ದೇಶ- ವಿದೇಶ

ವಿಧಾನಸಭೆಯಲ್ಲಿ ಗದ್ದಲ: 15 ಎಎಪಿ ಶಾಸಕರ ಅಮಾನತು

ನವದೆಹಲಿ: ಅಬಕಾರಿ ನೀತಿ ಹಗರಣದ ವರದಿಗೆ ಸಂಬಂಧಿಸಿದಂತೆ ಆಡಳಿತರೂಢ ಬಿಜೆಪಿ ಜೊತೆ ಗದ್ದಲ ಉಂಟಾದ ಹಿನ್ನಲೆಯಲ್ಲಿ ಎಎಪಿ ಪಕ್ಷದ 15 ಶಾಸಕರನ್ನು ವಿಧಾನಸಭೆಯಿಂದ ಅಮಾನತುಗೊಳಿಸಲಾಗಿದೆ.

ಮಾಜಿ ಮುಖ್ಯಮಂತ್ರಿ ಅತಿಶಿ ಸೇರಿದಂತೆ ಎಎಪಿ ಪಕ್ಷದ ಹಿರಿಯ ನಾಯಕ ಗೋಪಾಲ್‌ ರೈ ಅವರನ್ನು ಕೂಡ ಅಮಾನತು ಮಾಡಲಾಗಿದೆ.

ಸಿಎಂ ಅವರ ಕಚೇರಿಯಿಂದ ಡಾ.ಬಿ.ಆರ್‌.ಅಂಬೇಡ್ಕರ್‌ ಮತ್ತು ಭಗತ್‌ ಸಿಂಗ್‌ ಅವರ ಛಾಯಾಚಿತ್ರಗಳನ್ನು ತೆಗೆದುಹಾಕಿರುವುದನ್ನು ಖಂಡಿಸಿ ವಿಧಾನಸಭೆಯಲ್ಲಿ ಎಎಪಿ ಸದಸ್ಯರು ಪ್ರತಿಭಟನೆ ನಡೆಸಿದರು. ಈ ಛಾಯಾಚಿತ್ರಗಳನ್ನು ತೆಗೆದು ಹಾಕಿ ಪ್ರಧಾನಿ ಮೋದಿ ಅವರ ಪೋಟೋವನ್ನು ಹಾಕಲಾಗಿದೆ ಎಂದು ಎಎಪಿ ಆರೋಪಿಸಿದೆ.

ಎಎಪಿ ವರದಿಯಲ್ಲಿ ಹಲವು ಭ್ರಷ್ಟಚಾರಗಳು ನಡೆದಿವೆ ಎಂದು ಸಿಎಂ ರೇಖಾ ಗುಪ್ತ ಅವರು ಕಂಟ್ರೋಲರ್‌ ಮತ್ತು ಆಡಿಟರ್‌ ಜನರಲ್‌ (ಸಿಎಜಿ) ವರದಿಯನ್ನು ವಿಧಾನಸಭೆಯಲ್ಲಿ ಮಂಡಿಸಿದರು.

ಈ ಹೇಳಿಕೆಗಳನ್ನು ಬಿಜೆಪಿ ತಳ್ಳಿಹಾಕಿದ್ದು, ಎಎಪಿ ಆಡಳಿತದ ಅವಧಿಯಲ್ಲಿ ಮುಖ್ಯಮಂತ್ರಿಗಳ ಮೇಜಿನ ಹಿಂದೆ ಡಾ.ಬಿ.ಆರ್.ಅಂಬೇಡ್ಕರ್‌ ಮತ್ತು ಭಗತ್‌ ಸಿಂಗ್‌ ಅವರ ಫೋಟೋಗಳನ್ನು ಪಕ್ಕದ ಗೋಡೆಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಸಿಎಂ ಕಚೇರಿಯ ವಿಡಿಯೋಗಳನ್ನು ಹಂಚಿಕೊಂಡಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

8 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

9 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

19 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

19 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

19 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

19 hours ago