ಹೊಸದಿಲ್ಲಿ : ಜಾತಿ ಆಧಾರಿತ ರಾಜಕೀಯದ ವಿರುದ್ಧ ವಾಗ್ದಾಳಿ ನಡೆಸಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿ, ವ್ಯಕ್ತಿಯ ಶ್ರೇಷ್ಠತೆಯು ಗುಣಗಳಿಂದ ನಿರ್ಧರಿಸಲ್ಪಡುತ್ತದೆಯೇ ಹೊರತು ಜಾತಿ, ಧರ್ಮ ಅಥವಾ ಲಿಂಗದಿಂದಲ್ಲ ಎಂದು ಹೇಳಿದ್ದಾರೆ.
ಚುನಾವಣೆಯಲ್ಲಿ ತಮಗೆ ಹಾನಿಯಾದರೂ ಈ ತತ್ವದಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಗಡ್ಕರಿ ಹೇಳಿದರು. ಜೋ ಕರೇಗಾ ಜಾತ್ ಕಿ ಬಾತ್, ಉಸ್ಕೊ ಕಾಸ್ ಕೆ ಮರುಂಗಾ ಲಾತ್ ಅಂದರೆ ಜಾತಿಯ ಬಗ್ಗೆ ಮಾತನಾಡುವ ಯಾರನ್ನಾದರೂ ನಾನು ಕಠಿಣವಾಗಿ ಒದೆಯುತ್ತೇನೆ ಎಂದು ಒಮ್ಮೆ ಸಭೆಯನ್ನುದ್ದೇಶಿಸಿ ಹೇಳಿದ್ದೆ ಎಂದು ಅವರು ಹೇಳಿದ್ದಾರೆ.
ಬಿಜೆಪಿಯ ಮಾಜಿ ಅಧ್ಯಕ್ಷ ಮತ್ತು ನಾಗ್ಪುರದಿಂದ ಮೂರು ಬಾರಿ ಸಂಸದರಾಗಿರುವ ಗಡ್ಕರಿ ಅವರು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾಗಿದ್ದಾರೆ. ದೇಶದ ದೂರದ ಮೂಲೆಗಳಿಗೆ ರಸ್ತೆ ಮೂಲಸೌಕರ್ಯವನ್ನು ವಿಸ್ತರಿಸುವಲ್ಲಿ ಅವರ ಸಚಿವಾಲಯದ ಕೆಲಸವು ಹೆಚ್ಚಿನ ಮೆಚ್ಚುಗೆಯನ್ನು ಗಳಿಸಿದೆ.
ನಾಗ್ಪುರದಲ್ಲಿ ನಡೆದ ಸೆಂಟ್ರಲ್ ಇಂಡಿಯಾ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ ಘಟಿಕೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ಡಾ.ಅಬ್ದುಲ್ ಕಲಾಂ ಅವರು ಪರಮಾಣು ವಿಜ್ಞಾನಿಯಾದಾಗ, ಅವರು ಎಷ್ಟು ಸಾಧನೆ ಮಾಡಿದರು ಎಂದರೆ ಅವರ ಹೆಸರು ವಿಶ್ವದಾದ್ಯಂತ ಎಲ್ಲರಿಗೂ ತಲುಪಿತು. ಒಬ್ಬ ವ್ಯಕ್ತಿಯು ಜಾತಿ, ಪಂಥ, ಧರ್ಮ, ಭಾಷೆ ಅಥವಾ ಲಿಂಗದಿಂದ ಶ್ರೇಷ್ಠನಾಗುವುದಿಲ್ಲ, ಆದರೆ ಗುಣಗಳಿಂದ ಶ್ರೇಷ್ಠನಾಗುತ್ತಾನೆ ಎಂದು ನಾನು ನಂಬುತ್ತೇನೆ ಎಂದಿದ್ದಾರೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…