ನವದೆಹಲಿ: ಲೋಕಸಭೆಯಲ್ಲಿಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮೂರು ಮಸೂದೆಗಳನ್ನು ಮಂಡಿಸಿದರು.
ಭಾರೀ ವಿರೋಧದ ನಡುವೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಲೋಕಸಭೆಯಲ್ಲಿ ಸಂವಿಧಾನ ಮಸೂದೆ 2025, ಕೇಂದ್ರಾಡಳಿತ ಪ್ರದೇಶಗಳ ಸರ್ಕಾರ ಮಸೂದೆ 2025, ಜಮ್ಮು ಮತ್ತು ಕಾಶ್ಮೀರದ ಪುನರ್ವಿಂಗಡಣೆ ಮಸೂದೆ 2025ನ್ನು ಮಂಡಿಸಿದರು.
ಇಂದು ಲೋಕಸಭೆಯಲ್ಲಿ ಸಂವಿಧಾನದ 130ನೇ ತಿದ್ದುಪಡಿ ಮಸೂದೆ ಕೂಡ ಮಂಡನೆಯಾಗಿದೆ.
ಈ ಮಸೂದೆ ಮಂಡನೆಯಾಗಿ ಕಾನೂನಾದರೆ ಯಾವುದೇ ಗಂಭೀರ ಪ್ರಕರಣಗಳಲ್ಲಿ 30 ದಿನಗಳ ಕಾಲ ಪ್ರಧಾನಿ, ಮುಖ್ಯಮಂತ್ರಿ, ಸಚಿವರು ಜೈಲಿನಲ್ಲಿದ್ದರೆ ಅವರನ್ನು ಕೂಡಲೇ ಅಧಿಕಾರದಿಂದ ಕೆಳಗಿಳಿಸಲಾಗುತ್ತದೆ.
ಈ ಮಸೂದೆ ಬಗ್ಗೆ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಉತ್ತಮ ಆಡಳಿತ ಮತ್ತು ಸಾಂವಿಧಾನಿಕ ಮೌಲ್ಯಗಳನ್ನು ಕಾಪಾಡಿಕೊಳ್ಳಲು ಈ ಮಸೂದೆ ಅಗತ್ಯವಾಗಿದೆ. ಗಂಭೀರ ಅಪರಾಧಗಳ ಆರೋಪದ ಮೇಲೆ ಬಂಧಿಸಲ್ಪಟ್ಟ ಸಚಿವರು ಅಧಿಕಾರದಲ್ಲಿ ಮುಂದುವರಿದರೆ, ಅದು ಸಾಂವಿಧಾನಿಕ ಮೌಲ್ಯಗಳು ಹಾಗೂ ಉತ್ತಮ ಆಡಳಿತಕ್ಕೆ ಅಪಾಯವನ್ನು ಉಂಟುಮಾಡಬಹುದು ಎಂದು ಹೇಳಿದರು.
ಮಂಡ್ಯ : ರಾಜ್ಯದಲ್ಲೇ ಅತಿ ಹೆಚ್ಚು ಪ್ರವಾಸಿ ತಾಣಗಳನ್ನು ಗುರುತಿಸಿರುವ ಹೆಗ್ಗಳಿಕೆ ಮಂಡ್ಯ ಜಿಲ್ಲೆಗೆ ಬಂದಿದ್ದು, ಪ್ರವಾಸಿ ತಾಣಗಳನ್ನು ಉತ್ತೇಜಿಸಲು…
ಕೆ.ಆರ.ಪೇಟೆ : ತಾಲ್ಲೂಕಿನ ಕಸಬಾ ಹೋಬಳಿಯ ಕತ್ತರಘಟ್ಟ ಗ್ರಾಮದಲ್ಲಿ ರೈತನ ಮೇಲೆ ಚಿರತೆ ದಾಳಿಮಾಡಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಸೋಮವಾರ…
ಬೆಳಗಾವಿ : ದೇಶದಲ್ಲಿ ಮಾದರಿಯಾದ, ಮಹಿಳೆಯರ ಸಬಲೀಕರಣ ಉದ್ದೇಶ ಹೊಂದಿರುವ ಗೃಹಲಕ್ಷ್ಮಿ ಯೋಜನೆಯನ್ನು ಒಂದೇ ಒಂದು ರೂಪಾಯಿ ಕೂಡ ಮಧ್ಯವರ್ತಿಗಳ…
ನಾಪೋಕ್ಲು : ಬಿದ್ದಾಟಂಡ ವಾಡೆಯ ಐತಿಹಾಸಿಕ ನೂರಂಬಡ ನಾಡ್ ಮಂದ್ನಲ್ಲಿ ಪುತ್ತರಿ ಹಬ್ಬದ ಪ್ರಯುಕ್ತ ಕೋಲಾಟ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು.…
ಮೈಸೂರು : ನೈಋತ್ಯರೈಲ್ವೆ ಮೈಸೂರು ವಿಭಾಗದ ಡಿಆರ್ಎಂ ಮುದಿತ್ ಮಿತ್ತಲ್ ಅವರು ಅಧಿಕಾರಿಗಳೊಂದಿಗೆ ನಗರದ ವಿವಿಧ ರೈಲು ನಿಲ್ದಾಣಗಳಿಗೆ ಭೇಟಿ…
ಮೈಸೂರು : ಆಂತರಿಕ ಭದ್ರತಾ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಎಂ.ಚಂದ್ರಶೇಖರ್ ಅವರು ಮಂಗಳವಾರ ಬೆಳಿಗ್ಗೆ ಮೈಸೂರಿಗೆ ಭೇಟಿ ನೀಡಿ…