ದೇಶ- ವಿದೇಶ

ಕೇಂದ್ರ ಲೋಕ ಸೇವಾ ಆಯೋಗ ಪರೀಕ್ಷೆ: ಅರ್ಜಿ ಸಲ್ಲಿಕೆಗೆ ವಯಸ್ಸು, ಮೀಸಲಾತಿ ದಾಖಲೆ ಕಡ್ಡಾಯ

ನವದೆಹಲಿ: ಕೇಂದ್ರ ಲೋಕ ಸೇವಾ ಆಯೋಗ (ಯುಪಿಎಸ್‌ಸಿ) ಅಭ್ಯರ್ಥಿಗಳು ನಾಗರೀಕ ಸೇವಾ ಪೂರ್ವಭಾವಿ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸುವಾಗ ವಯಸ್ಸು ದೃಢಪಡಿಸುವ ಹಾಗೂ ಮೀಸಲಾತಿ ಸಂಬಂಧಿತ ದಾಖಲೆಗಳನ್ನು ಸಲ್ಲಿಸುವುದನ್ನು ಕಡ್ಡಾಯಗೊಳಿಸಿ ಅರ್ಜಿ ಸಲ್ಲಿಸಬೇಕು ಎಂದು ಕೇಂದ್ರ ಸರ್ಕಾರ ಅದೇಶ ಹೊರಡಿಸಿದೆ.

ಈ ಮುಂಚೆ ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಪೂರ್ವಭಾವಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ನಂತರ ಅಗತ್ಯ ದಾಖಲೆಗಳನ್ನು ಅಪ್‌ಲೋಡ್‌ ಮಾಡಲು ಅವಕಾಶ ನೀಡಲಾಗುತ್ತಿತ್ತು. ಆದರೆ ಈ ವರ್ಷದಿಂದ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿಯೇ ವಯಸ್ಸು ದೃಢಪಡಿಸುವ ಹಾಗೂ ಮೀಸಲಾತಿ ಸಂಬಂಧಿತ ದಾಖಲೆಗಳನ್ನು ಕಡ್ಡಾಯವಾಗಿ ಭರ್ತಿ ಮಾಡಬೇಕು ಎಂದು ಕೇಂದ್ರ ಸರ್ಕಾರ ನಿಯಮಗಳಲ್ಲಿ ಬದಲಾವಣೆ ತಂದಿದೆ.

ಇತ್ತೀಚೆಗೆ ಮಾಜಿ ಪ್ರೊಬೇಷನರಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ಅವರು ನಕಲಿ ದಾಖಲೆಗಳನ್ನು ನೀಡಿದ್ದ ಆರೋಪ ಕೇಳಿಬಂದಿದೆ. ಇದರ ಬೆನ್ನಲ್ಲೇ ಕೇಂದ್ರ ಲೋಕ ಸೇವಾ ಆಯೋಗದಲ್ಲಿ ಈ ನಿಯಮವನ್ನು ಜಾರಿಗೆ ತರಲಾಗಿದೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ. ಹೀಗಾಗಿ ಯುಪಿಎಸ್‌ಸಿ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವಾಗ ಅರ್ಜಿ ನಮೂನೆಯೊಂದಿಗೆ ಅಗತ್ಯ ಮಾಹಿತಿ ಹಾಗೂ ದಾಖಲೆಗಳನ್ನು ಒದಗಿಸುವುದು ಕಡ್ಡಾಯವಾಗಿದೆ. ಒಂದು ವೇಳೆ ಅಗತ್ಯ ದಾಖಲೆಗಳನ್ನು ಒದಗಿಸಲು ವಿಫಲವಾದರೆ ಅಂತಹ ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದಿಲ್ಲ ಎಂದು ಜನವರಿ.22 ರಂದು ಹೊರಡಿಸಿರುವ ನಾಗರೀಕ ಸೇವಾ ಪರೀಕ್ಷೆಗಳ ನಿಯಮ-2025ರಲ್ಲಿ ತಿಳಿಸಿದೆ.

ಇನ್ನೂ ಕೇಂದ್ರ ಲೋಕಸೇವಾ ಆಯೋಗವೂ 2025ನೇ ಸಾಲಿನ ನಾಗರೀಕ ಸೇವಾ ಪರೀಕ್ಷೆಗೆ ಅಧಿಸೂಚನೆ ಹೊರಡಿಸಿದ್ದು, ಪೂರ್ವಭಾವಿ ಪರೀಕ್ಷೆಯು ಮೇ.25 ರಂದು ನಡೆಯಲಿದೆ. ಈ ವರ್ಷ ಕೇಂದ್ರ ಲೋಕಸೇವಾ ಆಯೋಗ ಒಟ್ಟು 979 ಹುದ್ದೆಗಳನ್ನು ಭರ್ತಿ ಮಾಡಲು ತೀರ್ಮಾನಿಸಿದೆ. ಹೀಗಾಗಿ ಅರ್ಜಿ ಸಲ್ಲಿಸುವ ಬಯಸುವ ಅಭ್ಯರ್ಥಿಗಳು http://upsconline.gov.in ಈ ವೆಬ್‌ಸೈಟ್‌ ಮೂಲಕ 2025 ಫೆಬ್ರವರಿ 11ರ ಸಂಜೆ 6 ಗಂಟೆಯೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಚನ ಎಸ್‌ ಎಸ್

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

6 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

8 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

8 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

9 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

12 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

12 hours ago