ದೇಶ- ವಿದೇಶ

ಮುಂದುವರೆದ ಅಮೆರಿಕ ಚೀನಾ ಸುಂಕ ಸಮರ

ವಾಷಿಂಗ್ಟನ್ : ಅಮೆರಿಕ ಹಾಗೂ ಚೀನಾದ ನಡುವೆ ಮತ್ತೆ ಸುಂಕ ಸಮರ ಮುಂದುವರಿದಿದ್ದು, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೆಚ್ಚುವರಿ ಶೇ.೧೦೦ರಷ್ಟು ಸುಂಕವನ್ನು ಘೋಷಿಸಿದ್ದಾರೆ.

ಕ್ಸಿಜಿನ್‌ಪಿಂಗ್ ಅವರೊಂದಿಗಿನ ಶೃಂಗಸಭೆಯನ್ನು ರದ್ದುಗೊಳಿಸುವುದಾಗಿ ಟ್ರಂಪ್ ತಿಳಿಸಿದ್ದಾರೆ. ಅಪರೂಪದ ಭೂಮಿಯ ಖನಿಜಗಳ ಮೇಲಿನ ರಫ್ತು ನಿರ್ಬಂಧಕ್ಕೆ ಸಂಬಂಽಸಿದಂತೆ ಚೀನಾ ಜೊತೆಗಿನ ಅಮೆರಿಕ ವ್ಯಾಪಾರ ಯುದ್ಧವನ್ನು ಮತ್ತೆ ಪ್ರಾರಂಭಿಸಿದ್ದು, ಚೀನಾ ಕೆಲವೊಂದು ಅಸಾಧಾರಣ ಕ್ರಮಗಳನ್ನು ಕೈಗೊಂಡಿದೆ. ಅದಕ್ಕೆ ಪ್ರತಿಕಾರವಾಗಿ, ಎಲ್ಲಾ ನಿರ್ಣಾಯಕ ಸಾ-ವೇರ್‌ಗಳ ಮೇಲಿನ ಹೆಚ್ಚುವರಿ ಸುಂಕಗಳು ನ.೧ರಿಂದಲೇ ಜಾರಿಗೆ ಬರಲಿವೆ. ಯುಎಸ್ ರಫ್ತು ನಿಯಂತ್ರಣಗಳು ಸಹ ಜಾರಿಗೆ ಬರಲಿವೆ ಎಂದು ಟ್ರೂತ್ ಸೋಷಿಯಲ್‌ನಲ್ಲಿ ಟ್ರಂಪ್ ಪೋಸ್ಟ್ ಮಾಡಿದ್ದಾರೆ.

ಇದಲ್ಲದೆ ಡೊನಾಲ್ಡ್ ಟ್ರಂಪ್ ಚೀನಾ ಅಧ್ಯಕ್ಷ ಕ್ಸಿಜಿನ್‌ಪಿಂಗ್ ಅವರೊಂದಿಗೆ ಮಾತುಕತೆ ಮತ್ತು ಸಭೆಗಳ ಸಾಧ್ಯತೆಯನ್ನು ತಿರಸ್ಕರಿಸಿದ್ದಾರೆ. ಚೀನಾದ ಉತ್ಪನ್ನಗಳ ಮೇಲಿನ ಶೇ.೧೦೦ರಷ್ಟು ಸುಂಕವು ನವೆಂಬರ್ ೧, ೨೦೨೫ರಿಂದ ಜಾರಿಗೆ ಬರಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ:-ಮುಂದುವರೆದ ಅಮೆರಿಕ ಚೀನಾ ಸುಂಕ ಸಮರ

ಟ್ರಂಪ್- ಕ್ಸಿಜಿನ್‌ಪಿಂಗ್ ಸಭೆ ಇಲ್ಲ
ಈ ತಿಂಗಳ ಕೊನೆಯಲ್ಲಿ ದಕ್ಷಿಣ ಕೊರಿಯಾದಲ್ಲಿ ನಡೆಯಲಿರುವ ಏಷ್ಯಾ-ಪೆಸಿಫಿಕ್ ಆರ್ಥಿಕ ಸಹಕಾರ ಶೃಂಗಸಭೆಯಲ್ಲಿ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರನ್ನು ಭೇಟಿ ಮಾಡುವ ಯೋಜನೆಯನ್ನು ಡೊನಾಲ್ಡ್ ಟ್ರಂಪ್ ಪ್ರಶ್ನಿಸಿದ್ದಾರೆ.
ನಾನು ಎರಡು ವಾರಗಳಲ್ಲಿ ದಕ್ಷಿಣ ಕೊರಿಯಾದಲ್ಲಿ ನಡೆಯಲಿರುವ ಎಪಿಕ್ ಅ ಶೃಂಗಸಭೆಯಲ್ಲಿ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರನ್ನು ಭೇಟಿಯಾಗಬೇಕಿತ್ತು. ಆದರೆ ಈಗ ಹಾಗೆ ಮಾಡಲು ನನಗೆ ಯಾವುದೇ ಕಾರಣ ಕಾಣುತ್ತಿಲ್ಲ ಎಂದು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

11 hours ago

ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ: ಇಂಡಿಗೋ ಏರ್‌ಲೈನ್ಸ್‌ಗೆ ಗಡುವು ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…

11 hours ago

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

12 hours ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

12 hours ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

13 hours ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

13 hours ago