ದೇಶ- ವಿದೇಶ

ಮುಂದುವರೆದ ಅಮೆರಿಕ ಚೀನಾ ಸುಂಕ ಸಮರ

ವಾಷಿಂಗ್ಟನ್ : ಅಮೆರಿಕ ಹಾಗೂ ಚೀನಾದ ನಡುವೆ ಮತ್ತೆ ಸುಂಕ ಸಮರ ಮುಂದುವರಿದಿದ್ದು, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೆಚ್ಚುವರಿ ಶೇ.೧೦೦ರಷ್ಟು ಸುಂಕವನ್ನು ಘೋಷಿಸಿದ್ದಾರೆ.

ಕ್ಸಿಜಿನ್‌ಪಿಂಗ್ ಅವರೊಂದಿಗಿನ ಶೃಂಗಸಭೆಯನ್ನು ರದ್ದುಗೊಳಿಸುವುದಾಗಿ ಟ್ರಂಪ್ ತಿಳಿಸಿದ್ದಾರೆ. ಅಪರೂಪದ ಭೂಮಿಯ ಖನಿಜಗಳ ಮೇಲಿನ ರಫ್ತು ನಿರ್ಬಂಧಕ್ಕೆ ಸಂಬಂಽಸಿದಂತೆ ಚೀನಾ ಜೊತೆಗಿನ ಅಮೆರಿಕ ವ್ಯಾಪಾರ ಯುದ್ಧವನ್ನು ಮತ್ತೆ ಪ್ರಾರಂಭಿಸಿದ್ದು, ಚೀನಾ ಕೆಲವೊಂದು ಅಸಾಧಾರಣ ಕ್ರಮಗಳನ್ನು ಕೈಗೊಂಡಿದೆ. ಅದಕ್ಕೆ ಪ್ರತಿಕಾರವಾಗಿ, ಎಲ್ಲಾ ನಿರ್ಣಾಯಕ ಸಾ-ವೇರ್‌ಗಳ ಮೇಲಿನ ಹೆಚ್ಚುವರಿ ಸುಂಕಗಳು ನ.೧ರಿಂದಲೇ ಜಾರಿಗೆ ಬರಲಿವೆ. ಯುಎಸ್ ರಫ್ತು ನಿಯಂತ್ರಣಗಳು ಸಹ ಜಾರಿಗೆ ಬರಲಿವೆ ಎಂದು ಟ್ರೂತ್ ಸೋಷಿಯಲ್‌ನಲ್ಲಿ ಟ್ರಂಪ್ ಪೋಸ್ಟ್ ಮಾಡಿದ್ದಾರೆ.

ಇದಲ್ಲದೆ ಡೊನಾಲ್ಡ್ ಟ್ರಂಪ್ ಚೀನಾ ಅಧ್ಯಕ್ಷ ಕ್ಸಿಜಿನ್‌ಪಿಂಗ್ ಅವರೊಂದಿಗೆ ಮಾತುಕತೆ ಮತ್ತು ಸಭೆಗಳ ಸಾಧ್ಯತೆಯನ್ನು ತಿರಸ್ಕರಿಸಿದ್ದಾರೆ. ಚೀನಾದ ಉತ್ಪನ್ನಗಳ ಮೇಲಿನ ಶೇ.೧೦೦ರಷ್ಟು ಸುಂಕವು ನವೆಂಬರ್ ೧, ೨೦೨೫ರಿಂದ ಜಾರಿಗೆ ಬರಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ:-ಮುಂದುವರೆದ ಅಮೆರಿಕ ಚೀನಾ ಸುಂಕ ಸಮರ

ಟ್ರಂಪ್- ಕ್ಸಿಜಿನ್‌ಪಿಂಗ್ ಸಭೆ ಇಲ್ಲ
ಈ ತಿಂಗಳ ಕೊನೆಯಲ್ಲಿ ದಕ್ಷಿಣ ಕೊರಿಯಾದಲ್ಲಿ ನಡೆಯಲಿರುವ ಏಷ್ಯಾ-ಪೆಸಿಫಿಕ್ ಆರ್ಥಿಕ ಸಹಕಾರ ಶೃಂಗಸಭೆಯಲ್ಲಿ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರನ್ನು ಭೇಟಿ ಮಾಡುವ ಯೋಜನೆಯನ್ನು ಡೊನಾಲ್ಡ್ ಟ್ರಂಪ್ ಪ್ರಶ್ನಿಸಿದ್ದಾರೆ.
ನಾನು ಎರಡು ವಾರಗಳಲ್ಲಿ ದಕ್ಷಿಣ ಕೊರಿಯಾದಲ್ಲಿ ನಡೆಯಲಿರುವ ಎಪಿಕ್ ಅ ಶೃಂಗಸಭೆಯಲ್ಲಿ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರನ್ನು ಭೇಟಿಯಾಗಬೇಕಿತ್ತು. ಆದರೆ ಈಗ ಹಾಗೆ ಮಾಡಲು ನನಗೆ ಯಾವುದೇ ಕಾರಣ ಕಾಣುತ್ತಿಲ್ಲ ಎಂದು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಡಿ.ಕೆ.ಶಿವಕುಮಾರ್‌ ಅತ್ಯಂತ ಯಶಸ್ವಿ ಅಧ್ಯಕ್ಷ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಇವತ್ತಿಗೆ ಆರು ವರ್ಷಗಳಾಗಿದ್ದು, ಅತ್ಯಂತ ಯಶಸ್ವಿ ಅಧ್ಯಕ್ಷ ಎನಿಸಿಕೊಂಡಿದ್ದಾರೆ ಎಂದು ಸಚಿವೆ…

9 mins ago

ಸ್ಮೃತಿ ಇರಾನಿ ಕಾಣುತ್ತಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ವ್ಯಂಗ್ಯ

ಬೆಂಗಳೂರು: ಅಡುಗೆ ಅನಿಲದ ಬೆಲೆ ಏರಿಕೆ ಮಾಡುವ ಮೂಲಕ ಮಹಿಳೆಯರಿಗೆ ಉಡುಗೊರೆ ನೀಡಿರುವ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಲು ಬಯಸುವೆ.…

15 mins ago

ಮೃಗಾಲಯದ ಆನೆ ಅಭಿ ಮತ್ತಿಗೋಡಿನಲ್ಲಿ ಕೊನೆಯುಸಿರು

ಮೈಸೂರು: ನಾಗರಹೊಳೆ ವ್ಯಾಪ್ತಿಯ ಮತ್ತಿಗೋಡು ಆನೆ ಶಿಬಿರದಲ್ಲಿದ್ದ 23 ವರ್ಷದ ಜೂನಿಯರ್ ಅಭಿ ಆನೆ ಅನಾರೋಗ್ಯದಿಂದ ಮೃತಪಟ್ಟಿದೆ.‌ ನಾಗರಹೊಳೆ ರಾಷ್ಟ್ರೀಯ…

25 mins ago

ರಾಜ್ಯದ ಹಲವೆಡೆ ತಾಪಮಾನ ಹೆಚ್ಚಳ: ಹೀಟ್‌ ಸ್ಟ್ರೋಕ್‌ ಭೀತಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬಿಸಿಲ ಝಳ ಹೆಚ್ಚುತ್ತಿದ್ದು, ಹೀಟ್‌ ಸ್ಟ್ರೋಕ್‌ ಭೀತಿ ಎದುರಾಗಿದೆ. ಹಲವೆಡೆ…

33 mins ago

ಚಾಮರಾಜನಗರ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಬೆಂಕಿ ಅವಘಡ

ಚಾಮರಾಜನಗರ: ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ. ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಚಾಮರಾಜನಗರ ವೃತ್ತ ನಿರೀಕ್ಷಕರ ಕಚೇರಿಯಲ್ಲಿ…

1 hour ago

ಓದುಗರ ಪತ್ರ: ಅನಿಲ ಸಿಲಿಂಡರ್ ಬೆಲೆ ಏರಿಕೆ ತರವಲ್ಲ

ಪಶ್ಚಿಮ ಏಷ್ಯಾದ ಯುದ್ಧದ ಹಿನ್ನೆಲೆಯಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿದ್ದು, ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ದರ ರೂ.೬೦…

2 hours ago