ಹೊಸದಿಲ್ಲಿ : ಯುಪಿಐ ಪೇಮೆಂಟ್ನಲ್ಲಿ ಆ.1 ರಿಂದ ಕೆಲ ಪ್ರಮುಖ ಬದಲಾವಣೆಯಾಗಲಿದೆ. ಇದರಿಂದ ಬಳಕೆದಾರರಿಗೆ ಕೊಂಚ ಅನೂನುಕೂಲ ಉಂಟಾಗುವ ಸಾಧ್ಯತೆಯೂ ಇದೆ.
ಯುನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್ ನಿಯಮಗಳಲ್ಲಿ ಮಹತ್ವದ ಬದಲಾವಣೆಗಳ ಜಾರಿಗೆ ತರಲು ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಮುಂದಾಗಿದೆ. ಈ ಹೊಸ ಮಾರ್ಗಸೂಚಿಗಳು ಗೂಗಲ್ ಪೇ, ಫೋನ್ ಪೇ ಮತ್ತು ಪೇಟಿಎಂನಂತಹ ಡಿಜಿಟಲ್ ಪಾವತಿ ಆಪ್ಗಳಿಗೆ ಅನ್ವಯವಾಗಲಿವೆ. ಈ ಬದಲಾವಣೆಗಳು ಬಳಕೆದಾರರ ದೈನಂದಿನ ವಹಿವಾಟುಗಳ ಮೇಲೆ ಅಂತಹ ಬದಲಾವಣೆಗಳನ್ನೇನೂ ತರುವುದಿಲ್ಲವಾದರೂ, ಬ್ಯಾಲೆನ್ಸ್ ಚೆಕ್ ಮತ್ತು ಆಟೋ ಡೆಬಿಟ್ಗಳಂತಹ ಕೆಲವು ಕಾರ್ಯಗಳಿಗೆ ಮಿತಿಗಳನ್ನು ಹೇರಲಿದೆ.
ಹೊಸ ನಿಯಮಗಳ ಪ್ರಕಾರ, ಬಳಕೆದಾರರು ಪ್ರತಿ ಯುಪಿಐ ಅಪ್ಲಿಕೇಶನ್ನಲ್ಲಿ ದಿನಕ್ಕೆ ಗರಿಷ್ಟ 50 ಬಾರಿ ಮಾತ್ರ ಬ್ಯಾಲೆನ್ಸ್ ಚೆಕ್ ಮಾಡಲು ಅವಕಾಶ ಇರಲಿದೆ. ಅದಲ್ಲದೇ ನಿಮ್ಮ ಮೊಬೈಲ್ ಸಂಖ್ಯೆಗೆ ಲಿಂಕ್ ಮಾಡಲಾದ ಬ್ಯಾಂಕ್ ಖಾತೆಗಳ ಮಾಹಿತಿಯನ್ನು ದಿನಕ್ಕೆ 25 ಬಾರಿ ಮಾತ್ರ ಪಡೆಯಲು ಅವಕಾಶವಿರಲಿದೆ.
ಇನ್ನೂ ಬ್ಯಾಲೆನ್ಸ್ ಚೆಕ್ ಮಾಡುವುದರ ಜೊತೆಗೆ ಓಟಿಟಿ ಸೇರಿದಂತೆ ಮೊಬೈಲ್ ರಿಚಾರ್ಜ್ಗಳ ಆಟೋ ಪೇಗೆ ಸಮಯ ನಿಗದಿಯಾಗಿದ್ದು, ಆ ಸಮಯ ಸಂಧರ್ಭದಲ್ಲಿ ಮಾತ್ರ ಪಾವತಿಗೆ ಅವಕಾಶ ಇರಲಿದೆ. ಮೂರು ನಿರ್ದಿಷ್ಟ ಸಮಯದ ಸ್ಲಾಟ್ಗಳನ್ನು ನಿಗದಿಪಡಿಸಲಾಗಿದೆ. ಪೀಕ್ ಅವರ್ಗಳಲ್ಲಿ ಸರ್ವರ್ಗಳ ಮೇಲಿನ ಒತ್ತಡ ಕಡಿಮೆ ಮಾಡಲು ಈ ಪಾವತಿಗಳನ್ನು ಬೆಳಗ್ಗೆ 10 ಗಂಟೆಗೂ ಮುನ್ನ, ಮಧ್ಯಾಹ್ನ 1 ರಿಂದ ಸಂಜೆ 5 ಗಂಟೆಯ ನಡುವೆ, ಮತ್ತು ರಾತ್ರಿ 9.30ರ ನಂತರ ಮಾತ್ರ ಆಟೋ ಪೇ ಪ್ರಕ್ರಿಯೆ ನಡೆಯಲಿದೆ.
ಇಷ್ಟೇ ಅಲ್ಲ ವಹಿವಾಟು ಬಾಕಿ ಉಳಿದಿರೋದನ್ನು ಪರಿಶೀಲನೆ ಮಿತಿಯನ್ನು ಮೂರು ಬಾರಿಗೆ ಮಾತ್ರ ಪರಿಶೀಲಿಸಲು ಅವಕಾಶ ನೀಡಲಾಗಿದೆ. ಪ್ರತಿ ಪ್ರಯತ್ನದ ನಡುವೆ ಕಡ್ಡಾಯವಾಗಿ 90 ಸೆಕೆಂಡ್ ಅಂತರ ಇರಲೇಬೇಕು. ಇದರಿಂದ ಬಳಕೆದಾರರು ಕೊಂಚ ಪರಿತಪಿಸಬೇಕಾಗುತ್ತದೆ.
ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…
ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…
ಬೆಂಗಳೂರು: ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ…
ಮೈಸೂರು: ಇಂದು ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಮಹಾಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಇಡೀ…
ಈ ವರ್ಷ ನಾಡ ಹಬ್ಬ ದಸರಾದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸಲು ಸರ್ಕಾರ ಹಠಕ್ಕೆ ಬಿದ್ದಂತೆ ವರ್ತಿಸುತ್ತಿದೆ. ಈಗಾಗಲೇ ಸಾರ್ವಜನಿಕರು ಹಾಗೂ…
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನೆಲೆಸಿರುವ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಪ್ರತಿ ವರ್ಷ ಆಷಾಢ ಮಾಸದ ಶುಕ್ರವಾರಗಳಂದು…