ಹೊಸದಿಲ್ಲಿ : ಕೇಂದ್ರ ಸರ್ಕಾರ 2026-27 ನೇ ಸಾಲಿಗೆ 17.2 ಲಕ್ಷ ಕೋಟಿ ರೂ. ಸಾಲ ಪಡೆಯಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ಮಾರುಕಟ್ಟೆ ಸಾಲ 11.7 ಲಕ್ಷ ಕೋಟಿ ರೂ. ಹಾಗೂ ಸಣ್ಣ ಉಳಿತಾಯ ಮತ್ತು ಇತರ ಮೂಲಗಳ ಮೂಲಕ ಸರಿಸುಮಾರು 4 ಲಕ್ಷ ಕೋಟಿ ರೂ.ಗೂ ಅಧಿಕ ಸಾಲವನ್ನು ಪಡೆಯುವುದಾಗಿ ತಿಳಿಸಿದ್ದಾರೆ.
ಒಟ್ಟು 36.5 ಲಕ್ಷ ಕೋಟಿ ರೂ.ಗಳ ಸಾಲಯೇತರ ಸ್ವೀಕೃತಿಗಳು ಹಾಗೂ 53.5 ಲಕ್ಷ ಕೋಟಿ ರೂ.ಗಳನ್ನು ಅಂದಾಜಿಸಲಾಗಿದೆ. ತೆರಿಗೆ ಮೂಲಗಳಿಂದ 28.7 ಲಕ್ಷ ಕೋಟಿ ರೂ. ಆದಾಯ ಅಂದಾಜಿಸಲಾಗಿದೆ.
2026-27 ನೇ ಸಾಲಿಗೆ ಋಣೇತರ ಮೂಲಗಳಿಂದ 34 ಲಕ್ಷ ಕೋಟಿ ರೂ.ಸ್ವೀಕೃತಿ, 26.2 ಲಕ್ಷ ಕೋಟಿ ರೂ. ಆದಾಯ ನಿರೀಕ್ಷಿಸಲಾಗಿತ್ತು. ಒಟ್ಟು ವೆಚ್ಚವನ್ನು 49.6 ಲಕ್ಷ ಕೋಟಿ ರೂ.ಗೆ ವಿಸ್ತರಿಸಲಾಗಿದೆ. ಇದರಲ್ಲಿ ಬಂಡವಾಳ ವೆಚ್ಚ 11 ಲಕ್ಷ ಕೋಟಿ ರೂ.ಗಳು ಎಂದು ನಿರ್ಮಲಾ ತಿಳಿಸಿದ್ದಾರೆ.
ಕೇಂದ್ರ ಸರ್ಕಾರ 16ನೇ ಹಣಕಾಸು ಆಯೋಗದ ವರದಿಯ ಶಿಫಾರಸುಗಳನ್ನು ಅಂಗೀಕರಿಸಿದ್ದು, ಅದನ್ನು ಆಧರಿಸಿ ರಾಜ್ಯಗಳಿಗೆ 1.4 ಲಕ್ಷ ಕೋಟಿ ರೂ.ತೆರಿಗೆ ಹಂಚಿಕೆ ಮಾಡಿರುವುದಾಗಿ ತಿಳಿಸಿದರು.
2025 ನವೆಂಬರ್ 17ರಂದು 16ನೇ ಹಣಕಾಸು ಆಯೋಗ ತನ್ನ ವರದಿಯನ್ನು ರಾಷ್ಟ್ರ ಪತಿಯವರಿಗೆ ಸಲ್ಲಿಸಿದೆ. ಅದರ ಪ್ರಕಾರ ಸಂವಿಧಾನದ 281 ಕಲಂ ಅನ್ನು ಕಡ್ಡಾಯಗೊಳಿಸಲಾಗಿದೆ. ಕೇಂದ್ರ ಸರ್ಕಾರ ಆಯೋಗದ ವರದಿಯನ್ನು ಮತ್ತು ಕಾರ್ಯಾನುಷ್ಠಾನ ಮಾಹಿತಿಯನ್ನು ಸಂಸತ್ನಲ್ಲಿ ಮಂಡಿಸಿದೆ ಎಂದು ತಿಳಿಸಿದ್ದಾರೆ.
ಆಯೋಗದ ಶಿಫಾರಸು ಆಧರಿಸಿ ಶೇ.41ರಷ್ಟು ತೆರಿಗೆ ವಿಕೇಂದ್ರೀಕರಣಕ್ಕೆ ಸಮ್ಮತಿಸಲಾಗಿದೆ. ಹೀಗಾಗಿ ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳಿಗೆ ವಿಪತ್ತು ನಿರ್ವಹಣೆಗಾಗಿ 1.4 ಲಕ್ಷ ಕೋಟಿ ರೂ. ಅನುದಾನ ಒದಗಿಸುತ್ತಿರುವುದಾಗಿ ಹೇಳಿದರು.
ಮುಂದಿನ ಐದು ವರ್ಷಗಳಲ್ಲಿ ಕೇಂದ್ರ ಸರ್ಕಾರ ಸಾಲದ ಹೊರೆಯನ್ನು ಶೇ.50ರ ಪ್ರಮಾಣಕ್ಕೆ ತಗ್ಗಿಸುವ ಗುರಿಯನ್ನು ಹೊಂದಿದೆ ಎಂದಿದ್ದಾರೆ.
ಪ್ರಸ್ತುತ ಆರ್ಥಿಕ ವರ್ಷದಲ್ಲಿ ಸಾಲದ ಹೊರೆ ಶೇ.56.1ರಷ್ಟಿದೆ. ಮುಂದಿನ ಆರ್ಥಿಕ ವರ್ಷಕ್ಕೆ ಅದನ್ನು 55.6ಕ್ಕೆ ಇಳಿಸಲಾಗುವುದು ಎಂದಿದ್ದಾರೆ.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…