ದೇಶ- ವಿದೇಶ

ನಗರ ನಕ್ಸಲರನ್ನು ಗುರುತಿಸಿ ಬಯಲಿಗೆಳೆಯಬೇಕಿದೆ: ಮೋದಿ

ಏಕತಾನಗರ(ಗುಜರಾತ್): ದೇಶವು ಅಭಿವೃದ್ದಿಯಾಗುವುದನ್ನು ಸಹಿಸದ ಕೆಲವು ಬಾಹ್ಯ ಹಾಗೂ ಆಂತರಿಕ ಶಕ್ತಿಗಳು, ಪ್ರಪಂಚದಾದ್ಯಂತ ದೇಶದ ಬಗ್ಗೆ ಇಲ್ಲ ಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.

ಗುಜರಾತ್‌ ಜಿಲ್ಲೆಯ ಏಕತಾನಗರದಲ್ಲಿ ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಅವರ ಜನ್ಮ ದಿನಾಚರಣೆ ಅಂಗವಾಗಿ ಏಕತಾ ಪ್ರತಿಮೆಗೆ ಪುಷ್ಪಾರ್ಚಣೆ ಮಾಡಿ ನಂತರ ನೆರೆದಿದ್ದ ಜನರನ್ನು ಉದ್ಧೇಶಿಸಿ ಮಾತನಾಡಿದ ಅವರು, ದೇಶದಲ್ಲಿ ಕಾಡು ನಕ್ಸಲಿಸಂ ಕೊನೆಯಾಗಿತ್ತಿದೆ, ಆದರೆ ನಗರ ನಕ್ಸಲರು ತಲೆ ಎತ್ತುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ನಗರಗಳಲ್ಲಿ ಹೊಸ ರೀತಿಯ ನಕ್ಸಲರು ಹುಟ್ಟಿಕೊಂಡಿದ್ದಾರೆ. ಇವರು, ನೀವು ಒಟ್ಟಾಗಿ ಇದ್ದಾರೆ ನೀವು ಸುರಕ್ಷಿತವಾಗಿರುತ್ತೀರಿ ಎನ್ನುವ ಜನರನ್ನು ಗುರಿಯಾಗಿಸಿಕೊಂಡಿದ್ದಾರೆ.  ಇಂತಹ ನಕ್ಸಲರನ್ನು ದೇಶವು ಗುರುತಿಸಿ ಬಯಲಿಗೆಳೆಯಬೇಕಿದೆ. ಭಾರತ ದೇಶವು ಅಭಿವೃದ್ಧಿ ಹೊಂದುತ್ತಿರುವುದನ್ನು ಸಹಿಸದ ಕೆಲವು ಬಾಹ್ಯ ಶಕ್ತಿಗಳು ಜಾತಿ ಆಧಾರದಲ್ಲಿ ದೇಶವನ್ನು ಒಡೆಯುತ್ತಿದ್ದಾರೆ ಅಂತಹವರನ್ನು ಗುರುತಿಸಿ ನಾಶ ಮಾಡಬೇಕು ಎಂದು ಹೇಳಿದರು.

560 ಕ್ಕೂ ಹೆಚ್ಚು ಸಂಸ್ಥಾನಗಳಾಗಿದ್ದ ಭಾರತವನ್ನು ಒಂದುಗೂಡಿಸುವ ಮೂಲಕ ಭಾರತವನ್ನು ಏಕೀಕರಣಗೊಳಿಸಿದ ಸರ್ದಾರ್‌ ಪಟೇಲ್‌ ಬಗ್ಗೆ ಸಂಶಯ ವ್ಯಕ್ತಪಡಿಸಿದ ಜನರಿದ್ದರೂ ಎಂದ ಮೋದಿ, ಮುಂದಿನ 2 ವರ್ಷಗಳ ಕಾಲ ದೇಶವು ಪಟೇಲ್‌ ಅವರ 150ನೇ ಜಯಂತಿಯನ್ನು ಆಚರಿಸಲಿದೆ ಎಂದರು.

ಪ್ರಜಾಪ್ರಭುತ್ವವನ್ನು ಬಲಪಡಿಸುವ ʼಒಂದು ರಾಷ್ಟ್ರ, ಒಂದು ಚುನಾವಣೆʼ ಉಪಕ್ರಮವನನು ಜಾರಿಗೆ ತರಲು ನಾವು ಪ್ರಯತ್ನಿಸುತ್ತಿದ್ದೇವೆ. ಇದು ನಮ್ಮ ದೇಶನ್ನು ಬಲಪಡಿಸಲಿದೆ ಎಂದು ಹೇಳಿದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಧ್ಯ ಪ್ರಾಚ್ಯ ರಾಷ್ಟ್ರಗಳಲ್ಲಿ ತೈಲ ಬಿಕ್ಕಟ್ಟು: ಪಾಕಿಸ್ತಾನದಲ್ಲಿ ಗಣರಾಜ್ಯೋತ್ಸವ ಮೆರವಣಿಗೆ ರದ್ದು

ಇಸ್ಲಾಮಾಬಾದ್:‌ ಇರಾನ್‌, ಅಮೇರಿಕಾ-ಇಸ್ರೇಲ್‌ ಯುದ್ಧದಿಂದಾಗಿ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ತೈಲ ಬಿಕ್ಕಟ್ಟು ಉಲ್ಬಣಗೊಂಡಿದೆ. ಇದರಿಂದ ಪಾಕಿಸ್ತಾನದಲ್ಲಿ ಗಣರಾಜ್ಯೋತ್ಸವ ಮೆರವಣಿಗೆ ರದ್ದಾಗಿದೆ. ಮಾರ್ಚ್.‌23ರಂದು…

47 mins ago

ಯುಗಾದಿ ಸಂಭ್ರಮ: ಓಂಕಾರೇಶ್ವರ ದೇವಾಲಯದಲ್ಲೂ ಬೇವು ಬೆಲ್ಲ ವಿತರಣೆ

ಮಡಿಕೇರಿ: ನಾಡಿನಾದ್ಯಂತ ಇಂದು ಹೊಸ ವರ್ಷ ಯುಗಾದಿ ಸಂಭ್ರಮ ಮನೆ ಮಾಡಿದ್ದು, ಕೊಡಗಿನ ಮನೆ ಮನೆಯಲ್ಲೂ ಯುಗಾದಿ ಹಬ್ಬದ ಸಡಗರ…

56 mins ago

ಟಿ.ನರಸೀಪುರ| ಯುಗಾದಿ ಸಂಭ್ರಮ: ತ್ರಿವೇಣಿ ಸಂಗಮಕ್ಕೆ ಹರಿದುಬಂದ ಭಕ್ತಸಾಗರ

ಟಿ.ನರಸೀಪುರ: ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಪುಣ್ಯಸ್ನಾನಕ್ಕೆಂದು ತ್ರಿವೇಣಿ ಸಂಗಮಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. ಮೈಸೂರು ಜಿಲ್ಲೆ…

1 hour ago

ಹುಣಸೂರು: ರೈಲ್ವೆ ಹಳಿ ತಡೆಗೋಡೆಗೆ ಸಿಲುಕಿ ಒದ್ದಾಡಿದ ಕಾಡಾನೆ

ಹುಣಸೂರು: ರೈಲ್ವೆ ಹಳಿ ತಡೆಗೋಡೆಗೆ ಸಿಲುಕಿ ಕಾಡಾನೆಯೊಂದು ಕೆಲಕಾಲ ಒದ್ದಾಟ ನಡೆಸಿದ ಘಟನೆ ತಾಲ್ಲೂಕಿನ ಉಡುವೆಪುರ ಬಳಿ ನಡೆದಿದೆ. ನಾಗರಹೊಳೆ…

2 hours ago

ಮೈಸೂರು ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆ

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿದಿದ್ದು, ಭಾರೀ ಪ್ರಮಾಣದ ಹಾನಿಯಾಗಿದೆ. ಮೈಸೂರು ಜಿಲ್ಲೆಯಲ್ಲಿ ನಿನ್ನೆ ಸುರಿದ ಭಾರೀ ಮಳೆಯಿಂದಾಗಿ…

2 hours ago

ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ: ಹಳ್ಳಿಗಳಲ್ಲಿ ಹೊನ್ನೇರು ಕಟ್ಟಿ ಸಂಭ್ರಮಿಸಿದ ಅನ್ನದಾತರು

ಮೈಸೂರು: ರೈತರು ಸಡಗರದಿಂದ ಕೃಷಿ ಚಟುವಟಿಕೆ ಆರಂಭಿಸುವ ಮೊದಲ ಹೆಜ್ಜೆ ಯುಗಾದಿಯಾಗಿದ್ದು, ಜಿಲ್ಲೆಯ ಹಲವೆಡೆ ಅನ್ನದಾತರು ಹೊನ್ನೇರು ಕಟ್ಟಿ ಭೂಮಿ…

2 hours ago