ನವದೆಹಲಿ: ಕೇಂದ್ರ ಲೋಕ ಸೇವಾ ಆಯೋಗ (ಯುಪಿಎಸ್ಸಿ) ಅಭ್ಯರ್ಥಿಗಳು ನಾಗರೀಕ ಸೇವಾ ಪೂರ್ವಭಾವಿ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸುವಾಗ ವಯಸ್ಸು ದೃಢಪಡಿಸುವ ಹಾಗೂ ಮೀಸಲಾತಿ ಸಂಬಂಧಿತ ದಾಖಲೆಗಳನ್ನು ಸಲ್ಲಿಸುವುದನ್ನು ಕಡ್ಡಾಯಗೊಳಿಸಿ ಅರ್ಜಿ ಸಲ್ಲಿಸಬೇಕು ಎಂದು ಕೇಂದ್ರ ಸರ್ಕಾರ ಅದೇಶ ಹೊರಡಿಸಿದೆ.
ಈ ಮುಂಚೆ ಯುಪಿಎಸ್ಸಿ ಆಕಾಂಕ್ಷಿಗಳಿಗೆ ಪೂರ್ವಭಾವಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ನಂತರ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಲು ಅವಕಾಶ ನೀಡಲಾಗುತ್ತಿತ್ತು. ಆದರೆ ಈ ವರ್ಷದಿಂದ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿಯೇ ವಯಸ್ಸು ದೃಢಪಡಿಸುವ ಹಾಗೂ ಮೀಸಲಾತಿ ಸಂಬಂಧಿತ ದಾಖಲೆಗಳನ್ನು ಕಡ್ಡಾಯವಾಗಿ ಭರ್ತಿ ಮಾಡಬೇಕು ಎಂದು ಕೇಂದ್ರ ಸರ್ಕಾರ ನಿಯಮಗಳಲ್ಲಿ ಬದಲಾವಣೆ ತಂದಿದೆ.
ಇತ್ತೀಚೆಗೆ ಮಾಜಿ ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಅವರು ನಕಲಿ ದಾಖಲೆಗಳನ್ನು ನೀಡಿದ್ದ ಆರೋಪ ಕೇಳಿಬಂದಿದೆ. ಇದರ ಬೆನ್ನಲ್ಲೇ ಕೇಂದ್ರ ಲೋಕ ಸೇವಾ ಆಯೋಗದಲ್ಲಿ ಈ ನಿಯಮವನ್ನು ಜಾರಿಗೆ ತರಲಾಗಿದೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ. ಹೀಗಾಗಿ ಯುಪಿಎಸ್ಸಿ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವಾಗ ಅರ್ಜಿ ನಮೂನೆಯೊಂದಿಗೆ ಅಗತ್ಯ ಮಾಹಿತಿ ಹಾಗೂ ದಾಖಲೆಗಳನ್ನು ಒದಗಿಸುವುದು ಕಡ್ಡಾಯವಾಗಿದೆ. ಒಂದು ವೇಳೆ ಅಗತ್ಯ ದಾಖಲೆಗಳನ್ನು ಒದಗಿಸಲು ವಿಫಲವಾದರೆ ಅಂತಹ ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದಿಲ್ಲ ಎಂದು ಜನವರಿ.22 ರಂದು ಹೊರಡಿಸಿರುವ ನಾಗರೀಕ ಸೇವಾ ಪರೀಕ್ಷೆಗಳ ನಿಯಮ-2025ರಲ್ಲಿ ತಿಳಿಸಿದೆ.
ಇನ್ನೂ ಕೇಂದ್ರ ಲೋಕಸೇವಾ ಆಯೋಗವೂ 2025ನೇ ಸಾಲಿನ ನಾಗರೀಕ ಸೇವಾ ಪರೀಕ್ಷೆಗೆ ಅಧಿಸೂಚನೆ ಹೊರಡಿಸಿದ್ದು, ಪೂರ್ವಭಾವಿ ಪರೀಕ್ಷೆಯು ಮೇ.25 ರಂದು ನಡೆಯಲಿದೆ. ಈ ವರ್ಷ ಕೇಂದ್ರ ಲೋಕಸೇವಾ ಆಯೋಗ ಒಟ್ಟು 979 ಹುದ್ದೆಗಳನ್ನು ಭರ್ತಿ ಮಾಡಲು ತೀರ್ಮಾನಿಸಿದೆ. ಹೀಗಾಗಿ ಅರ್ಜಿ ಸಲ್ಲಿಸುವ ಬಯಸುವ ಅಭ್ಯರ್ಥಿಗಳು http://upsconline.gov.in ಈ ವೆಬ್ಸೈಟ್ ಮೂಲಕ 2025 ಫೆಬ್ರವರಿ 11ರ ಸಂಜೆ 6 ಗಂಟೆಯೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…