ದೇಶ- ವಿದೇಶ

ಜಿಎಸ್‌ಟಿ ಕಡಿತ : ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಶ್ಲಾಘನೆ

ಹೊಸದಿಲ್ಲಿ : ಕೇಂದ್ರದ ನರೇಂದ್ರ ಮೋದಿ ಅವರ ಸರ್ಕಾರ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯವಸ್ಥೆಯಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ಜಾರಿಗೆ ತಂದಿದ್ದು, ರಾಷ್ಟ್ರಕ್ಕೆ ಐತಿಹಾಸಿಕ ದೀಪಾವಳಿ ಉಡುಗೊರೆ ನೀಡಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಬಣ್ಣಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಸಚಿವರು; ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯು ಮುಂದಿನ ಪೀಳಿಗೆಯ ಜಿಎಸ್‌ಟಿ ಸುಧಾರಣೆಯನ್ನು ಅನುಮೋದಿಸಿದೆ. ಇದು ಜನಜೀವನ ಸುಲಭಗೊಳಿಸುವುದು ಮತ್ತು ಆತ್ಮನಿರ್ಭರಭಾರತ್ ಅನ್ನು ಬಲಪಡಿಸುವ ಒಂದು ಪರಿವರ್ತನಾತ್ಮಕ ಹೆಜ್ಜೆಯಾಗಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ:ರಾಜ್ಯದ ಎಲ್ಲಾ ದೇವಾಲಯಗಳು ಸುರಕ್ಷಿತವಾಗಿದೆ: ಸಚಿವ ರಾಮಲಿಂಗಾರೆಡ್ಡಿ

ಹೊಸ ಸುಧಾರಣೆಯೊಂದಿಗೆ ಜಿಎಸ್‌ಟಿ ಈಗ ಕೇವಲ ಎರಡು ಸ್ಲ್ಯಾಬ್‌ಗಳನ್ನು ಹೊಂದಿದ್ದು, ಅದು 5% ಮತ್ತು 18% ಆಗಿರುತ್ತದೆ. ದೈನಂದಿನ ಜೀವನದ ಅಗತ್ಯ ವಸ್ತುಗಳು, ಆರೋಗ್ಯ ರಕ್ಷಣೆ, ಶಿಕ್ಷಣ, ಕೃಷಿ ಮತ್ತು ವಾಹನಗಳು ಸಹ ಸುಲಭವಾಗಿ ಕೈಗೆಟುಕುವಂತಾಗುತ್ತವೆ. ಜತೆಗೆ, ಉದ್ಯಮಗಳು ಹಾಗೂ ಸಣ್ಣ ಮತ್ತು ಮಧ್ಯಮ ಗಾತ್ರದ ಕೈಗಾರಿಕೆ (MSME) ಗಳು ಭಾರೀ ಉತ್ತೇಜನವನ್ನು ಪಡೆಯುತ್ತವೆ ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ.

ವ್ಯವಸ್ಥೆಯನ್ನು ಸರಳಗೊಳಿಸಿ ಮತ್ತಷ್ಟು ಸುಲಭಗೊಳಿಸುವ ಮತ್ತು ಭಾರತದಾದ್ಯಂತ ಪ್ರತೀ ಮನೆಗೂ ಸಂತೋಷ ಉಂಟು ಮಾಡುವ ನೈಜ ಜನಕೇಂದ್ರಿತ ಸುಧಾರಣೆ ಇದಾಗಿದೆ ಎಂದು ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ನಿಲ್ಲದ ಚಿನ್ನದ ನಾಗಾಲೋಟ : 1.61ಲಕ್ಷ ರೂ.ತಲುಪಿದ ಬಂಗಾರ

1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…

4 hours ago

ಯುವಕನ ಕೊಲೆ ಪ್ರಕರಣ : ಮೂವರು ಆರೋಪಿಗಳ ಬಂಧನ

ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…

5 hours ago

ಪಾದಯಾತ್ರೆ ವೇಳೆ ಚಿರತೆ ದಾಳಿಗೆ ವ್ಯಕ್ತಿ ಬಲಿ ಪ್ರಕರಣ : ಚಿರತೆ ಸೆರೆಗೆ ಅರಣ್ಯ ಇಲಾಖೆ ಕ್ರಮ

ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…

6 hours ago

ಮುಡಾ ನಿವೇಶನ ಹಂಚಿಕೆ ಅಕ್ರಮ ಪ್ರಕರಣ : ಜಿ.ಟಿ.ದಿನೇಶ್‌ಗೆ ಹೈಕೋರ್ಟ್ ಶಾಕ್

ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…

6 hours ago

ಸಮೀಕ್ಷೆ | ಫೆ.10ರೊಳಗೆ ಸರ್ಕಾರಕ್ಕೆ ವರದಿ ಸಲ್ಲಿಕೆ

ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…

7 hours ago

ಅಕ್ರಮ ರೆಸಾರ್ಟ್‌ ವಿರುದ್ದದ ಅನಿರ್ದಿಷ್ಟ ಪ್ರತಿಭಟನೆ ಅಂತ್ಯ

ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…

7 hours ago