ದೇಶ- ವಿದೇಶ

ಉನ್ನಾವೊ ಪ್ರಕರಣ : ಸೆಂಗರ್‌ ಶಿಕ್ಷೆ ಅಮಾನತು ; ಸಂತ್ರಸ್ತೆ ತಾಯಿ ಹೇಳಿದಿಷ್ಟು?

ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ ತಾಯಿ ನಡೆಸುತ್ತಿದ್ದ ಪ್ರತಿಭಟನೆ ವೇಳೆ ಅವರ ಮೇಲೆ ಸಿಆರ್ ಪಿಎಫ್ ಪೊಲೀಸರು ಹಲ್ಲೆ ನಡೆಸಿ, ಅವರ ಸುದ್ದಿಗೋಷ್ಠಿಯನ್ನೂ ತಡೆದಿದ್ದಾರೆ.

ಬುಧವಾರ ದಿಲ್ಲಿಯ ಭದ್ರತಾ ಸಿಬ್ಬಂದಿ ಉನ್ನಾವ್ ಅತ್ಯಾಚಾರ ಸಂತ್ರಸ್ತೆ ಮತ್ತು ಆಕೆಯ ತಾಯಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡದಂತೆ ತಡೆದರು. ಆಕೆಯ ವೃದ್ಧ ತಾಯಿಯನ್ನು ಚಲಿಸುವ ಬಸ್ಸಿನಿಂದ ಇಳಿಯುವಂತೆ ಒತ್ತಾಯಿಸಿದರು ಎನ್ನಲಾಗಿದೆ.

2017 ರ ಉನ್ನಾವ್ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಮಾಜಿ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅವರ ಜೈಲು ಶಿಕ್ಷೆಯನ್ನು ದೆಹಲಿ ಹೈಕೋರ್ಟ್ ಅಮಾನತುಗೊಳಿಸಿದ ಒಂದು ದಿನದ ನಂತರ ಈ ಘಟನೆ ಸಂಭವಿಸಿದೆ.

ಸೆಂಗಾರ್ ಅವರ ಮೇಲ್ಮನವಿ ಇತ್ಯರ್ಥವಾಗುವವರೆಗೆ ನ್ಯಾಯಾಲಯವು ಶಿಕ್ಷೆಯನ್ನು ಕೆಲವು ಷರತ್ತುಗಳಿಗೆ ಒಳಪಟ್ಟು ಅಮಾನತುಗೊಳಿಸಿದೆ ಎನ್ನಲಾಗಿದೆ.

ಸಂತ್ರಸ್ಥೆ ತಾಯಿ ಹೇಳಿದ್ದೇನು?
ಪ್ರತಿಭಟನೆ ವೇಳೆ ಮಾತನಾಡಿದ ಸಂತ್ರಸ್ತೆ, ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿಯೇ ಸೆಂಗಾರ್‌ ಗೆ ಜಾಮೀನು ನೀಡಲಾಗಿದೆ ಎಂದು ಆರೋಪಿಸಿದರು. ಅತ್ಯಾಚಾರ ಆರೋಪಿ ಹೊರಗಿರುವುದು ತಮ್ಮ ಹಾಗೂ ಕುಟುಂಬದ ಸುರಕ್ಷತೆಗೆ ಅಪಾಯಕಾರಿಯಾಗಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು. ಜಾಮೀನು ಆದೇಶ ರದ್ದುಗೊಳಿಸಬೇಕು ಎಂದು ಒತ್ತಾಯಿಸಿದ ಅವರು, ನ್ಯಾಯಕ್ಕಾಗಿ ಸುಪ್ರೀಂ ಕೋರ್ಟ್ ಮೊರೆ ಹೋಗುವುದಾಗಿ ತಿಳಿಸಿದರು.

ಇದನ್ನೂ ಓದಿ:-ರೈತರಿಗೆ ಅಗತ್ಯವಿರುವ ಸೌಲಭ್ಯ ಒದಗಿಸಲು ಸರ್ಕಾರ ಬದ್ದ : ಸಚಿವ ಕೆ.ವೆಂಕಟೇಶ್

ಅಷ್ಟೇ ಅಲ್ಲದೇ, “ನಮಗೆ ನ್ಯಾಯ ಸಿಗಲಿಲ್ಲ. ಅವರು ನನ್ನ ಮಗಳನ್ನು ಸೆರೆಯಾಳುಗಳಂತೆ ಕರೆದುಕೊಂಡು ಹೋಗುತ್ತಿದ್ದಾರೆ. ಈ ಭದ್ರತಾ ಸಿಬ್ಬಂದಿ ನಮ್ಮೆಲ್ಲರನ್ನೂ ಕೊಲ್ಲಲು ಬಯಸುತ್ತಾರೆ. ಕುಲದೀಪ್ ಸೆಂಗಾರ್ ಅವರ ಜಾಮೀನು ರದ್ದುಗೊಳಿಸಬೇಕು. ಇಲ್ಲದಿದ್ದರೆ, ನಾವು ನಮ್ಮ ಪ್ರಾಣವನ್ನೇ ತ್ಯಜಿಸುತ್ತೇವೆ. ನಾವು ಸುರಕ್ಷಿತವಾಗಿಲ್ಲ ಎಂದು ಹೇಳಿದ್ದಾರೆ.

ಏನಿದು ಪ್ರಕರಣ?
2017 ರ ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಸೆಂಗಾರ್ ಅವರ ಜೈಲು ಶಿಕ್ಷೆಯನ್ನು ದೆಹಲಿ ಹೈಕೋರ್ಟ್ ಮಂಗಳವಾರ ಅಮಾನತುಗೊಳಿಸಿದೆ, ಅವರು ಈಗಾಗಲೇ ಏಳು ವರ್ಷ ಐದು ತಿಂಗಳು ಜೈಲು ಶಿಕ್ಷೆಯನ್ನು ಅನುಭವಿಸಿದ್ದಾರೆ ಎಂದು ಕೋರ್ಟ್‌ ಹೇಳಿದೆ. ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಸುಬ್ರಮೋನಿಯಂ ಪ್ರಸಾದ್ ಮತ್ತು ನ್ಯಾಯಮೂರ್ತಿ ಹರೀಶ್ ವೈದ್ಯನಾಥನ್ ಶಂಕರ್ ಅವರ ಪೀಠವು ಸೆಂಗಾರ್ ಅವರಿಗೆ ಹಲವಾರು ಷರತ್ತುಗಳನ್ನು ವಿಧಿಸಿ, 15 ಲಕ್ಷ ರೂಪಾಯಿಗಳ ವೈಯಕ್ತಿಕ ಬಾಂಡ್ ಮತ್ತು ಅದೇ ಮೊತ್ತದ ಮೂವರು ಶ್ಯೂರಿಟಿಗಳನ್ನು ಸಲ್ಲಿಸುವಂತೆ ನಿರ್ದೇಶಿಸಿತು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

5 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

5 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

5 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

5 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

5 hours ago

ತನ್ನನ್ನು ತಾನೇ ಚಿವುಟಿ ಎಚ್ಚರಿಸಿದ್ದ ನೆಹರೂ

ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…

5 hours ago