ದೇಶ- ವಿದೇಶ

Union Budget 2025| ಔಷಧ ಮೇಲಿನ ಅಬಕಾರಿ ಸುಂಕ ವಿನಾಯಿತಿ – ಸಚಿವೆ

ಹೊಸದಿಲ್ಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಲೋಕಸಭೆಯಲ್ಲಿ 2025-26ನೇ ಸಾಲಿನ ಕೇಂದ್ರ ಬಜೆಟ್‌ ಮಂಡಿಸುತ್ತಿದ್ದಾರೆ.

ಹಣಕಾಸು ಸಚಿವರ ಬಜೆಟ್ ಭಾಷಣದ ಮುಖ್ಯಾಂಶಗಳು

  • ಜಲ್ ಜೀವನ್ ಮಿಷನ್‌ನ ಬಜೆಟ್ ಔಟ್‌ಲೆಟ್ ಅನ್ನು 100% ಕವರೇಜ್ ಸಾಧಿಸಲು ಹೆಚ್ಚಿಸಲಾಗಿದೆ. ಹೊಸ ಯೋಜನೆಗಳಲ್ಲಿ ರೂ 10 ಲಕ್ಷ ಕೋಟಿ
  • ಬಂಡವಾಳವನ್ನು ತುಂಬಲು ಆಸ್ತಿ ಹಣಗಳಿಸುವ ಯೋಜನೆ 2025-30 ಅನ್ನು ಪ್ರಾರಂಭಿಸಲಾಗುವುದು.
  • ಹೆಚ್ಚುವರಿ 40,000 ಯೂನಿಟ್ ಕೈಗೆಟುಕುವ ದರದಲ್ಲಿ 2025ರಲ್ಲಿ ಪೂರ್ಣಗೊಳ್ಳಲಿದೆ.
  • ವಿದ್ಯುತ್ ವಿತರಣೆ ಮತ್ತು ಪ್ರಸರಣ ಕಂಪನಿಗಳನ್ನು ಬಲಪಡಿಸಲಾಗುವುದು
  • ಪ್ರವಾಸೋದ್ಯಮ ಹೆಚ್ಚಿಸಲು ಬುದ್ಧ ಸರ್ಕ್ಯೂಟ್‌ಗೆ ಒತ್ತು.
  • ಬೋಧಗಯಾವನ್ನು ಅಭಿವೃದ್ಧಿಪಡಿಸಲಾಗುವುದು.
  • ಇದರೊಂದಿಗೆ ಬಿಹಾರದಲ್ಲಿ ಹೊಸ ಕಾಲುವೆ ಯೋಜನೆಗೆ ಅನುಮೋದನೆ ನೀಡಲಾಯಿತು.
  • ಕ್ಯಾನ್ಸರ್‌, ಅಪರೂಪದ ಖಾಯಿಲೆಗಳಿಗೆ ಸಂಬಂಧಿಸಿದಂತೆ 30 ಔಷಧಗಳಿಗೆ ಅಮದು ಮೇಲಿನ ಅಬಕಾರಿ ಸುಂಕದಿಂದ ರಿಯಾಯಿತಿ

ಕೃತಕ ಬುದ್ಧಿಮತ್ತೆ ಕ್ಷೇತ್ರದಲ್ಲಿ ಮೂರು ನಾವಿನ್ಯತೆ ಸಂಸ್ಥೆಗಳ ಸ್ಥಾಪನೆ 23 ಐಐಟಿಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಸಂಖ್ಯೆ ಹೆಚ್ಚಿಸಲಾಗಿದೆ. 60 ಸಾವಿರದಿಂದ 1.2 ಲಕ್ಷಕ್ಕೆ ಹೆಚ್ಚಳ. ಪಟ್ನಾ ಐಐಟಿ ವಿಸ್ತರಣೆ, ವೈದ್ಯಕೀಯ ಕಾಲೇಜುಗಳ ಸೀಟುಗಳನ್ನು ಶೇ 100ರಷ್ಟು ಹೆಚ್ಚಳ ಮಾಡಲಾಗುವುದು.

ಮೇಕ್ ಇನ್ ಇಂಡಿಯಾ ಯೋಜನೆಯಡಿಯಲ್ಲಿ ರಾಷ್ಟ್ರೀಯ ತಯಾರಿಕಾ ವಲಯವನ್ನು ರಚಿಸಲಾಗುವುದು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಹಯೋಗದಲ್ಲಿ ಇದನ್ನು ಜಾರಿಗೊಳಿಸಲಾಗುವುದು. ಸೌರ, ಇವಿ ಬ್ಯಾಟರಿ, ಮೋಟಾರ್‌ಗಳು ಸೇರಿದಂತೆ ವಿವಿಧ ಉತ್ಪನ್ನಗಳ ತಯಾರಿಕೆ ಹಾಗೂ ಹೂಡಿಕೆಯನ್ನು ಉತ್ತೇಜಿಸಲಾಗುವುದು.

ಉದ್ಯಮ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಮಹಿಳೆಯರನ್ನು ಉತ್ತೇಜಿಸುವ ಸಲುವಾಗಿ ಹೊಸ ಯೋಜನೆ ಜಾರಿಗೊಳಿಸಲಾಗುವುದು. 22 ಲಕ್ಷ ಉದ್ದಿಮೆದಾರರಿಗೆ ಅನುಕೂಲವಾಗಲಿದೆ. ಚರ್ಮೋದ್ಯವನ್ನು ಉತ್ತೇಜಿಸಿ ರಫ್ತು ಹೆಚ್ಚಿಸುವ ಗಮನ ಹರಿಸಲಾಗುವುದು. ಆ ಮೂಲಕ ಮೇಡ್ ಇನ್ ಇಂಡಿಯಾ ಬ್ರಾಂಡ್ ಉತ್ತೇಜಿಸಲಾಗುವುದು

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

3 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

3 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

3 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

6 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

6 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

6 hours ago