ದೇಶ- ವಿದೇಶ

ವಿಶ್ವಸಂಸ್ಥೆ : ಮಾನವ ಹಕ್ಕು ಮಂಡಳಿಗೆ ಭಾರತ 7ನೇ ಭಾರಿ ಆಯ್ಕೆ

ನ್ಯೂಯಾರ್ಕ್ : ಭಾರತವು ೨೦೨೬-೨೮ರ ಅವಧಿಗೆ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಗೆ (ಯುಎನ್‌ಎಚ್‌ಆರ‍್ಸಿ) ಆಯ್ಕೆಯಾಗಿದ್ದು, ಇದು ಜಿನೀವಾ ಮೂಲದ ಹಕ್ಕುಗಳ ಸಂಸ್ಥೆಯಲ್ಲಿ ದೇಶದ ಏಳನೇ ಅವಧಿಯನ್ನು ಗುರುತಿಸುತ್ತದೆ.

ಮಂಗಳವಾರ ನಡೆದ ಚುನಾವಣೆಯ ಫಲಿತಾಂಶಗಳನ್ನು ಪ್ರಕಟಿಸಿದ ಯುಎನ್‌ಎಚ್‌ಆರ್‌ಸಿ, ಭಾರತದ ಮೂರು ವರ್ಷಗಳ ಅವಧಿ ಜನವರಿ ೧, ೨೦೨೬ ರಂದು ಪ್ರಾರಂಭವಾಗಲಿದೆ ಎಂದು ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ತಿಳಿಸಿದೆ.

ಇದನ್ನು ಓದಿ: ಬ್ರಾಂಡ್‌ ಬೆಂಗಳೂರು ಇಮೇಜ್‌ ಕೆಡಿಸಲು ಸಾಧ್ಯವಿಲ್ಲ : ಗೃಹ ಸಚಿವ ಪರಂ

ವಿಶ್ವಸಂಸ್ಥೆಗೆ ಭಾರತದ ಖಾಯಂ ಪ್ರತಿನಿಧಿ ಪರ್ವತನೇನಿ ಹರೀಶ್, ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಎಲ್ಲಾ ನಿಯೋಗಗಳ ಅಗಾಧ ಬೆಂಬಲಕ್ಕಾಗಿ ಧನ್ಯವಾದ ಅರ್ಪಿಸಿದರು.೨೦೨೬-೨೮ರ ಅವಽಗೆ ಭಾರತ ಇಂದು ಏಳನೇ ಬಾರಿಗೆ ಮಾನವ ಹಕ್ಕುಗಳ ಮಂಡಳಿಗೆ ಆಯ್ಕೆಯಾಗಿದೆ ಎಂದು ಅವರು ಹೇಳಿದರು.

ಈ ಚುನಾವಣೆಯು ಮಾನವ ಹಕ್ಕುಗಳು ಮತ್ತು ಮೂಲ ಸ್ವಾತಂತ್ರ್ಯಗಳಿಗೆ ಭಾರತದ ಅಚಲ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ ಎಂದು ರಾಜತಾಂತ್ರಿಕರು ಹೇಳಿದರು. ನಮ್ಮ ಅಧಿಕಾರಾವಧಿಯಲ್ಲಿ ಈ ಉದ್ದೇಶವನ್ನು ಪೂರೈಸಲು ನಾವು ಎದುರು ನೋಡುತ್ತಿದ್ದೇವೆ ಎಂದು ಅವರು ಹೇಳಿದರು. ಯುಎನ್ ಮಾನವ ಹಕ್ಕುಗಳ ಮಂಡಳಿಯು ಸಮಾನ ಭೌಗೋಳಿಕ ವಿತರಣಾ ನಿಯಮಗಳ ಅಡಿಯಲ್ಲಿ ಮೂರು ವರ್ಷಗಳ ಅವಧಿಗೆ ಯುಎನ್ ಜನರಲ್ ಅಸೆಂಬ್ಲಿಯಿಂದ ಆಯ್ಕೆಯಾದ ೪೭ ಸದಸ್ಯ ರಾಷ್ಟ್ರಗಳನ್ನು ಒಳಗೊಂಡಿದೆ.

ಆಂದೋಲನ ಡೆಸ್ಕ್

Recent Posts

ಮಲ್ಲಯ್ಯನಪುರ ಗುಡ್ಡದಲ್ಲಿ ಥೋರಿಯಂ ಖನಿಜ ನಿಕ್ಷೇಪ ಪತ್ತೆ

ಗುಂಡ್ಲುಪೇಟೆ: ಪಟ್ಟಣ ಮತ್ತು ಮಲ್ಲಯ್ಯನಪುರ ನಡುವಿನ ಅನ್ಗಲ್ ಗುಡ್ಡದ ತಪ್ಪಲಿನ ಪ್ರದೇಶದಲ್ಲಿ ಅಪರೂಪದ ಥೋರಿಯಂ ನಿಕ್ಷೇಪ ಪತ್ತೆಯಾಗಿದೆ. ಹಿಂದಿನ ವರ್ಷ…

3 hours ago

ಓದುಗರ ಪತ್ರ: ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಸ್ಥಳಾಂತರಿಸಿ

ಹೆಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಮೈಸೂರು -ಮಾನಂದವಾಡಿ ಮುಖ್ಯ ರಸ್ತೆಯಲ್ಲಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಖಾಸಗಿ ಕಟ್ಟಡದ ಎರಡನೇ…

3 hours ago

ಓದುಗರ ಪತ್ರ: ಕಾಣಿಕೆ ದುರುಪಯೋಗ ತಡೆಗೆ ಸರ್ಕಾರ ಮುಂದಾಗಲಿ

ಅಯೋಧ್ಯೆಯ ರಾಮ ಮಂದಿರವೂ ಸೇರಿದಂತೆ ದೇಶದ ವಿವಿಧ ದೇವಾಲಯಗಳಲ್ಲಿ ಕಾಣಿಕೆ ಹಣ, ದೇವರಿಗೆ ಭಕ್ತರು ಕಾಣಿಕೆ ರೂಪದಲ್ಲಿ ಸಲ್ಲಿಸುವ ಚಿನ್ನಾಭರಣಗಳು…

3 hours ago

ಓದುಗರ ಪತ್ರ: ಮರದ ಕೆಳಗಿರುವ ವಿದ್ಯುತ್ ಕೇಬಲ್ ತೆರವುಗೊಳಿಸಿ

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ(ಸೆಸ್ಕ್)ದವರು ಮೈಸೂರು ನಗರದ ವಿವಿಧೆಡೆ ಭೂಗತ ಕೇಬಲ್‌ಗಳನ್ನು ಅಳವಡಿಸುತ್ತಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಸೆಸ್ಕ್ ಯುಜಿ ಕೇಬಲ್…

3 hours ago

ಝೆನ್‌ ಕತೆಗಳು: ಸೀಜೋಳ ನಿಜವಾದ ಆತ್ಮ ಯಾವುದು?

ಸಂಗ್ರಹ ಮತ್ತು ಅನುವಾದ ಚೇತನಾ ತೀರ್ಥಹಳ್ಳಿ  ಚೋಕನ್ ಎಂಬವನಿಗೆ ಸೀಜೋ ಎಂಬ ಸುಂದರ ಮಗಳಿದ್ದಳು. ಚೋಕನ್ ತನ್ನ ದೂರದ ಸಂಬಂಧಿಯಾದ…

3 hours ago

ಎಸ್‌ಐಆರ್: ಶೇ.64.09ರಷ್ಟು ನಮೂನೆಗಳ ವಿತರಣೆ

ನವೀನ್ ಡಿಸೋಜ ಕೊಡಗಿನಲ್ಲಿ ಒಟ್ಟು ೪,೬೮,೬೫೭ ಮತದಾರರ ಪೈಕಿ ೩,೦೦,೩೬೯ ಮಂದಿಗೆ ನಮೂನೆ ವಿತರಣೆ; ೯,೧೨೫ ನಮೂನೆಗಳ ಡಿಜಿಟಲೀಕರಣ ಮಡಿಕೇರಿ:…

3 hours ago