ದೇಶ- ವಿದೇಶ

ಮುಂದುವರೆದ ಅಮೆರಿಕ ಚೀನಾ ಸುಂಕ ಸಮರ

ವಾಷಿಂಗ್ಟನ್ : ಅಮೆರಿಕ ಹಾಗೂ ಚೀನಾದ ನಡುವೆ ಮತ್ತೆ ಸುಂಕ ಸಮರ ಮುಂದುವರಿದಿದ್ದು, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೆಚ್ಚುವರಿ ಶೇ.೧೦೦ರಷ್ಟು ಸುಂಕವನ್ನು ಘೋಷಿಸಿದ್ದಾರೆ.

ಕ್ಸಿಜಿನ್‌ಪಿಂಗ್ ಅವರೊಂದಿಗಿನ ಶೃಂಗಸಭೆಯನ್ನು ರದ್ದುಗೊಳಿಸುವುದಾಗಿ ಟ್ರಂಪ್ ತಿಳಿಸಿದ್ದಾರೆ. ಅಪರೂಪದ ಭೂಮಿಯ ಖನಿಜಗಳ ಮೇಲಿನ ರಫ್ತು ನಿರ್ಬಂಧಕ್ಕೆ ಸಂಬಂಽಸಿದಂತೆ ಚೀನಾ ಜೊತೆಗಿನ ಅಮೆರಿಕ ವ್ಯಾಪಾರ ಯುದ್ಧವನ್ನು ಮತ್ತೆ ಪ್ರಾರಂಭಿಸಿದ್ದು, ಚೀನಾ ಕೆಲವೊಂದು ಅಸಾಧಾರಣ ಕ್ರಮಗಳನ್ನು ಕೈಗೊಂಡಿದೆ. ಅದಕ್ಕೆ ಪ್ರತಿಕಾರವಾಗಿ, ಎಲ್ಲಾ ನಿರ್ಣಾಯಕ ಸಾ-ವೇರ್‌ಗಳ ಮೇಲಿನ ಹೆಚ್ಚುವರಿ ಸುಂಕಗಳು ನ.೧ರಿಂದಲೇ ಜಾರಿಗೆ ಬರಲಿವೆ. ಯುಎಸ್ ರಫ್ತು ನಿಯಂತ್ರಣಗಳು ಸಹ ಜಾರಿಗೆ ಬರಲಿವೆ ಎಂದು ಟ್ರೂತ್ ಸೋಷಿಯಲ್‌ನಲ್ಲಿ ಟ್ರಂಪ್ ಪೋಸ್ಟ್ ಮಾಡಿದ್ದಾರೆ.

ಇದಲ್ಲದೆ ಡೊನಾಲ್ಡ್ ಟ್ರಂಪ್ ಚೀನಾ ಅಧ್ಯಕ್ಷ ಕ್ಸಿಜಿನ್‌ಪಿಂಗ್ ಅವರೊಂದಿಗೆ ಮಾತುಕತೆ ಮತ್ತು ಸಭೆಗಳ ಸಾಧ್ಯತೆಯನ್ನು ತಿರಸ್ಕರಿಸಿದ್ದಾರೆ. ಚೀನಾದ ಉತ್ಪನ್ನಗಳ ಮೇಲಿನ ಶೇ.೧೦೦ರಷ್ಟು ಸುಂಕವು ನವೆಂಬರ್ ೧, ೨೦೨೫ರಿಂದ ಜಾರಿಗೆ ಬರಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ:-ಮುಂದುವರೆದ ಅಮೆರಿಕ ಚೀನಾ ಸುಂಕ ಸಮರ

ಟ್ರಂಪ್- ಕ್ಸಿಜಿನ್‌ಪಿಂಗ್ ಸಭೆ ಇಲ್ಲ
ಈ ತಿಂಗಳ ಕೊನೆಯಲ್ಲಿ ದಕ್ಷಿಣ ಕೊರಿಯಾದಲ್ಲಿ ನಡೆಯಲಿರುವ ಏಷ್ಯಾ-ಪೆಸಿಫಿಕ್ ಆರ್ಥಿಕ ಸಹಕಾರ ಶೃಂಗಸಭೆಯಲ್ಲಿ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರನ್ನು ಭೇಟಿ ಮಾಡುವ ಯೋಜನೆಯನ್ನು ಡೊನಾಲ್ಡ್ ಟ್ರಂಪ್ ಪ್ರಶ್ನಿಸಿದ್ದಾರೆ.
ನಾನು ಎರಡು ವಾರಗಳಲ್ಲಿ ದಕ್ಷಿಣ ಕೊರಿಯಾದಲ್ಲಿ ನಡೆಯಲಿರುವ ಎಪಿಕ್ ಅ ಶೃಂಗಸಭೆಯಲ್ಲಿ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರನ್ನು ಭೇಟಿಯಾಗಬೇಕಿತ್ತು. ಆದರೆ ಈಗ ಹಾಗೆ ಮಾಡಲು ನನಗೆ ಯಾವುದೇ ಕಾರಣ ಕಾಣುತ್ತಿಲ್ಲ ಎಂದು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

3 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

3 hours ago

ಓದುಗರ ಪತ್ರ: ಲೆಕ್ಕ ಹಾಕಿಕೊಂಡು ಮುಷ್ಕರ ನಡೆಸುವ ಬ್ಯಾಂಕ್ ಯೂನಿಯನ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಿ

ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…

3 hours ago

ಬಾಗಿಲುಗಳನ್ನು ತೆರೆದಿಡಿ, ಸಂವಹನವನ್ನು ಪಾರದರ್ಶಕವಾಗಿಡಿ

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ  ಯಾವುದೇ ನಾಗರಿಕನು ತನ್ನ…

3 hours ago

ಗಾಲಿಕುರ್ಚಿಯಲ್ಲಿ ಕುಳಿತೇ ಯಶಸ್ವೀ ಲೇಖಕಿಯಾದ ಹಿಮಾಂಶಿಕಾ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ‍್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…

4 hours ago

ಇ-ಕೆವೈಸಿಗೆ ಮುಗಿಬಿದ್ದ ಫಲಾನುಭವಿಗಳು

ಕೆ.ಬಿ.ರಮೇಶನಾಯಕ ರಾಜ್ಯ ಸರ್ಕಾರದ ಗಡುವಿನೊಳಗೆ ಪ್ರಕ್ರಿಯೆ ಮುಗಿಸಲು ಇಲಾಖೆ ಕಸರತ್ತು.  ಮೈಸೂರು: ನಕಲಿ ಫಲಾನುಭವಿಗಳನ್ನು ಕೈಬಿಟ್ಟು ಪಾರದರ್ಶಕತೆ ಕಾಯ್ದುಕೊಳ್ಳಲು ಹಾಗೂ…

4 hours ago