ಇಸ್ಲಾಮಾಬಾದ್ : ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧವನ್ನು ಕೊನೆಗೊಳಿಸುವ ಉದ್ದೇಶದಿಂದ ಇಸ್ಲಾಮಾಬಾದ್ನಲ್ಲಿ ಆಯೋಜಿಸಲಾಗಿರುವ ಐತಿಹಾಸಿಕ ಶಾಂತಿ ಮಾತುಕತೆಗೆ ಇರಾನ್ ನಿಯೋಗ ಶುಕ್ರವಾರ ರಾತ್ರಿ ಬಂದಿಳಿದಿದೆ. ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ನೇತೃತ್ವದ ನಿಯೋಗವೂ ಇಂದು ಸಂಜೆ ವೇಳೆಗೆ ಇಸ್ಲಾಮಾಬಾದ್ಗೆ ತಲುಪುವ ನಿರೀಕ್ಷೆಯಿದೆ.
ಈ ಹಿನ್ನೆಲೆ ಇಸ್ಲಾಮಾಬಾದ್ನಲ್ಲಿ ಭಾರೀ ಭದ್ರತೆ ಕೈಗೊಳ್ಳಲಾಗಿದೆ. ನಗರದ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ರಸ್ತೆಗಳಲ್ಲಿ ವಾಹನ ಸಂಚಾರ ಬಂದ್ ಆಗಿದೆ. ಇರಾನ್ ನಿಯೋಗ ಪಾಕ್ ವಾಯುನೆಲೆಗೆ ಬರುತ್ತಿದ್ದಂತೆ ಪಾಕ್ ಸೇನೆ ಎಸ್ಕಾರ್ಟ್ ಮಾಡಿ, ಭದ್ರತೆ ನೀಡಿದೆ.
ಇರಾನ್ ನಿಯೋಗದ ನಾಯಕತ್ವವನ್ನು ಸಂಸತ್ ಸ್ಪೀಕರ್ ಮೊಹಮ್ಮದ್ ಬಘರ್ ಗಾಲಿಬಾಫ್ ಮತ್ತು ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಅವರು ವಹಿಸಿದ್ದಾರೆ. ಪಾಕ್ ವಿದೇಶಾಂಗ ಸಚಿವ ಇಷಾಕ್ ದಾರ್, ರಾಷ್ಟ್ರೀಯ ಅಸೆಂಬ್ಲಿ ಸ್ಪೀಕರ್ ಸರ್ದಾರ್ ಅಯಾಜ್ ಸಾದಿಕ್, ಸೇನಾ ಮುಖ್ಯಸ್ಥ ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್ ಸೇರಿದಂತೆ ಹಿರಿಯ ಅಧಿಕಾರಿಗಳು ವಿಮಾನ ನಿಲ್ದಾಣದಲ್ಲಿ ನಿಯೋಗವನ್ನು ಸ್ವಾಗತಿಸಿವೆ ಎಂದು ಪಾಕಿಸ್ತಾನದ ವಿದೇಶಾಂಗ ಸಚಿವಾಲಯ ಹೇಳಿವೆ.
ಮಾತುಕತೆ ಸಕಾರಾತ್ಮಕವಾಗಿರುತ್ತದೆ ಎಂದು ಭಾವಿಸುತ್ತೇನೆ. ಇರಾನ್ ಉತ್ತಮ ನಂಬಿಕೆಯಿಂದ ಮುಂದುವರಿದರೆ ನಾವು ಸ್ವಾಗತಿಸುತ್ತೇವೆ. ಆದರೆ ಅಮೆರಿಕದ ಜೊತೆ ಆಟವಾಡಿದರೆ ಸುಮ್ಮನಿರುವುದಿಲ್ಲ ಎಂದು ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಹೇಳಿದ್ದಾರೆ.
ಲೆಬನಾನ್ ಮೇಲಿನ ದಾಳಿಯನ್ನು ಖಂಡಿಸಿರುವ ಇರಾನ್ ಹಿನ್ನೆಲೆಯಲ್ಲಿ ಮಾತುಕತೆಗೆ ಭಾಗವಹಿಸುವುದಿಲ್ಲ ಎಂದು ಇವಾಗಲೂ ಹೇಳುತ್ತಿದೆ. ಇದರ ಹೊರತಾಗಿ ನಿಯೋಗ ಬಂದಿಳಿದಿರುವುದು ಗಮನಾರ್ಹ.
ನವದೆಹಲಿ: ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…
ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…
ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…
ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…
ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ…
ಶುಭಾ ಖಟಾವಕರ ಮ್ಹೆತ್ರಸ್ ಸುಪ್ರೀಂ ಕೋರ್ಟ್ನಲ್ಲಿ ಸ್ವತಃ ಅಟಾರ್ನಿ ಜನರಲ್ ಹೇಳಿಕೆ! ೨೦೨೩ರ ನಂತರ ತಯಾರಾದ ವಾಹನಗಳಿಗೆ ಮಾತ್ರ ಇ-೨೦…