ಉ.ಪ್ರದೇಶ | ಚಲಿಸುತ್ತಿದ್ದ ಕಾರಿನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ; ಮೂವರ ಬಂಧನ

ಲಖನೌ : ನಿರ್ಭಯ ಪ್ರಕರಣದ ಮಾದರಿಯಲ್ಲೇ ಚಲಿಸುತ್ತಿದ್ದ ಕಾರಿನಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿ ಆಕೆಯ ಜೊತೆಗಿದ್ದ ಸ್ನೇಹಿತೆಯನ್ನು ಕೆಳಗೆ ತಳ್ಳಿ ಕೊಲೆ ಮಾಡಿರುವ ಪ್ರಕರಣ ಉತ್ತರ ಪ್ರದೇಶದ ಬುಲಂದ್‌ಧಹರ್‌ನಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿ ಆಕೆಯ ಸ್ನೇಹಿತೆಯನ್ನು ಕೊಲೆ ಮಾಡಿರುವ ಮೂವರು ಕಾಮುಕರನ್ನು ಬುಲಂದ್ಯಹರ್ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಗಳು ಗ್ರೇಟರ್ ನೋಯ್ಡಾದಿಂದ ಇಬ್ಬರು ಮಹಿಳೆಯರನ್ನು ಉದ್ಯೋಗದ ಭರವಸೆಯ ಮೇಲೆ ಕರೆದೊಯ್ದು ಲಕ್ನೋಗೆ ಬಿಟ್ಟಿದ್ದರು ಎನ್ನಲಾಗಿದೆ.
ಗ್ರೇಟರ್ ನೋಯ್ಡಾ ನಿವಾಸಿಗಳಾದ ಸಂದೀಪ್ ಮತ್ತು ಅಮಿತ್ ಮತ್ತು ಗಾಜಿಯಾಬಾದ್ ನಿವಾಸಿ ಗೌರವ್ ಎಂದು ಗುರುತಿಸಲಾದ ಪುರುಷರು ಬಿಯರ್ ಖರೀದಿಸಿ ಕಾರಿನಲ್ಲಿ ಕುಡಿಯುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಕುಡಿದ ಮತ್ತಿನಲ್ಲಿ ಇಬ್ಬರನ್ನು ಕಾರಿನಲ್ಲಿ ಹತ್ತಿಸಿಕೊಂಡ ಕಾಮುಕರು ಮೀರತ್ ಜಿಲ್ಲೆಯಲ್ಲಿ ಒಬ್ಬ ಮಹಿಳೆಯನ್ನು ಕಾರಿನಿಂದ ಹೊರಗೆ ತಳ್ಳಿದ್ದರು. ಕೆಳಗೆ ಬಿದ್ದ ರಭಸಕ್ಕೆ ಆಕೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾರಿನಲ್ಲಿ ಇನ್ನೂ ಇದ್ದ ಅಪ್ರಾಪ್ತ ಬಾಲಕಿಯ ಮೇಲೆ ಮೂವರು ಆರೋಪಿಗಳು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

ಆದರೆ ಮೀರತ್‍ನಿಂದ 100 ಕಿಲೋಮೀಟರ್ ದೂರದಲ್ಲಿರುವ ಬುಲಂದ್ಶಹರ್ ಜಿಲ್ಲೆಯ ಖುರ್ಜಾ ಬಳಿ ಆಕೆ ಕಾಮುಕರಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಕೆ ನೀಡಿದ ದೂರಿನ ಆಧಾರದ ಮೇರೆಗೆ ಕೀಯಾ ಕಾರಿನಲ್ಲಿದ್ದ ಮೂವರು ಕಾಮುಕರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ತನಿಖೆಯನ್ನು ಪೂರ್ಣಗೊಳಿಸಿದ್ದೇವೆ. ನ್ಯಾಯಾಲಯವು ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಈ ನಿಟ್ಟಿನಲ್ಲಿ ನಾವು ಎಲ್ಲಾ ಪ್ರಯತ್ನವನ್ನು ಮಾಡಿದ್ದೇವೆ ಎಂದು ಹಿರಿಯ ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ರೈತರ ನಿದ್ದೆಗೆಡಿಸಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಕಿಕ್ಕೇರಿ: ಹೋಬಳಿಯ ಗೊಲ್ಲರಕೊಪ್ಪಲು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ ಹಲವು ದಿನಗಳಿಂದ ರೈತರಿಗೆ ಆತಂಕ ಸೃಷ್ಟಿಸಿ ಜಾನುವಾರುಗಳು ಹಾಗೂ ಸಾಕು…

2 hours ago

ಶಿವಶಂಕರಪ್ಪ ಸಾಹುಕಾರ್‌ಗೆ ಹೊಸ ಕಾನೂನು ಸಂಕಷ್ಟ

ಬೆಂಗಳೂರು: ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಹುದ್ದೆಯಿಂದ ಅಮಾನತುಗೊಳಿಸಿದ ಬೆನ್ನಲ್ಲೇ ಈ ಹೊಸ ಕಾನೂನು ಸಂಕಷ್ಟ ಎದುರಾಗಿದೆ.…

5 hours ago

ಗೋಪಾಲಸ್ವಾಮಿ ಬೆಟ್ಟ: ಕೊನೆಗೂ ಭಕ್ತರಿಗೆ ಸಿಕ್ಕಿತು ನೆರಳು!

ಬೆಟ್ಟದಲ್ಲಿ ಬಸ್ ನಿಲ್ದಾಣದ ಉದ್ಘಾಟನೆ ನೆರವೇರಿಸಿದ ಶಾಸಕ; ಸಮಸ್ಯೆ ಕುರಿತು ಬೆಳಕು ಚೆಲ್ಲಿದ್ದ ‘ಆಂದೋಲನ’ ಗುಂಡ್ಲುಪೇಟೆ: ತಾಲ್ಲೂಕಿನ ಹಿಮವದ್ ಗೋಪಾಲಸ್ವಾಮಿ…

9 hours ago

ಓದುಗರ ಪತ್ರ: ಅಧ್ಯಾತ್ಮ ದುರಂತ!

ಅಧ್ಯಾತ್ಮ ದುರಂತ! ಲೌಕಿಕ ಬದುಕಿನ ಆಶೆ ಆಮಿಷಗಳ ಸೆರೆಮನೆಯಿಂದ ಬಿಡಿಸಿಕೊಳುವ ಸನ್ಮಾರ್ಗವನು ಅಧ್ಯಾತ್ಮವೆನ್ನುವರು ಪ್ರಾಜ್ಞರು! ಆದರೀಗ ಲೌಕಿಕದ ಆಶೆ ಆಮಿಷಗಳ…

13 hours ago

ಓದುಗರ ಪತ್ರ: ರಸ್ತೆ, ಉದ್ಯಾನಕ್ಕೆ ಎಸ್. ಜಾನಕಿ ಅವರ ಹೆಸರಿಡಿ

ಭಾರತೀಯ ಚಿತ್ರರಂಗದ ಗಾನಕೋಗಿಲೆ ಎಸ್.ಜಾನಕಿ ಅವರ ಸಾಧನೆ ಎಂದೆಂದಿಗೂ ಅಜರಾಮರ. ಅವರ ಹೆಸರನ್ನು ಮುಂದಿನ ಪೀಳಿಗೆಗೂ ಪರಿಚಯಿಸುವ ಮೂಲಕ ಚಿರಸ್ಥಾಯಿಯಾಗಿಸಲು…

13 hours ago

ಓದುಗರ ಪತ್ರ: ಚಾಮರಾಜಪುರಂನಲ್ಲಿ ರೈಲುಗಳ ನಿಲುಗಡೆಯಾಗಲಿ

ಮೈಸೂರಿನ ಅಶೋಕಪುರಂನಿಂದ ಚೆನ್ನೆ ಗೆ ತೆರಳುವ ಚೆನ್ನೆ ನಿಂದ - ಅಶೋಕಪುರಂಗೆ ಆಗಮಿಸುವ ೧೬೫೫೧ ಎಂಜಿಆರ್ ಚೆನ್ನೈಎಕ್ಸ್ ಪ್ರೆಸ್, ೨೦೬೨೪…

13 hours ago