ಉತ್ತರಪ್ರದೇಶ: ಮನೆಯ ಫ್ರಿಡ್ಜ್ನಲಿ ಗೋಮಾಂಸ ಇಟ್ಟಿದ್ದರು ಎಂದು ಆರೋಪಿಸಿ ಜಿಲ್ಲಾಡಳಿತ 11ಮನೆಗಳನ್ನು ಏಕಾಏಕಿ ದ್ವಂಸ ಮಾಡಿರುವ ಘಟನೆ ಉತ್ತರ ಪ್ರದೇಶದ ಬುಡಕಟ್ಟು ಪ್ರಾಬಲ್ಯದ ಮಾಂಟ್ಲಾದಲ್ಲಿ ನಡೆದಿದೆ.
ಅಕ್ರಮ ಗೋಮಾಂಸ ವಿರುದ್ಧ ಕ್ರಮವಾಗಿ ಈ ಕಾರ್ಯ ಮಾಡಲಾಗಿದ್ದು, ಸರ್ಕಾರಿ ಜಮೀನಿನಲ್ಲಿ ನಿರ್ಮಿಸಿದ್ದ ಎಲ್ಲಾ 11 ಮನೆಗಳನ್ನು ಜಿಲ್ಲಾಡಳಿತ ಜೆಸಿಬಿ ಮೂಲಕ ದ್ವಂಸ ಮಾಡಿದೆ.
ನೈನ್ಪುರದ ಭೈಸವಾಹಿ ಪ್ರದೇಶದಲ್ಲಿ ಗೋವುಗಳನ್ನು ಬಲಿ ಕೊಡಲು ಕರೆ ತಂದಿರುವ ಖಚಿತ ಮಾಹಿತಿ ಮೇರೆಗೆ ರಹಸ್ಯ ಕಾರ್ಯಾಚರಣೆ ಮಾಡಿದ ಸ್ಥಳೀಯ ಪೊಲೀಸರು, ಆರೋಪಿಗಳಿಂದ 150 ದನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಂಡ್ಲಾ ಪೊಲೀಸ್ ವರಿಷ್ಠಾಧಿಕಾರಿ ರಜತ್ ಸಕ್ಲೇಚಾ ತಿಳಿಸಿದ್ದಾರೆ.
ಆರೋಪಿಗಳ 11 ಮನೆಯಲ್ಲಿರುವ ಫ್ರಿಡ್ಜ್ನಿಂದ ಹಸುವಿನ ಚರ್ಮ, ಕೊಬ್ಬು ಹಾಗೂ ಮೂಳೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದನ್ನು ಸ್ಥಳೀಯ ಸರ್ಕಾರಿ ವೈದ್ಯರು ಗೋಮಾಂಸ ಎಂದು ದೃಢಪಡಿಸಿದ್ದಾರೆ. ಡಿಎನ್ಎ ಸ್ಯಾಂಪಲ್ ಕೂಡಾ ಕಲೆಹಾಕಲಾಗಿದೆ. ಇನ್ನು ಎಲ್ಲಾ ಆರೋಪಿಗಳ ಮೇಲೆ ಎಫ್ಐಆರ್ ದಾಖಲಾಗಿದ್ದು, ಸರ್ಕಾರಿ ಸ್ವಾಮ್ಯದ ಜಮೀನಿನಲ್ಲಿ ನಿರ್ಮಿಸಿದ್ದ ಮನೆಗಳನ್ನು ನೆಲಸಮಗೊಳಿಸಲಾಗಿದೆ ಎಂದು ಎಸ್ಪಿ ಸಕ್ಲೇಚಾ ಮಾಹಿತಿ ನೀಡಿದ್ದಾರೆ.
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…
ಹಾಸನ: ನಾನು ಜೆಡಿಎಸ್ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್ ಜಾಸ್ತಿ ಆಗೋದು ಅಷ್ಟೇ. ಏನು…
ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಸದಸ್ಯರು…
ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…
ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…
ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…