ದೇಶ- ವಿದೇಶ

ಕೇಂದ್ರ ಲೋಕಸೇವಾ ಆಯೋಗದ ಅಧ್ಯಕ್ಷ ಮನೋಜ್ ಸೋನಿ ರಾಜೀನಾಮೆ

ನವದೆಹಲಿ : ಪೂಜಾ ಖೇಡ್ಕರ್‌ ವಿವಾದದ ಬೆನ್ನಲ್ಲೆ  ಕೇಂದ್ರ ಲೋಕಸೇವಾ ಆಯೋಗದ ( UPSC) ಅಧ್ಯಕ್ಷ ಮನೋಜ್‌ ಸೋನಿ ರಾಜೀನಾಮೆ ನೀಡಿದ್ದಾರೆ. ಅವರ ಅಧಿಕಾರಾವಧಿ ೨೦೨೯ಕ್ಕೆ ಕೊನೆಗೊಳ್ಳಬೇಕಾಗಿತ್ತು. ಅದರೆ ೫ ವರ್ಷ ಅಧಿಕಾರದ ಅವಧಿ ಬಾಕಿಯಿರುವಾಗಲೇ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ವೈಯಕ್ತಿಕ ಕಾರಣ ನೀಡಿ ರಾಜೀನಾಮೆ ನೀಡಿದ್ದಾರೆ. ಆದರೆ ಅವರ ರಾಜೀನಾಮೆಯನ್ನು ಈವರೆಗೂ ಅಂಗೀಕರಿಸಿಲ್ಲ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಪ್ರೊಬೇಷನರಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ವಿಷಯ ಮುನ್ನೆಲೆಗೆ ಬಂದ ನಂತರ UPSC ಸುತ್ತ ವಿವಾದಗಳು ಎದ್ದಿವೆ. ಈ ಪ್ರಕರಣಕ್ಕೂ ಸೋನಿ ಅವರ ರಾಜೀನಾಮೆಗೂ ಯಾವುದೇ ಸಂಬಂಧವಿಲ ಎನ್ನಲಾಗಿದೆ.

ಇನ್ನು ಪ್ರಖ್ಯಾತ ಶಿಕ್ಷಣ ತಜ್ಞ ಸೋನಿ ೨೦೧೭ ರ ಜೂನ್‌ ೨೮ ರಂದು ಆಯೋಗದ ಸದಸ್ಯರಾಗಿ ಅಧಿಕಾರವಹಿಸಿಕೊಂಡಿದ್ದರು. ೨೦೨೩ ರ ಮೇ ೧೬ ರಂದು UPSC ಅಧ್ಯಕ್ಷನಾಗಿ ಪ್ರಮಾಣವಚನ ಸ್ವೀಕರಿಸಿದ್ದರು.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

T 20 World Cup : ನಮೀಬಿಯ ವಿರುದ್ಧ ಭಾರತಕ್ಕೆ 93 ರನ್‌ಗಳ ಭರ್ಜರಿ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ನಮೀಬಿಯಾ ವಿರುದ್ಧ…

7 hours ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಕ್ಕೆ ಅನುಮತಿ : ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ ಎಂದು  ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಸಂಪುಟ…

7 hours ago

ಅಧಿಕಾರ ಹಂಚಿಕೆ ಚರ್ಚೆ ಮಧ್ಯೆ ರಾಜ್ಯ ಬಜೆಟ್‌ಗೆ ದಿನಾಂಕ ನಿಗದಿ

ಬೆಂಗಳೂರು : ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಚ್ 6 ರಂದು ದಾಖಲೆಯ 17ನೇ ಹಾಗೂ ಪ್ರಸಕ್ತ…

8 hours ago

ಭಾರತದೊಂದಿಗಿನ ವ್ಯಾಪಾರ ಒಪ್ಪಂದ ಐತಿಹಾಸಿಕ : ಟ್ರಂಪ್ ಬಣ್ಣನೆ

ನ್ಯೂಯಾರ್ಕ್ : ಭಾರತದೊಂದಿಗಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಅಮೆರಿಕವು ದೇಶಕ್ಕೆ ಮತ್ತು…

10 hours ago

ಬಿಕ್ಲು ಶಿವ ಕೊಲೆ ಪ್ರಕರಣ : ಪೊಲೀಸರ ವಶವಾದ ಬೈರತಿ ಬಸವರಾಜು

ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ…

10 hours ago

ಸರ್ಕಾರಿ ಅಧಿಕಾರಿಗಳಿಗೆ ಲೋಕಾ ಶಾಕ್‌ : ಮೈಸೂರು ಸೇರಿ ಹಲವೆಡೆ ದಾಳಿ

ಮೈಸೂರು : ಲೋಕಾಯುಕ್ತ ಅಧಿಕಾರಿಗಳು ಮೈಸೂರು, ದಾವಣಗೆರೆ, ಬೆಂಗಳೂರು, ಧಾರವಾಡ, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಮಿಂಚಿನ ದಾಳಿ…

11 hours ago