ದೇಶ- ವಿದೇಶ

ಇರಾನ್‌ ಡ್ರೋನ್‌ ಉತ್ಪಾದನಾ ಘಟಕದ ಮೇಲೆ ಅಮೆರಿಕ ದಾಳಿ : ಚಿತ್ರ ಬಿಡುಗಡೆ

ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ ಚಿತ್ರಗಳನ್ನು ಬಿಡುಗಡೆ ಮಾಡಲಾಗಿದೆ. ದಾಳಿಗೆ ಮುನ್ನ ಮತ್ತು ನಂತರದ ಸ್ಥಿತಿಯನ್ನು ಹೋಲಿಕೆ ಮಾಡುವ ಈ ಚಿತ್ರಗಳು ಘಟಕದ ಭಾರೀ ಹಾನಿಯನ್ನು ಸ್ಪಷ್ಟವಾಗಿ ತೋರಿಸುತ್ತವೆ.

ಡ್ರೋನ್ ಉತ್ಪಾದನಾ ಘಟಕ ದ್ವಂಸದ ಪೋಟೋವನ್ನು ಅಮೆರಿಕ ಸೇನೆ ಬಿಡುಗಡೆ ಮಾಡಿದೆ. ಮಾ.3ರಂದು ದಾಳಿಗೂ ಮುನ್ನ ಘಟಕ ಹೇಗಿತ್ತು ಮತ್ತು ಮಾ.12 ರಂದು ದಾಳಿ ಬಳಿಕ ಹೇಗಾಗಿದೆ ಎಂಬ ವಿಡಿಯೋಗಳನ್ನು ಸಹ ರಿಲೀಸ್‌ ಮಾಡಲಾಗಿದೆ.

ಪ್ರದೇಶದಾದ್ಯಂತ ಇರಾನ್ ಬಳಸುವ ಶಹೀದ್ ಏಕಮುಖ ದಾಳಿ ಡ್ರೋನ್‌ಗಳನ್ನು ತಯಾರಿಸುತ್ತಿದ್ದ ಎಸ್ಫಹಾನ್-ಖೊಮೇನಿಶಹರ್ ಡ್ರೋನ್ ಉತ್ಪಾದನಾ ಘಟಕವು ಯುಎಸ್ ಪಡೆಗಳ ನಿಖರ ದಾಳಿಯಲ್ಲಿ ತೀವ್ರವಾಗಿ ಹಾನಿಗೊಳಗಾಯಿತು. ಆಪರೇಷನ್ ಎಪಿಕ್ ಫ್ಯೂರಿಯ ಭಾಗವಾಗಿ ಇರಾನ್‌ನ ಕ್ಷಿಪಣಿ ಮೂಲಸೌಕರ್ಯಗಳ ಮೇಲೆ ನಡೆದ ಬೃಹತ್ ದಾಳಿಯ ಪರಿಣಾಮದ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಗಿದೆ.

ಯುಎಸ್ ಪಡೆ ಪ್ರಕಟಿಸಿದ ಉಪಗ್ರಹ ದೃಶ್ಯಾವಳಿಗಳು, ಮಾ.3 ರಂದು ಯುಎಸ್ ದಾಳಿ ಮಾಡುವ ಮೊದಲು ಇರಾನಿನ ಎಸ್ಫಹಾನ್-ಖೊಮೇನಿಶಹರ್ ಡ್ರೋನ್ ಉತ್ಪಾದನಾ ಘಟಕವನ್ನು ತೋರಿಸಿವೆ. ಮಾರ್ಚ್.12 ರಂದು ಯುಎಸ್ ಪಡೆಗಳು ನಿಖರವಾದ ಯುದ್ಧಸಾಮಗ್ರಿಗಳೊಂದಿಗೆ ಸೌಲಭ್ಯದ ಮೇಲೆ ದಾಳಿ ಮಾಡಿದ ನಂತರದ ಚಿತ್ರಗಳನ್ನು ಸಹ ಬಿಡುಗಡೆ ಮಾಡಿದೆ.

 

ಆಂದೋಲನ ಡೆಸ್ಕ್

Recent Posts

ಸಿದ್ದಾಪುರ | ಉಪಟಳ ನೀಡುತ್ತಿದ್ದ ಒಂಟಿ ಸಲಗ ಸೆರೆ

ಕೃಷಿ ಫಸಲು ನಾಶ ಮಾಡಿ, ಕಾರ್ಮಿಕರು, ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆ ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ…

7 hours ago

ಇರಾನ್‌ ಈವರೆಗೆ 400ಕ್ಕೂ ಹೆಚ್ಚು ಕ್ಷಿಪಣಿ ದಾಳಿ ನಡೆಸಿದೆ ; ಇಸ್ರೇಲ್‌

ಜೆರುಸಲೆಂ : ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾದ ಬಳಿಕ ಇರಾನ್‌ನಿಂದ ಇಸ್ರೇಲ್‌ ಮೇಲೆ ಈವರೆಗೆ 400ಕ್ಕೂ ಹೆಚ್ಚು ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ…

8 hours ago

ಏಪ್ರಿಲ್ 1ರಿಂದ ಜಾರಿ ಟೋಲ್‌ ದರ ಹೆಚ್ಚಳ ; ಮೈ-ಬೆಂ ಹೆದ್ದಾರಿ ಪ್ರಯಾಣವೂ ದುಬಾರಿ

ಬೆಂಗಳೂರು : ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಸೇರಿದಂತೆ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶೇಕಡಾ 3 ರಿಂದ…

9 hours ago

ಮಧ್ಯಪ್ರಾಚ್ಯ ಸಂಘರ್ಷ : ಇಂಧನ ಬಿಕ್ಕಟ್ಟಿನ ಬಗ್ಗೆ ಪ್ರಧಾನಿ ಮೋದಿ ಮಹತ್ವದ ಸಭೆ

ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ಯುದ್ಧ ತೀವ್ರಗೊಳ್ಳುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು, ಪೆಟ್ರೋಲಿಯಂ, ವಿದ್ಯುತ್ ಮತ್ತು ರಸಗೊಬ್ಬರ ವಲಯಗಳ ಪರಿಶೀಲನೆಗಾಗಿ ಪ್ರಧಾನಿ ನರೇಂದ್ರ…

10 hours ago

ಕರ್ನಾಟಕ ಹೈಕೋರ್ಟ್‌ : 70 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಕರ್ನಾಟಕ ಹೈಕೋರ್ಟ್ ಅರ್ಜಿ ಆಹ್ವಾನಿಸಿದೆ. ಕಾನೂನು ಪದವಿ ಸೇರಿದಂತೆ ವಿವಿಧ…

10 hours ago

ಸಿಲಿಂಡರ್‌ಗೆ ಮುಗಿಬಿದ್ದ ಜನ : ಪೊಲೀಸ್‌ ರಕ್ಷಣೆಯಲ್ಲಿ ಸಿಲಿಂಡರ್‌ ವಿತರಣೆ

ಕೆ.ಆರ್.ಪೇಟೆ : ಗೃಹ ಬಳಕೆ ಸಿಲಿಂಡರ್ ಸಿಗುವುದಿಲ್ಲ ಎಂದು ಏಕಾಏಕಿ ನೂರಾರು ಗ್ರಾಹಕರು ಗ್ಯಾಸ್ ಏಜೆನ್ಸಿ ಬಳಿ ಜಮಾಯಿಸಿದ ಪರಿಣಾಮ…

10 hours ago