ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ.
ಜಲಮಾರ್ಗದ ಬಳಿಕ ಇರಾನಿನ ಕ್ಷಿಪಣಿ ತಾಣಗಳನ್ನು ಹೊಡೆದುರುಳಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ. ಹಾರ್ಮುಜ್ ಜಲಸಂಧಿ ಬಳಿಯ ಇರಾನ್ನ ಕರಾವಳಿಯುದ್ದಕ್ಕೂ ಇದ್ದ ಕ್ಷಿಪಣಿ ತಾಣಗಳ ಮೇಲೆ ಅಮೆರಿಕ 5,000 ಪೌಂಡ್ ಬಂಕರ್ ಬಸ್ಟರ್ ಬಾಂಬ್ಗಳ ಮಹಾಮಳೆ ಸುರಿಸಲಾಗಿದೆ.
ನಿರ್ಣಾಯಕ ಜಲಮಾರ್ಗವನ್ನು ಮತ್ತೆ ತೆರೆಯುವ ಉದ್ದೇಶದಿಂದ ಅಮೆರಿಕ ಶಸ್ತ್ರಗಾರದಲ್ಲಿರುವ ಕೆಲವು ಶಕ್ತಿಶಾಲಿ ಬಾಂಬ್ಗಳ ದಾಳಿ ನಡೆಸಿದೆ. ಈ ತಾಣಗಳಲ್ಲಿರುವ ಇರಾನಿನ ಹಡಗು ವಿರೋಧಿ ಕ್ರೂಸ್ ಕ್ಷಿಪಣಿಗಳು ಜಲಸಂಧಿಯಲ್ಲಿ ಅಂತರರಾಷ್ಟ್ರೀಯ ಹಡಗು ಸಾಗಣೆಗೆ ಅಪಾಯವನ್ನುಂಟುಮಾಡಿದವು. ಹೀಗಾಗಿ, ಅವುಗಳನ್ನು ಹೊಡೆದುರುಳಿಸಲಾಗಿದೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ ತಿಳಿಸಿದೆ.
ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಯುದ್ಧಕ್ಕೆ ಪ್ರತೀಕಾರವಾಗಿ, ವಿಶ್ವದ ಐದನೇ ಒಂದು ಭಾಗದಷ್ಟು ತೈಲ ಪೂರೈಕೆಯಾಗುವ ಹಾರ್ಮುಜ್ ಜಲಸಂಧಿಯನ್ನು ಇರಾನ್ ಮುಚ್ಚಿತ್ತು. ಇದರಿಂದ ಹಲವು ರಾಷ್ಟ್ರಗಳಲ್ಲಿ ತೈಲ ಬಿಕ್ಕಟ್ಟು ಶುರುವಾಯಿತು. ಪ್ರಮುಖ ಮಾರ್ಗವನ್ನು ಓಪನ್ ಮಾಡುವುದಕ್ಕಾಗಿ ಈ ಬಾಂಬ್ ದಾಳಿ ನಡೆದಿದೆ.
ಹಾರ್ಮುಜ್ ಜಲಸಂಧಿಯನ್ನು ಸುರಕ್ಷಿತಗೊಳಿಸಲು, ಈ ಪ್ರದೇಶದ ತೈಲ ರಫ್ತಿನ ಮೇಲಿರುವ ದಿಗ್ಬಂಧನ ಸಡಿಲಿಸಲು ಸಹಾಯ ಮಾಡುವಂತೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕರೆ ನೀಡಿದ್ದರು. ಆದರೆ, ನ್ಯಾಟೋ ಸೇರಿದಂತೆ ಅಮೆರಿಕದ ಮಿತ್ರರಾಷ್ಟ್ರಗಳು ಈ ಕರೆಯನ್ನು ತಿರಸ್ಕರಿಸಿದ್ದವು. ಜಗತ್ತು ನಮ್ಮ ಪ್ರಯತ್ನಗಳನ್ನು ಮೆಚ್ಚದಿದ್ದರೂ ಸಹ, ನಾವು ವಿಶ್ವದ ಒಳಿತಿಗಾಗಿ ಯುದ್ಧವನ್ನು ನಡೆಸುತ್ತಿದ್ದೇನೆ ಎಂದು ಟ್ರಂಪ್ ಒತ್ತಿ ಹೇಳಿದರು.
ಡಾ. ಪ್ರಮೀಳಾದೇವಿ ಬಿ.ಕೆ ೧೯೩೧-೩೨ರಲ್ಲಿ ಗಾಂಧಿಜಿಯವರು ಉಪ್ಪಿನ ಸತ್ಯಾಗ್ರಹದ ನಂತರ ರೌಂಡ್ ಟೇಬಲ್ ಮಾತುಕತೆಗಾಗಿ ಇಂಗ್ಲೆಂಡಿಗೆ ಹೋದರು. ಈ ವೇಳೆಗಾಗಲೆ…
ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ…
ನೃತ್ಯ ಮುಂತಾದವುಗಳಲ್ಲಿ ನಾನು ನಡೆಸಿದ ಪ್ರಯೋಗಗಳಿಂದ ನಾನು ಉಚ್ಚೃಂಖಲ ಪ್ರವೃತ್ತಿಯುಳ್ಳವನಾಗಿದ್ದನೆಂದು ಯಾರೂ ತಿಳಿಯಬಾರದು. ಅದರಲ್ಲಿಯೂ ವಿವೇಕದ ಅಂಶ ಇದ್ದಿತೆಂಬುದು ವಾಚಕರಿಗೆ…
ಮೈಸೂರು: ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…
ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರದ ಪರವಾಗಿ ನಮ್ರತೆಯ ಮನವಿ…