ದೇಶ- ವಿದೇಶ

ಬದಲಾಗಲಿದೆ ಯುಪಿಐ ಪೇಮೆಂಟ್‌ನ ನಿಯಮ : ಆ 1 ರಿಂದ ಹೊಸ ನಿಯಮ ಜಾರಿ

  • ಗರಿಷ್ಟ 50 ಬಾರಿ ಮಾತ್ರ ಬ್ಯಾಲೆನ್ಸ್ ಚೆಕ್
  • ದಿನಕ್ಕೆ 25 ಬಾರಿ ಮಾತ್ರ ಬ್ಯಾಂಕ್ ಖಾತೆ ಮಾಹಿತಿ
  • ವಹಿವಾಟು ಬಾಕಿ ಪರಿಶೀಲನೆ : 3 ಬಾರಿ ಮಾತ್ರ

ಹೊಸದಿಲ್ಲಿ : ಯುಪಿಐ ಪೇಮೆಂಟ್‌ನಲ್ಲಿ ಆ.1  ರಿಂದ ಕೆಲ ಪ್ರಮುಖ ಬದಲಾವಣೆಯಾಗಲಿದೆ. ಇದರಿಂದ ಬಳಕೆದಾರರಿಗೆ ಕೊಂಚ ಅನೂನುಕೂಲ ಉಂಟಾಗುವ ಸಾಧ್ಯತೆಯೂ ಇದೆ.

ಯುನಿಫೈಡ್ ಪೇಮೆಂಟ್ಸ್ ಇಂಟರ್‌ಫೇಸ್ ನಿಯಮಗಳಲ್ಲಿ ಮಹತ್ವದ ಬದಲಾವಣೆಗಳ ಜಾರಿಗೆ ತರಲು ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಮುಂದಾಗಿದೆ. ಈ ಹೊಸ ಮಾರ್ಗಸೂಚಿಗಳು ಗೂಗಲ್ ಪೇ, ಫೋನ್ ಪೇ ಮತ್ತು ಪೇಟಿಎಂನಂತಹ ಡಿಜಿಟಲ್ ಪಾವತಿ ಆಪ್‌ಗಳಿಗೆ ಅನ್ವಯವಾಗಲಿವೆ. ಈ ಬದಲಾವಣೆಗಳು ಬಳಕೆದಾರರ ದೈನಂದಿನ ವಹಿವಾಟುಗಳ ಮೇಲೆ ಅಂತಹ ಬದಲಾವಣೆಗಳನ್ನೇನೂ ತರುವುದಿಲ್ಲವಾದರೂ, ಬ್ಯಾಲೆನ್ಸ್ ಚೆಕ್ ಮತ್ತು ಆಟೋ ಡೆಬಿಟ್‌ಗಳಂತಹ ಕೆಲವು ಕಾರ್ಯಗಳಿಗೆ ಮಿತಿಗಳನ್ನು ಹೇರಲಿದೆ.

ಹೊಸ ನಿಯಮಗಳ ಪ್ರಕಾರ, ಬಳಕೆದಾರರು ಪ್ರತಿ ಯುಪಿಐ ಅಪ್ಲಿಕೇಶನ್‌ನಲ್ಲಿ ದಿನಕ್ಕೆ ಗರಿಷ್ಟ 50 ಬಾರಿ ಮಾತ್ರ ಬ್ಯಾಲೆನ್ಸ್ ಚೆಕ್ ಮಾಡಲು ಅವಕಾಶ ಇರಲಿದೆ. ಅದಲ್ಲದೇ ನಿಮ್ಮ ಮೊಬೈಲ್ ಸಂಖ್ಯೆಗೆ ಲಿಂಕ್ ಮಾಡಲಾದ ಬ್ಯಾಂಕ್ ಖಾತೆಗಳ ಮಾಹಿತಿಯನ್ನು ದಿನಕ್ಕೆ 25 ಬಾರಿ ಮಾತ್ರ ಪಡೆಯಲು ಅವಕಾಶವಿರಲಿದೆ.

ಇನ್ನೂ ಬ್ಯಾಲೆನ್ಸ್ ಚೆಕ್ ಮಾಡುವುದರ ಜೊತೆಗೆ ಓಟಿಟಿ ಸೇರಿದಂತೆ ಮೊಬೈಲ್ ರಿಚಾರ್ಜ್‌ಗಳ ಆಟೋ ಪೇಗೆ ಸಮಯ ನಿಗದಿಯಾಗಿದ್ದು, ಆ ಸಮಯ ಸಂಧರ್ಭದಲ್ಲಿ ಮಾತ್ರ ಪಾವತಿಗೆ ಅವಕಾಶ ಇರಲಿದೆ. ಮೂರು ನಿರ್ದಿಷ್ಟ ಸಮಯದ ಸ್ಲಾಟ್‌ಗಳನ್ನು ನಿಗದಿಪಡಿಸಲಾಗಿದೆ. ಪೀಕ್ ಅವರ್‌ಗಳಲ್ಲಿ ಸರ್ವರ್‌ಗಳ ಮೇಲಿನ ಒತ್ತಡ ಕಡಿಮೆ ಮಾಡಲು ಈ ಪಾವತಿಗಳನ್ನು ಬೆಳಗ್ಗೆ 10 ಗಂಟೆಗೂ ಮುನ್ನ, ಮಧ್ಯಾಹ್ನ 1 ರಿಂದ ಸಂಜೆ 5 ಗಂಟೆಯ ನಡುವೆ, ಮತ್ತು ರಾತ್ರಿ 9.30ರ ನಂತರ ಮಾತ್ರ ಆಟೋ ಪೇ ಪ್ರಕ್ರಿಯೆ ನಡೆಯಲಿದೆ.

ಇಷ್ಟೇ ಅಲ್ಲ ವಹಿವಾಟು ಬಾಕಿ ಉಳಿದಿರೋದನ್ನು ಪರಿಶೀಲನೆ ಮಿತಿಯನ್ನು ಮೂರು ಬಾರಿಗೆ ಮಾತ್ರ ಪರಿಶೀಲಿಸಲು ಅವಕಾಶ ನೀಡಲಾಗಿದೆ. ಪ್ರತಿ ಪ್ರಯತ್ನದ ನಡುವೆ ಕಡ್ಡಾಯವಾಗಿ 90 ಸೆಕೆಂಡ್ ಅಂತರ ಇರಲೇಬೇಕು. ಇದರಿಂದ ಬಳಕೆದಾರರು ಕೊಂಚ ಪರಿತಪಿಸಬೇಕಾಗುತ್ತದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನವೆಂಬರ್‌ನಲ್ಲೇ 1.59 ಕೋಟಿ ರೂ ರಾಜಸ್ವ ಸಂಗ್ರಹ

ನವೀನ್ ಡಿಸೋಜ ಮಡಿಕೇರಿ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳ ಸಾಧನೆ ಜಿಲ್ಲೆಯಾದ್ಯಂತ ನಿರಂತರ ವ್ಯಾಪಕ ತಪಾಸಣಾ ಕ್ರಮ ಮಡಿಕೇರಿ: ಪ್ರಾದೇಶಿಕ…

2 hours ago

ಅದ್ದೂರಿಯಾಗಿ ನೆರವೇರಿದ ಶ್ರೀ ಮುತ್ತುರಾಯಸ್ವಾಮಿ ಜಾತ್ರೆ

ನಾಗರಹೊಳೆ ಅರಣ್ಯದ ಮಧ್ಯಭಾಗದಲ್ಲಿರುವ ದೇವಸ್ಥಾನಕ್ಕೆ ವಿವಿಧೆಡೆಯಿಂದ ಸಾವಿರಾರು ಮಂದಿ ಭೇಟಿ ಪಿರಿಯಾಪಟ್ಟಣ: ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಆನೆಚೌಕೂರು ಮೀಸಲು…

2 hours ago

ಹಳೆಯ ವಿದ್ಯಾರ್ಥಿಗಳಿಂದ ಕನ್ನಡಮಯವಾದ ಸರ್ಕಾರಿ ಶಾಲೆ

ಎಂ.ಗೂಳೀಪುರ ನಂದೀಶ್ ಕೆಸ್ತೂರು ಪ್ರೌಢಶಾಲೆಯ ಸುತ್ತುಗೋಡೆಯಲ್ಲಿ ಕನ್ನಡ ಸಾಹಿತಿಗಳ, ಸಾಧಕರ ಸೊಗಸಾದ ಚಿತ್ರಗಳ ಚಿತ್ತಾರ ಯಳಂದೂರು: ಶಾಲೆಯ ಸುತ್ತುಗೋಡೆಯಲ್ಲಿ ರಾರಾಜಿಸುತ್ತಿರುವ…

2 hours ago

ಈ ಬಾರಿಯೂ ತೆಪ್ಪೋತ್ಸವ ನಡೆಯುವುದು ಅನುಮಾನ

ಎಂ.ಬಿ.ರಂಗಸ್ವಾಮಿ ಮೂಗೂರಿನ ತ್ರಿಪುರ ಸುಂದರಿ ದೇಗುಲದ ನೂತನ ಕಲ್ಯಾಣಿಯಲ್ಲಿ ೪ ವರ್ಷಗಳಿಂದ ನಡೆಯದ ತೆಪ್ಪೋತ್ಸವ ಮೂಗೂರು: ಐತಿಹಾಸಿಕ ಹಿನ್ನೆಲೆಯುಳ್ಳ ಧಾರ್ಮಿಕ…

2 hours ago

ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಲೋಕಾ ಪೊಲೀಸ್‌ ಕಸ್ಟಡಿಗೆ : ಕೋರ್ಟ್‌ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್‌…

10 hours ago