ದೇಶ- ವಿದೇಶ

ಬದಲಾಗಲಿದೆ ಯುಪಿಐ ಪೇಮೆಂಟ್‌ನ ನಿಯಮ : ಆ 1 ರಿಂದ ಹೊಸ ನಿಯಮ ಜಾರಿ

  • ಗರಿಷ್ಟ 50 ಬಾರಿ ಮಾತ್ರ ಬ್ಯಾಲೆನ್ಸ್ ಚೆಕ್
  • ದಿನಕ್ಕೆ 25 ಬಾರಿ ಮಾತ್ರ ಬ್ಯಾಂಕ್ ಖಾತೆ ಮಾಹಿತಿ
  • ವಹಿವಾಟು ಬಾಕಿ ಪರಿಶೀಲನೆ : 3 ಬಾರಿ ಮಾತ್ರ

ಹೊಸದಿಲ್ಲಿ : ಯುಪಿಐ ಪೇಮೆಂಟ್‌ನಲ್ಲಿ ಆ.1  ರಿಂದ ಕೆಲ ಪ್ರಮುಖ ಬದಲಾವಣೆಯಾಗಲಿದೆ. ಇದರಿಂದ ಬಳಕೆದಾರರಿಗೆ ಕೊಂಚ ಅನೂನುಕೂಲ ಉಂಟಾಗುವ ಸಾಧ್ಯತೆಯೂ ಇದೆ.

ಯುನಿಫೈಡ್ ಪೇಮೆಂಟ್ಸ್ ಇಂಟರ್‌ಫೇಸ್ ನಿಯಮಗಳಲ್ಲಿ ಮಹತ್ವದ ಬದಲಾವಣೆಗಳ ಜಾರಿಗೆ ತರಲು ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಮುಂದಾಗಿದೆ. ಈ ಹೊಸ ಮಾರ್ಗಸೂಚಿಗಳು ಗೂಗಲ್ ಪೇ, ಫೋನ್ ಪೇ ಮತ್ತು ಪೇಟಿಎಂನಂತಹ ಡಿಜಿಟಲ್ ಪಾವತಿ ಆಪ್‌ಗಳಿಗೆ ಅನ್ವಯವಾಗಲಿವೆ. ಈ ಬದಲಾವಣೆಗಳು ಬಳಕೆದಾರರ ದೈನಂದಿನ ವಹಿವಾಟುಗಳ ಮೇಲೆ ಅಂತಹ ಬದಲಾವಣೆಗಳನ್ನೇನೂ ತರುವುದಿಲ್ಲವಾದರೂ, ಬ್ಯಾಲೆನ್ಸ್ ಚೆಕ್ ಮತ್ತು ಆಟೋ ಡೆಬಿಟ್‌ಗಳಂತಹ ಕೆಲವು ಕಾರ್ಯಗಳಿಗೆ ಮಿತಿಗಳನ್ನು ಹೇರಲಿದೆ.

ಹೊಸ ನಿಯಮಗಳ ಪ್ರಕಾರ, ಬಳಕೆದಾರರು ಪ್ರತಿ ಯುಪಿಐ ಅಪ್ಲಿಕೇಶನ್‌ನಲ್ಲಿ ದಿನಕ್ಕೆ ಗರಿಷ್ಟ 50 ಬಾರಿ ಮಾತ್ರ ಬ್ಯಾಲೆನ್ಸ್ ಚೆಕ್ ಮಾಡಲು ಅವಕಾಶ ಇರಲಿದೆ. ಅದಲ್ಲದೇ ನಿಮ್ಮ ಮೊಬೈಲ್ ಸಂಖ್ಯೆಗೆ ಲಿಂಕ್ ಮಾಡಲಾದ ಬ್ಯಾಂಕ್ ಖಾತೆಗಳ ಮಾಹಿತಿಯನ್ನು ದಿನಕ್ಕೆ 25 ಬಾರಿ ಮಾತ್ರ ಪಡೆಯಲು ಅವಕಾಶವಿರಲಿದೆ.

ಇನ್ನೂ ಬ್ಯಾಲೆನ್ಸ್ ಚೆಕ್ ಮಾಡುವುದರ ಜೊತೆಗೆ ಓಟಿಟಿ ಸೇರಿದಂತೆ ಮೊಬೈಲ್ ರಿಚಾರ್ಜ್‌ಗಳ ಆಟೋ ಪೇಗೆ ಸಮಯ ನಿಗದಿಯಾಗಿದ್ದು, ಆ ಸಮಯ ಸಂಧರ್ಭದಲ್ಲಿ ಮಾತ್ರ ಪಾವತಿಗೆ ಅವಕಾಶ ಇರಲಿದೆ. ಮೂರು ನಿರ್ದಿಷ್ಟ ಸಮಯದ ಸ್ಲಾಟ್‌ಗಳನ್ನು ನಿಗದಿಪಡಿಸಲಾಗಿದೆ. ಪೀಕ್ ಅವರ್‌ಗಳಲ್ಲಿ ಸರ್ವರ್‌ಗಳ ಮೇಲಿನ ಒತ್ತಡ ಕಡಿಮೆ ಮಾಡಲು ಈ ಪಾವತಿಗಳನ್ನು ಬೆಳಗ್ಗೆ 10 ಗಂಟೆಗೂ ಮುನ್ನ, ಮಧ್ಯಾಹ್ನ 1 ರಿಂದ ಸಂಜೆ 5 ಗಂಟೆಯ ನಡುವೆ, ಮತ್ತು ರಾತ್ರಿ 9.30ರ ನಂತರ ಮಾತ್ರ ಆಟೋ ಪೇ ಪ್ರಕ್ರಿಯೆ ನಡೆಯಲಿದೆ.

ಇಷ್ಟೇ ಅಲ್ಲ ವಹಿವಾಟು ಬಾಕಿ ಉಳಿದಿರೋದನ್ನು ಪರಿಶೀಲನೆ ಮಿತಿಯನ್ನು ಮೂರು ಬಾರಿಗೆ ಮಾತ್ರ ಪರಿಶೀಲಿಸಲು ಅವಕಾಶ ನೀಡಲಾಗಿದೆ. ಪ್ರತಿ ಪ್ರಯತ್ನದ ನಡುವೆ ಕಡ್ಡಾಯವಾಗಿ 90 ಸೆಕೆಂಡ್ ಅಂತರ ಇರಲೇಬೇಕು. ಇದರಿಂದ ಬಳಕೆದಾರರು ಕೊಂಚ ಪರಿತಪಿಸಬೇಕಾಗುತ್ತದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

2 hours ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

2 hours ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

4 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

4 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

4 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

12 hours ago