ನವದೆಹಲಿ: ಲೋಕಸಭೆಯಲ್ಲಿಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮೂರು ಮಸೂದೆಗಳನ್ನು ಮಂಡಿಸಿದರು.
ಭಾರೀ ವಿರೋಧದ ನಡುವೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಲೋಕಸಭೆಯಲ್ಲಿ ಸಂವಿಧಾನ ಮಸೂದೆ 2025, ಕೇಂದ್ರಾಡಳಿತ ಪ್ರದೇಶಗಳ ಸರ್ಕಾರ ಮಸೂದೆ 2025, ಜಮ್ಮು ಮತ್ತು ಕಾಶ್ಮೀರದ ಪುನರ್ವಿಂಗಡಣೆ ಮಸೂದೆ 2025ನ್ನು ಮಂಡಿಸಿದರು.
ಇಂದು ಲೋಕಸಭೆಯಲ್ಲಿ ಸಂವಿಧಾನದ 130ನೇ ತಿದ್ದುಪಡಿ ಮಸೂದೆ ಕೂಡ ಮಂಡನೆಯಾಗಿದೆ.
ಈ ಮಸೂದೆ ಮಂಡನೆಯಾಗಿ ಕಾನೂನಾದರೆ ಯಾವುದೇ ಗಂಭೀರ ಪ್ರಕರಣಗಳಲ್ಲಿ 30 ದಿನಗಳ ಕಾಲ ಪ್ರಧಾನಿ, ಮುಖ್ಯಮಂತ್ರಿ, ಸಚಿವರು ಜೈಲಿನಲ್ಲಿದ್ದರೆ ಅವರನ್ನು ಕೂಡಲೇ ಅಧಿಕಾರದಿಂದ ಕೆಳಗಿಳಿಸಲಾಗುತ್ತದೆ.
ಈ ಮಸೂದೆ ಬಗ್ಗೆ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಉತ್ತಮ ಆಡಳಿತ ಮತ್ತು ಸಾಂವಿಧಾನಿಕ ಮೌಲ್ಯಗಳನ್ನು ಕಾಪಾಡಿಕೊಳ್ಳಲು ಈ ಮಸೂದೆ ಅಗತ್ಯವಾಗಿದೆ. ಗಂಭೀರ ಅಪರಾಧಗಳ ಆರೋಪದ ಮೇಲೆ ಬಂಧಿಸಲ್ಪಟ್ಟ ಸಚಿವರು ಅಧಿಕಾರದಲ್ಲಿ ಮುಂದುವರಿದರೆ, ಅದು ಸಾಂವಿಧಾನಿಕ ಮೌಲ್ಯಗಳು ಹಾಗೂ ಉತ್ತಮ ಆಡಳಿತಕ್ಕೆ ಅಪಾಯವನ್ನು ಉಂಟುಮಾಡಬಹುದು ಎಂದು ಹೇಳಿದರು.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…