ದೇಶ- ವಿದೇಶ

ರಾಜ್ಯದಲ್ಲಿ ಯೂರಿಯಾ ಗೊಬ್ಬರ ಅಭಾವ ಸೃಷ್ಟಿ: ಜೆ.ಪಿ.ನಡ್ಡಾಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕದಲ್ಲಿ ಯೂರಿಯಾ ಗೊಬ್ಬರ ಅಭಾವ ಸೃಷ್ಟಿ ಆಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ರಸಗೊಬ್ಬರ ಸಚಿವ ಜೆ.ಪಿ.ನಡ್ಡಾಗೆ ಪತ್ರ ಬರೆದು ರಾಜ್ಯಕ್ಕೆ ಹಂಚಿಕೆಯಾದ ರಸಗೊಬ್ಬರ ಪ್ರಮಾಣವನ್ನು ಪೂರೈಕೆ ಮಾಡುವಂತೆ ಮನವಿ ಮಾಡಿದ್ದಾರೆ.

ಪತ್ರದಲ್ಲಿ, ರಾಜ್ಯಕ್ಕೆ ಒಟ್ಟು 11.17 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಕೊಡಬೇಕಿತ್ತು. ಇಲ್ಲಿಯವರೆಗೆ 5.16 ಲಕ್ಷ ಮೆಟ್ರಿಕ್ ಟನ್ ಮಾತ್ರ ಕೊಡಲಾಗಿದೆ. ರಾಜ್ಯಕ್ಕೆ ಇನ್ನೂ 6.80 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಬರಬೇಕಿದೆ. ಆದರೆ ಕೆಲ ಫರ್ಟಿಲೈಸರ್ ಕಂಪನಿಗಳು ಕೊರತೆಯ ಕಾರಣ ಹೇಳಿ ಯೂರಿಯಾ ಒದಗಿಸುತ್ತಿಲ್ಲ. ಹೀಗಾಗಿ ಕೂಡಲೇ ಯೂರಿಯಾ ಕೊಡುವಂತೆ ಒತ್ತಾಯಿಸಿದ್ದಾರೆ.

ಕಳೆದ ವರ್ಷಕ್ಕಿಂತ ಈ ಬಾರಿ ಮುಂಗಾರು ಮಳೆ ಹೆಚ್ಚಾಗಿದೆ. ಕಾವೇರಿ, ತುಂಗಭದ್ರಾ, ಕೃಷ್ಣಾದಿಂದ ನೀರು ಬಿಡುಗಡೆಯಾಗಿದೆ. ಇದರಿಂದ ರೈತರು ಕೃಷಿ ಚಟುವಟಿಕೆಗಳನ್ನ ಪ್ರಾರಂಭ ಮಾಡಿದ್ದಾರೆ. ಕಳೆದ ವರ್ಷಕ್ಕಿಂತ ಎರಡು ಲಕ್ಷ ಹೆಕ್ಟೇರ್‌ಗಳಲ್ಲಿ ಕೃಷಿ ಚಟುವಟಿಕೆಗಳು ಹೆಚ್ಚಾಗಿದೆ. ಹೀಗಾಗಿ ಕೂಡಲೇ ಯೂರಿಯಾ ಒದಗಿಸುವಂತೆ ಮನವಿ ಮಾಡಿದ್ದಾರೆ.

ಕೇಂದ್ರ ಸರ್ಕಾರವು 2025ರ ಖಾರಿಫ್ ಬೆಳೆಗೆ ರಾಜ್ಯಕ್ಕೆ 11,17,000 ಮೆಟ್ರಿಕ್ ಟನ್ ಯೂರಿಯಾ ಹಂಚಿಕೆ ಮಾಡಿದೆ. ಈವರೆಗೆ ಕೇವಲ 5,16,959 ಮೆಟ್ರಿಕ್ ಟನ್ ರಸಗೊಬ್ಬರ ಸರಬರಾಜು ಮಾಡಲಾಗಿದೆ. ಆದರೆ ಏಪ್ರಿಲ್‌ನಿಂದ ಜುಲೈವರೆಗೆ ರಾಜ್ಯಕ್ಕೆ 6,80,655 ಮೆಟ್ರಿಕ್ ಟನ್ ಯೂರಿಯಾದ ಅವಶ್ಯಕತೆ ಇದೆ. ಕೆಲ ರಸಗೊಬ್ಬರ ಕಂಪನಿಗಳು ಕೇಂದ್ರವು ಮಾಡಿದ ಹಂಚಿಕೆಯ ಪ್ರಕಾರ ಯೂರಿಯಾ ಗೊಬ್ಬರ ಪೂರೈಸಲು ಅಸಮರ್ಥತೆಯನ್ನು ವ್ಯಕ್ತಪಡಿಸಿವೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಯೂರಿಯಾ ಪೂರೈಕೆಯ ತುರ್ತು ಅವಶ್ಯಕತೆಯಿದೆ. ಏಕೆಂದರೆ ಕರ್ನಾಟಕಕ್ಕೆ ಈ ವರ್ಷದ ಆರಂಭದಲ್ಲಿಯೇ ಮಾನ್ಸೂನ್ ಬಂದಿದೆ. ಹಿಂದಿನ ವರ್ಷಗಳಿಗೆ ಹೋಲಿಸಿದರೆ ವಿವಿಧ ಬೆಳೆಗಳ ವ್ಯಾಪ್ತಿಯು ಹೆಚ್ಚಾಗಿದೆ. ತುಂಗಭದ್ರಾ, ಕಾವೇರಿ ಮತ್ತು ಕೃಷ್ಣಾ ನದಿಗಳ ಆಯಕಟ್ಟಿನ ಪ್ರದೇಶಗಳಲ್ಲಿ ನೀರನ್ನು ಮೊದಲೇ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

13,000 ಹೆಕ್ಟೇರ್ ಖಾರಿಫ್ ಪೂರ್ವ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿದೆ. ಯೂರಿಯಾ ಕೊರತೆಯು ರೈತರಲ್ಲಿ ಅಶಾಂತಿ ಆತಂಕವನ್ನು ಸೃಷ್ಟಿಸುತ್ತಿದೆ. ರೈತರ ಹಿತದೃಷ್ಟಿಯಿಂದ ರಾಜ್ಯ ಹಂಚಿಕೆ ಪ್ರಕಾರ ರಸಗೊಬ್ಬರ ಪೂರೈಸಿ. ಬಾಕಿ ಕೊರತೆ ಇರುವ ಯೂರಿಯಾದ ಪೂರೈಕೆಯನ್ನು ತ್ವರಿತಗೊಳಿಸಲು ಸಂಬಂಧಪಟ್ಟವರಿಗೆ ನಿರ್ದೇಶನ ನೀಡುವಂತೆ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

5 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

5 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

5 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

5 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

5 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

5 hours ago