ಹೊಸದಿಲ್ಲಿ : ಯುಪಿಐ ಪೇಮೆಂಟ್ನಲ್ಲಿ ಆ.1 ರಿಂದ ಕೆಲ ಪ್ರಮುಖ ಬದಲಾವಣೆಯಾಗಲಿದೆ. ಇದರಿಂದ ಬಳಕೆದಾರರಿಗೆ ಕೊಂಚ ಅನೂನುಕೂಲ ಉಂಟಾಗುವ ಸಾಧ್ಯತೆಯೂ ಇದೆ.
ಯುನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್ ನಿಯಮಗಳಲ್ಲಿ ಮಹತ್ವದ ಬದಲಾವಣೆಗಳ ಜಾರಿಗೆ ತರಲು ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಮುಂದಾಗಿದೆ. ಈ ಹೊಸ ಮಾರ್ಗಸೂಚಿಗಳು ಗೂಗಲ್ ಪೇ, ಫೋನ್ ಪೇ ಮತ್ತು ಪೇಟಿಎಂನಂತಹ ಡಿಜಿಟಲ್ ಪಾವತಿ ಆಪ್ಗಳಿಗೆ ಅನ್ವಯವಾಗಲಿವೆ. ಈ ಬದಲಾವಣೆಗಳು ಬಳಕೆದಾರರ ದೈನಂದಿನ ವಹಿವಾಟುಗಳ ಮೇಲೆ ಅಂತಹ ಬದಲಾವಣೆಗಳನ್ನೇನೂ ತರುವುದಿಲ್ಲವಾದರೂ, ಬ್ಯಾಲೆನ್ಸ್ ಚೆಕ್ ಮತ್ತು ಆಟೋ ಡೆಬಿಟ್ಗಳಂತಹ ಕೆಲವು ಕಾರ್ಯಗಳಿಗೆ ಮಿತಿಗಳನ್ನು ಹೇರಲಿದೆ.
ಹೊಸ ನಿಯಮಗಳ ಪ್ರಕಾರ, ಬಳಕೆದಾರರು ಪ್ರತಿ ಯುಪಿಐ ಅಪ್ಲಿಕೇಶನ್ನಲ್ಲಿ ದಿನಕ್ಕೆ ಗರಿಷ್ಟ 50 ಬಾರಿ ಮಾತ್ರ ಬ್ಯಾಲೆನ್ಸ್ ಚೆಕ್ ಮಾಡಲು ಅವಕಾಶ ಇರಲಿದೆ. ಅದಲ್ಲದೇ ನಿಮ್ಮ ಮೊಬೈಲ್ ಸಂಖ್ಯೆಗೆ ಲಿಂಕ್ ಮಾಡಲಾದ ಬ್ಯಾಂಕ್ ಖಾತೆಗಳ ಮಾಹಿತಿಯನ್ನು ದಿನಕ್ಕೆ 25 ಬಾರಿ ಮಾತ್ರ ಪಡೆಯಲು ಅವಕಾಶವಿರಲಿದೆ.
ಇನ್ನೂ ಬ್ಯಾಲೆನ್ಸ್ ಚೆಕ್ ಮಾಡುವುದರ ಜೊತೆಗೆ ಓಟಿಟಿ ಸೇರಿದಂತೆ ಮೊಬೈಲ್ ರಿಚಾರ್ಜ್ಗಳ ಆಟೋ ಪೇಗೆ ಸಮಯ ನಿಗದಿಯಾಗಿದ್ದು, ಆ ಸಮಯ ಸಂಧರ್ಭದಲ್ಲಿ ಮಾತ್ರ ಪಾವತಿಗೆ ಅವಕಾಶ ಇರಲಿದೆ. ಮೂರು ನಿರ್ದಿಷ್ಟ ಸಮಯದ ಸ್ಲಾಟ್ಗಳನ್ನು ನಿಗದಿಪಡಿಸಲಾಗಿದೆ. ಪೀಕ್ ಅವರ್ಗಳಲ್ಲಿ ಸರ್ವರ್ಗಳ ಮೇಲಿನ ಒತ್ತಡ ಕಡಿಮೆ ಮಾಡಲು ಈ ಪಾವತಿಗಳನ್ನು ಬೆಳಗ್ಗೆ 10 ಗಂಟೆಗೂ ಮುನ್ನ, ಮಧ್ಯಾಹ್ನ 1 ರಿಂದ ಸಂಜೆ 5 ಗಂಟೆಯ ನಡುವೆ, ಮತ್ತು ರಾತ್ರಿ 9.30ರ ನಂತರ ಮಾತ್ರ ಆಟೋ ಪೇ ಪ್ರಕ್ರಿಯೆ ನಡೆಯಲಿದೆ.
ಇಷ್ಟೇ ಅಲ್ಲ ವಹಿವಾಟು ಬಾಕಿ ಉಳಿದಿರೋದನ್ನು ಪರಿಶೀಲನೆ ಮಿತಿಯನ್ನು ಮೂರು ಬಾರಿಗೆ ಮಾತ್ರ ಪರಿಶೀಲಿಸಲು ಅವಕಾಶ ನೀಡಲಾಗಿದೆ. ಪ್ರತಿ ಪ್ರಯತ್ನದ ನಡುವೆ ಕಡ್ಡಾಯವಾಗಿ 90 ಸೆಕೆಂಡ್ ಅಂತರ ಇರಲೇಬೇಕು. ಇದರಿಂದ ಬಳಕೆದಾರರು ಕೊಂಚ ಪರಿತಪಿಸಬೇಕಾಗುತ್ತದೆ.
ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…
ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…
ಬೆಂಗಳೂರು : ರಾಜ್ಯದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಪಾರದರ್ಶಕ ನೇಮಕಾತಿ ಮಾಡಬೇಕಾದ ಕರ್ನಾಟಕ ಲೋಕಸೇವಾ ಆಯೋಗ ಅಕ್ರಮಗಳಲ್ಲಿ ಮುಳುಗಿದೆ. ಸರ್ಕಾರ ಒಂದೇ…
ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…
ಮಂಡ್ಯ : ಆಧುನಿಕ ಜಗತ್ತಿನಲ್ಲಿ ಪುರುಷರ ಮೇಲಿನ ದೌರ್ಜನ್ಯ ಮತ್ತು ದಬ್ಬಾಳಿಗೆ ಹತ್ತಿಕ್ಕಲು ರಾಜ್ಯ ಮಾನವ ಹಕ್ಕುಗಳ ಪುರುಷರ ಹಿತರಕ್ಷಣಾ…
ಬೆಂಗಳೂರು : ಬಾಬಾಸಾಹೇಬ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಶಕ್ತಿಯಿಂದಲೇ ನಾನಿಂದು ಮುಖ್ಯಮಂತ್ರಿಯಾಗಿ ಜನಸೇವೆ ಸಲ್ಲಿಸಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ…