಾಯಿತು.
  • ಕ್ಯಾನ್ಸರ್‌, ಅಪರೂಪದ ಖಾಯಿಲೆಗಳಿಗೆ ಸಂಬಂಧಿಸಿದಂತೆ 30 ಔಷಧಗಳಿಗೆ ಅಮದು ಮೇಲಿನ ಅಬಕಾರಿ ಸುಂಕದಿಂದ ರಿಯಾಯಿತಿ

ಕೃತಕ ಬುದ್ಧಿಮತ್ತೆ ಕ್ಷೇತ್ರದಲ್ಲಿ ಮೂರು ನಾವಿನ್ಯತೆ ಸಂಸ್ಥೆಗಳ ಸ್ಥಾಪನೆ 23 ಐಐಟಿಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಸಂಖ್ಯೆ ಹೆಚ್ಚಿಸಲಾಗಿದೆ. 60 ಸಾವಿರದಿಂದ 1.2 ಲಕ್ಷಕ್ಕೆ ಹೆಚ್ಚಳ. ಪಟ್ನಾ ಐಐಟಿ ವಿಸ್ತರಣೆ, ವೈದ್ಯಕೀಯ ಕಾಲೇಜುಗಳ ಸೀಟುಗಳನ್ನು ಶೇ 100ರಷ್ಟು ಹೆಚ್ಚಳ ಮಾಡಲಾಗುವುದು.

ಮೇಕ್ ಇನ್ ಇಂಡಿಯಾ ಯೋಜನೆಯಡಿಯಲ್ಲಿ ರಾಷ್ಟ್ರೀಯ ತಯಾರಿಕಾ ವಲಯವನ್ನು ರಚಿಸಲಾಗುವುದು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಹಯೋಗದಲ್ಲಿ ಇದನ್ನು ಜಾರಿಗೊಳಿಸಲಾಗುವುದು. ಸೌರ, ಇವಿ ಬ್ಯಾಟರಿ, ಮೋಟಾರ್‌ಗಳು ಸೇರಿದಂತೆ ವಿವಿಧ ಉತ್ಪನ್ನಗಳ ತಯಾರಿಕೆ ಹಾಗೂ ಹೂಡಿಕೆಯನ್ನು ಉತ್ತೇಜಿಸಲಾಗುವುದು.

ಉದ್ಯಮ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಮಹಿಳೆಯರನ್ನು ಉತ್ತೇಜಿಸುವ ಸಲುವಾಗಿ ಹೊಸ ಯೋಜನೆ ಜಾರಿಗೊಳಿಸಲಾಗುವುದು. 22 ಲಕ್ಷ ಉದ್ದಿಮೆದಾರರಿಗೆ ಅನುಕೂಲವಾಗಲಿದೆ. ಚರ್ಮೋದ್ಯವನ್ನು ಉತ್ತೇಜಿಸಿ ರಫ್ತು ಹೆಚ್ಚಿಸುವ ಗಮನ ಹರಿಸಲಾಗುವುದು. ಆ ಮೂಲಕ ಮೇಡ್ ಇನ್ ಇಂಡಿಯಾ ಬ್ರಾಂಡ್ ಉತ್ತೇಜಿಸಲಾಗುವುದು

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹೊರ್ಮುಜ್‌ ಜಲಸಂಧಿ | ಮನವಿ ತಿರಸ್ಕರಿಸಿದ ಮಿತ್ರ ರಾಷ್ಟ್ರಗಳು : ಟ್ರಂಪ್‌ಗೆ ಹಿನ್ನಡೆ

ವಾಷಿಂಗ್ಟನ್‌ : ಇರಾನ್ ವಿರುದ್ಧದ ಅಮೆರಿಕಾ-ಇಸ್ರೇಲ್ ಯುದ್ಧದ ಪರಿಣಾಮ ಪ್ರಪಂಚದ ಅತಿ ಮುಖ್ಯ ತೈಲ ಮಾರ್ಗ ಹೊರ್ಮುಜ್‌ ಜಲಸಂಧಿಯ ಮೂಲಕ…

1 min ago

ನಿರ್ವಹಣೆ ಇಲ್ಲದೆ ಸೊರಗಿದ ಸ್ಮಶಾನ!

ಮಂಚೇಗೌಡನಕೊಪ್ಪಲಿನ ಸ್ಮಶಾನ ಸರಿಪಡಿಸಲು ನಿವಾಸಿಗಳ ಆಗ್ರಹ ಎಚ್. ಎಸ್. ದಿನೇಶ್‌ಕುಮಾರ್ ಮೈಸೂರು : ದುರ್ವಾಸನೆ ಬೀರುವ ಶೌಚಾಲಯ.., ಎಲ್ಲೆಂದರಲ್ಲಿ ಹರಡಿಕೊಂಡಿರುವ…

47 mins ago

ಓದುಗರ ಪತ್ರ | ಬೀದಿನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಜೆ.ಪಿ.ನಗರದ ಸಾಯಿಬಾಬಾ ದೇವಸ್ಥಾನದ ಹಿಂಭಾಗದ ರಸ್ತೆಯಲ್ಲಿ ಬೀದಿನಾಯಿಗಳ ಹಾವಳಿ ವಿಪರೀತವಾಗಿದೆ. ರಾತ್ರಿಯ ಹೊತ್ತಿನಲ್ಲಿ ಒಂದೇ ಸಮನೆ ಬೊಗಳುತ್ತಿರುತ್ತವೆ. ದ್ವಿಚಕ್ರವಾಹನ…

55 mins ago

ಗುಂಡ್ಲುಪೇಟೆ | ವಿದ್ಯುತ್ ಸ್ಪರ್ಶಿಸಿ ಹುಲಿ ಸಾವು

ಗುಂಡ್ಲುಪೇಟೆ : ತಾಲೂಕಿನ ಪಡಗೂರು ಗ್ರಾಮದಲ್ಲಿ ವಿದ್ಯುತ್ ಸ್ಪರ್ಶಿಸಿ ಹುಲಿಯೊಂದು ಸಾವನ್ನಪ್ಪಿರುವ ಘಟನೆ ನಡೆದಿದೆ. ಗ್ರಾಮದ ಅಡವಿ ಮಠದ ಸಮೀಪವಿರುವ…

2 hours ago

ಓದುಗರ ಪತ್ರ | ಪ್ರಾಣಿ, ಪಕ್ಷಿಗಳಿಗೆ ನೀರು ಕೊಡಿ

ಬೇಸಿಗೆ ಆರಂಭವಾಗುವುದೇ ತಡ ಪ್ರತಿಯೊಬ್ಬರಿಗೂ ಬಾಯಾರಿಕೆ ಹೆಚ್ಚಾಗಿ, ಜಾಸ್ತಿ ನೀರು ಕುಡಿಯಬೇಕಾಗುತ್ತದೆ. ಬಿಸಿಲಿನ ಬೇಗೆ ಹೆಚ್ಚಾಗುವುದರಿಂದ ಎಂತಹವರಿಗೂ ವಿವಿಧ ರೀತಿಯ…

2 hours ago

ಓದುಗರ ಪತ್ರ | ಸರ್ಕಾರಿ ಶಾಲೆಗಳಿಗೆ ಲ್ಯಾಪ್ ಟಾಪ್, ವೈಫೈ ಸೌಲಭ್ಯ ಕಲ್ಪಿಸಿ

ಈಗ ಶಾಲೆಯಲ್ಲಿ ಶಿಕ್ಷಕರು ಕೇವಲ ಪಠ್ಯ ಬೋಧಕರಾಗಿ ಮಾತ್ರ ಉಳಿದಿಲ್ಲ. ಬೋಧನೆಯ ಜೊತೆ ಜೊತೆಗೆ ಮಕ್ಕಳನ್ನು ದಾಖಲಾತಿ ಮಾಡಿಕೊಳ್ಳುವುದು, ಮಧ್ಯಾಹ್ನದ…

3 hours ago