ದೇಶ- ವಿದೇಶ

ನಗರ ನಕ್ಸಲರನ್ನು ಗುರುತಿಸಿ ಬಯಲಿಗೆಳೆಯಬೇಕಿದೆ: ಮೋದಿ

ಏಕತಾನಗರ(ಗುಜರಾತ್): ದೇಶವು ಅಭಿವೃದ್ದಿಯಾಗುವುದನ್ನು ಸಹಿಸದ ಕೆಲವು ಬಾಹ್ಯ ಹಾಗೂ ಆಂತರಿಕ ಶಕ್ತಿಗಳು, ಪ್ರಪಂಚದಾದ್ಯಂತ ದೇಶದ ಬಗ್ಗೆ ಇಲ್ಲ ಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.

ಗುಜರಾತ್‌ ಜಿಲ್ಲೆಯ ಏಕತಾನಗರದಲ್ಲಿ ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಅವರ ಜನ್ಮ ದಿನಾಚರಣೆ ಅಂಗವಾಗಿ ಏಕತಾ ಪ್ರತಿಮೆಗೆ ಪುಷ್ಪಾರ್ಚಣೆ ಮಾಡಿ ನಂತರ ನೆರೆದಿದ್ದ ಜನರನ್ನು ಉದ್ಧೇಶಿಸಿ ಮಾತನಾಡಿದ ಅವರು, ದೇಶದಲ್ಲಿ ಕಾಡು ನಕ್ಸಲಿಸಂ ಕೊನೆಯಾಗಿತ್ತಿದೆ, ಆದರೆ ನಗರ ನಕ್ಸಲರು ತಲೆ ಎತ್ತುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ನಗರಗಳಲ್ಲಿ ಹೊಸ ರೀತಿಯ ನಕ್ಸಲರು ಹುಟ್ಟಿಕೊಂಡಿದ್ದಾರೆ. ಇವರು, ನೀವು ಒಟ್ಟಾಗಿ ಇದ್ದಾರೆ ನೀವು ಸುರಕ್ಷಿತವಾಗಿರುತ್ತೀರಿ ಎನ್ನುವ ಜನರನ್ನು ಗುರಿಯಾಗಿಸಿಕೊಂಡಿದ್ದಾರೆ.  ಇಂತಹ ನಕ್ಸಲರನ್ನು ದೇಶವು ಗುರುತಿಸಿ ಬಯಲಿಗೆಳೆಯಬೇಕಿದೆ. ಭಾರತ ದೇಶವು ಅಭಿವೃದ್ಧಿ ಹೊಂದುತ್ತಿರುವುದನ್ನು ಸಹಿಸದ ಕೆಲವು ಬಾಹ್ಯ ಶಕ್ತಿಗಳು ಜಾತಿ ಆಧಾರದಲ್ಲಿ ದೇಶವನ್ನು ಒಡೆಯುತ್ತಿದ್ದಾರೆ ಅಂತಹವರನ್ನು ಗುರುತಿಸಿ ನಾಶ ಮಾಡಬೇಕು ಎಂದು ಹೇಳಿದರು.

560 ಕ್ಕೂ ಹೆಚ್ಚು ಸಂಸ್ಥಾನಗಳಾಗಿದ್ದ ಭಾರತವನ್ನು ಒಂದುಗೂಡಿಸುವ ಮೂಲಕ ಭಾರತವನ್ನು ಏಕೀಕರಣಗೊಳಿಸಿದ ಸರ್ದಾರ್‌ ಪಟೇಲ್‌ ಬಗ್ಗೆ ಸಂಶಯ ವ್ಯಕ್ತಪಡಿಸಿದ ಜನರಿದ್ದರೂ ಎಂದ ಮೋದಿ, ಮುಂದಿನ 2 ವರ್ಷಗಳ ಕಾಲ ದೇಶವು ಪಟೇಲ್‌ ಅವರ 150ನೇ ಜಯಂತಿಯನ್ನು ಆಚರಿಸಲಿದೆ ಎಂದರು.

ಪ್ರಜಾಪ್ರಭುತ್ವವನ್ನು ಬಲಪಡಿಸುವ ʼಒಂದು ರಾಷ್ಟ್ರ, ಒಂದು ಚುನಾವಣೆʼ ಉಪಕ್ರಮವನನು ಜಾರಿಗೆ ತರಲು ನಾವು ಪ್ರಯತ್ನಿಸುತ್ತಿದ್ದೇವೆ. ಇದು ನಮ್ಮ ದೇಶನ್ನು ಬಲಪಡಿಸಲಿದೆ ಎಂದು ಹೇಳಿದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

7 hours ago

ಮೇ.13ರಂದು ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

7 hours ago

ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ…

7 hours ago

ಪಂಚಭೂತಗಳಲ್ಲಿ ಲೀನರಾದ ಸಚಿವ ಡಿ.ಸುಧಾಕರ್‌

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ…

8 hours ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…

8 hours ago

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

9 hours ago