hd kumarsw̧amy
ಹೊಸದಿಲ್ಲಿ : ಕೇಂದ್ರದ ನರೇಂದ್ರ ಮೋದಿ ಅವರ ಸರ್ಕಾರ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ವ್ಯವಸ್ಥೆಯಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ಜಾರಿಗೆ ತಂದಿದ್ದು, ರಾಷ್ಟ್ರಕ್ಕೆ ಐತಿಹಾಸಿಕ ದೀಪಾವಳಿ ಉಡುಗೊರೆ ನೀಡಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಬಣ್ಣಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಸಚಿವರು; ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯು ಮುಂದಿನ ಪೀಳಿಗೆಯ ಜಿಎಸ್ಟಿ ಸುಧಾರಣೆಯನ್ನು ಅನುಮೋದಿಸಿದೆ. ಇದು ಜನಜೀವನ ಸುಲಭಗೊಳಿಸುವುದು ಮತ್ತು ಆತ್ಮನಿರ್ಭರಭಾರತ್ ಅನ್ನು ಬಲಪಡಿಸುವ ಒಂದು ಪರಿವರ್ತನಾತ್ಮಕ ಹೆಜ್ಜೆಯಾಗಿದೆ ಎಂದು ಹೇಳಿದ್ದಾರೆ.
ಇದನ್ನು ಓದಿ:ರಾಜ್ಯದ ಎಲ್ಲಾ ದೇವಾಲಯಗಳು ಸುರಕ್ಷಿತವಾಗಿದೆ: ಸಚಿವ ರಾಮಲಿಂಗಾರೆಡ್ಡಿ
ಹೊಸ ಸುಧಾರಣೆಯೊಂದಿಗೆ ಜಿಎಸ್ಟಿ ಈಗ ಕೇವಲ ಎರಡು ಸ್ಲ್ಯಾಬ್ಗಳನ್ನು ಹೊಂದಿದ್ದು, ಅದು 5% ಮತ್ತು 18% ಆಗಿರುತ್ತದೆ. ದೈನಂದಿನ ಜೀವನದ ಅಗತ್ಯ ವಸ್ತುಗಳು, ಆರೋಗ್ಯ ರಕ್ಷಣೆ, ಶಿಕ್ಷಣ, ಕೃಷಿ ಮತ್ತು ವಾಹನಗಳು ಸಹ ಸುಲಭವಾಗಿ ಕೈಗೆಟುಕುವಂತಾಗುತ್ತವೆ. ಜತೆಗೆ, ಉದ್ಯಮಗಳು ಹಾಗೂ ಸಣ್ಣ ಮತ್ತು ಮಧ್ಯಮ ಗಾತ್ರದ ಕೈಗಾರಿಕೆ (MSME) ಗಳು ಭಾರೀ ಉತ್ತೇಜನವನ್ನು ಪಡೆಯುತ್ತವೆ ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ.
ವ್ಯವಸ್ಥೆಯನ್ನು ಸರಳಗೊಳಿಸಿ ಮತ್ತಷ್ಟು ಸುಲಭಗೊಳಿಸುವ ಮತ್ತು ಭಾರತದಾದ್ಯಂತ ಪ್ರತೀ ಮನೆಗೂ ಸಂತೋಷ ಉಂಟು ಮಾಡುವ ನೈಜ ಜನಕೇಂದ್ರಿತ ಸುಧಾರಣೆ ಇದಾಗಿದೆ ಎಂದು ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…