ದೇಶ- ವಿದೇಶ

ಕೇಂದ್ರ ಬಜೆಟ್‌ | 17.2 ಲಕ್ಷ ಕೋಟಿ ರೂ. ಸಾಲ

ಹೊಸದಿಲ್ಲಿ : ಕೇಂದ್ರ ಸರ್ಕಾರ 2026-27 ನೇ ಸಾಲಿಗೆ 17.2 ಲಕ್ಷ ಕೋಟಿ ರೂ. ಸಾಲ ಪಡೆಯಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ಮಾರುಕಟ್ಟೆ ಸಾಲ 11.7 ಲಕ್ಷ ಕೋಟಿ ರೂ. ಹಾಗೂ ಸಣ್ಣ ಉಳಿತಾಯ ಮತ್ತು ಇತರ ಮೂಲಗಳ ಮೂಲಕ ಸರಿಸುಮಾರು 4 ಲಕ್ಷ ಕೋಟಿ ರೂ.ಗೂ ಅಧಿಕ ಸಾಲವನ್ನು ಪಡೆಯುವುದಾಗಿ ತಿಳಿಸಿದ್ದಾರೆ.

ಒಟ್ಟು 36.5 ಲಕ್ಷ ಕೋಟಿ ರೂ.ಗಳ ಸಾಲಯೇತರ ಸ್ವೀಕೃತಿಗಳು ಹಾಗೂ 53.5 ಲಕ್ಷ ಕೋಟಿ ರೂ.ಗಳನ್ನು ಅಂದಾಜಿಸಲಾಗಿದೆ. ತೆರಿಗೆ ಮೂಲಗಳಿಂದ 28.7 ಲಕ್ಷ ಕೋಟಿ ರೂ. ಆದಾಯ ಅಂದಾಜಿಸಲಾಗಿದೆ.
2026-27 ನೇ ಸಾಲಿಗೆ ಋಣೇತರ ಮೂಲಗಳಿಂದ 34 ಲಕ್ಷ ಕೋಟಿ ರೂ.ಸ್ವೀಕೃತಿ, 26.2 ಲಕ್ಷ ಕೋಟಿ ರೂ. ಆದಾಯ ನಿರೀಕ್ಷಿಸಲಾಗಿತ್ತು. ಒಟ್ಟು ವೆಚ್ಚವನ್ನು 49.6 ಲಕ್ಷ ಕೋಟಿ ರೂ.ಗೆ ವಿಸ್ತರಿಸಲಾಗಿದೆ. ಇದರಲ್ಲಿ ಬಂಡವಾಳ ವೆಚ್ಚ 11 ಲಕ್ಷ ಕೋಟಿ ರೂ.ಗಳು ಎಂದು ನಿರ್ಮಲಾ ತಿಳಿಸಿದ್ದಾರೆ.

ಕೇಂದ್ರ ಸರ್ಕಾರ 16ನೇ ಹಣಕಾಸು ಆಯೋಗದ ವರದಿಯ ಶಿಫಾರಸುಗಳನ್ನು ಅಂಗೀಕರಿಸಿದ್ದು, ಅದನ್ನು ಆಧರಿಸಿ ರಾಜ್ಯಗಳಿಗೆ 1.4 ಲಕ್ಷ ಕೋಟಿ ರೂ.ತೆರಿಗೆ ಹಂಚಿಕೆ ಮಾಡಿರುವುದಾಗಿ ತಿಳಿಸಿದರು.

2025 ನವೆಂಬರ್ 17ರಂದು 16ನೇ ಹಣಕಾಸು ಆಯೋಗ ತನ್ನ ವರದಿಯನ್ನು ರಾಷ್ಟ್ರ ಪತಿಯವರಿಗೆ ಸಲ್ಲಿಸಿದೆ. ಅದರ ಪ್ರಕಾರ ಸಂವಿಧಾನದ 281 ಕಲಂ ಅನ್ನು ಕಡ್ಡಾಯಗೊಳಿಸಲಾಗಿದೆ. ಕೇಂದ್ರ ಸರ್ಕಾರ ಆಯೋಗದ ವರದಿಯನ್ನು ಮತ್ತು ಕಾರ್ಯಾನುಷ್ಠಾನ ಮಾಹಿತಿಯನ್ನು ಸಂಸತ್‌ನಲ್ಲಿ ಮಂಡಿಸಿದೆ ಎಂದು ತಿಳಿಸಿದ್ದಾರೆ.

ಆಯೋಗದ ಶಿಫಾರಸು ಆಧರಿಸಿ ಶೇ.41ರಷ್ಟು ತೆರಿಗೆ ವಿಕೇಂದ್ರೀಕರಣಕ್ಕೆ ಸಮ್ಮತಿಸಲಾಗಿದೆ. ಹೀಗಾಗಿ ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳಿಗೆ ವಿಪತ್ತು ನಿರ್ವಹಣೆಗಾಗಿ 1.4 ಲಕ್ಷ ಕೋಟಿ ರೂ. ಅನುದಾನ ಒದಗಿಸುತ್ತಿರುವುದಾಗಿ ಹೇಳಿದರು.

ಮುಂದಿನ ಐದು ವರ್ಷಗಳಲ್ಲಿ ಕೇಂದ್ರ ಸರ್ಕಾರ ಸಾಲದ ಹೊರೆಯನ್ನು ಶೇ.50ರ ಪ್ರಮಾಣಕ್ಕೆ ತಗ್ಗಿಸುವ ಗುರಿಯನ್ನು ಹೊಂದಿದೆ ಎಂದಿದ್ದಾರೆ.

ಪ್ರಸ್ತುತ ಆರ್ಥಿಕ ವರ್ಷದಲ್ಲಿ ಸಾಲದ ಹೊರೆ ಶೇ.56.1ರಷ್ಟಿದೆ. ಮುಂದಿನ ಆರ್ಥಿಕ ವರ್ಷಕ್ಕೆ ಅದನ್ನು 55.6ಕ್ಕೆ ಇಳಿಸಲಾಗುವುದು ಎಂದಿದ್ದಾರೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

2030ರ ವೇಳೆಗೆ 2 ಮಿಲಿಯನ್‌ ಉದ್ಯೋಗ ಸೃಷ್ಟಿ, ಅಭಿವೃದ್ಧಿ ಪರ ಆಯವ್ಯಯ : ಸಂಸದ ಯದುವೀರ್‌

ಮೈಸೂರು : ಯುವ ಸಮುದಾಯಕ್ಕೆ ಹಾಗೂ ತಾಂತ್ರಿಕ ಕ್ಷೇತ್ರಕ್ಕೆ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಹೆಚ್ಚು ಒತ್ತು ನೀಡುವ ಮೂಲಕ ವಿಕಸಿತ…

17 mins ago

ಜನರನ್ನು ದಿಕ್ಕು ತಪ್ಪಿಸುತ್ತಿರುವ ಎನ್‌ಸಿಬಿ : ಎಂ.ಲಕ್ಷ್ಮಣ್‌ ಆರೋಪ

ಮೈಸೂರು : ನಗರದ ಕೆಮಿಕಲ್ ಫ್ಯಾಕ್ಟರಿಯಲ್ಲಿ ವಶಪಡಿಸಿಕೊಳ್ಳಲಾಗಿದೆ ಎನ್ನಲಾದ ವಸ್ತುಗಳಿಗೆ ಸಂಬಂಸಿದಂತೆ ಎನ್‌ಸಿಬಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರವೇ ಬೇರೆ.…

30 mins ago

ಬಡತನ ಪ್ರಮಾಣ ಗಣನೀಯ ಇಳಿಕೆ: ನಿರ್ಮಲಾ

ಹೊಸದಿಲ್ಲಿ: ಕಳೆದ 12 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಶಿಸ್ತುಬದ್ಧ ಆರ್ಥಿಕ ನಿರ್ವಹಣೆ ನಡೆಯುತ್ತಿರುವುದರಿಂದ ಭಾರತದ ಜಿಡಿಪಿ ದರ…

42 mins ago

ಕೇಂದ್ರ ಬಜೆಟ್‌ | ಯಾವುದು ಅಗ್ಗ, ಯಾವುದು ದುಬಾರಿ ?

ಹೊಸದಿಲ್ಲಿ : ಹಲವು ಉತ್ಪನ್ನಗಳ ಮೇಲಿನ ತೆರಿಗೆಯನ್ನು ಇಳಿಕೆ ಮಾಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಆಯವ್ಯಯದಲ್ಲಿ…

1 hour ago

ಕರ್ನಾಟಕ ವಿರೋಧಿ ಬಜೆಟ್‌ : ಎಚ್‌ಸಿಎಂ ವ್ಯಂಗ್ಯ

ಬೆಂಗಳೂರು : ಹಣಕಾಸು ತಜ್ಞೆ ಅಲ್ಲದ ಕೇಂದ್ರದ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸುತ್ತಿರುವ ೯ನೇ ಕಳಪೆ ಬಜೆಟ್ ಇದಾಗಿದೆ.…

1 hour ago

ಸರ್ಕಾರ ಮಕ್ಕಳಿಗೆ ವೈಚಾರಿಕ ಶಿಕ್ಷಣ ನೀಡಲಿ: ಪ್ರೊ.ಕೆ.ಎಸ್ ಭಗವಾನ್

ಮೈಸೂರು : ಸರ್ಕಾರ ಸರ್ಕಾರಿ ಶಾಲೆಗಳ ಮುಚ್ಚುವ ಬದಲು, ಉನ್ನತಿಕರಣಗೊಳಿಸಿ ವೈಚಾರಿಕ ಶಿಕ್ಷಣ ನೀಡುವಂತಗಲಿ ಎಂದು ಚಿಂತಕ ಪ್ರೊ. ಕೆ…

3 hours ago