ದೇಶ- ವಿದೇಶ

ಟ್ರಂಪ್‌ ಸುಂಕ ರದ್ದುಪಡಿಸಿದ ಅಮೆರಿಕಾ ಸುಪ್ರೀಂಕೋರ್ಟ್‌ : ಭಾರತ ಹೇಳಿದ್ದೇನು?

ಹೊಸದಿಲ್ಲಿ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿವಿಧ ದೇಶಗಳ ಮೇಲೆ ಹೇರಿರುವ ಹೆಚ್ಚುವರಿ ಸಾಮೂಹಿಕ ಸುಂಕಗಳನ್ನು ಅಮೆರಿಕ ಸುಪ್ರೀಂ ಕೋರ್ಟ್‌ ರದ್ದುಪಡಿಸಿದೆ. ಈ ಕುರಿತ ಬೆಳವಣಿಗೆ ಮತ್ತು ವಿಕಾಸಗಳನ್ನು ಅಧ್ಯಯನ ಮಾಡುತ್ತಿದ್ದೇವೆ” ಎಂದು ಕೇಂದ್ರ ಸರ್ಕಾರ ಹೇಳಿದೆ.

ಅಮೆರಿಕ ಸುಪ್ರೀಂ ಕೋರ್ಟ್‌ನ ಸುಂಕಗಳ ಕುರಿತಾದ ತೀರ್ಪನ್ನು ಗಮನಿಸಿದ್ದೇವೆ. ಅಧ್ಯಕ್ಷ ಟ್ರಂಪ್ ಅವರು ಇದರ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದಾರೆ. ಅಮೆರಿಕ ಸರ್ಕಾರದಿಂದ ಕೆಲವು ಕ್ರಮಗಳನ್ನು ಘೋಷಿಸಲಾಗಿದೆ. ಇವುಗಳ ಪರಿಣಾಮಗಳನ್ನು ನಾವು ಅಧ್ಯಯನ ಮಾಡುತ್ತಿದ್ದೇವೆ,” ಎಂದು ಸಚಿವ ಪಿಯುಷ್‌ ಗೊಯಲ್  ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ಹೇಳಿಕೆಯು ಮಹತ್ವದ್ದಾಗಿದ್ದು, ಭಾರತೀಯ ಪ್ರತಿನಿಧಿ ಸಂಘವು ಭಾನುವಾರ ವಾಷಿಂಗ್ಟನ್‌ಗೆ ತೆರಳಲಿದ್ದು, ಮೂರು ದಿನಗಳ ಕಾಲ ಚರ್ಚೆ ನಡೆಸಿ ಕಾನೂನು ಒಪ್ಪಂದವನ್ನು ಅಂತಿಮಗೊಳಿಸುವ ನಿರೀಕ್ಷೆಯಿತ್ತು. ಈ ಒಪ್ಪಂದದ ಅಡಿಯಲ್ಲಿ ಸುಂಕಗಳನ್ನು 25%ರಿಂದ 18%ಕ್ಕೆ ಇಳಿಸುವ ನಿರೀಕ್ಷೆಯಿತ್ತು. ಅಮೆರಿಕ ಕೋರ್ಟ್‌ ತೀರ್ಪಿನ ಬೆನ್ನಲ್ಲೇ ಅಮೆರಿಕಕ್ಕೆ ಆಮದು ಮಾಡಿಕೊಳ್ಳುವ ಸರಕುಗಳ ಮೇಲೆ 150 ದಿನಗಳ ಅವಧಿಯ ಶೇ 10ರಷ್ಟು ತಾತ್ಕಾಲಿಕ ಆಮದಿಗೆ ಸುಂಕ ವಿಧಿಸುವುದಾಗಿ ಟ್ರಂಪ್‌ ಹೇಳಿದ್ದಾರೆ. ಈ ಬೆಳವಣಿಗೆಯನ್ನು ನಾವು ಗಮನಿಸುತ್ತಿದ್ದೇವೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ಭಾರತ-ಅಮೆರಿಕ ಒಪ್ಪಂದದ ಅಡಿಯಲ್ಲಿ ಭಾರತವು $500 ಬಿಲಿಯನ್ ಮೌಲ್ಯದ ಅಮೆರಿಕ ಉತ್ಪನ್ನಗಳನ್ನು ಖರೀದಿಸಲು ಒಪ್ಪಂದ ಮಾಡಿಕೊಂಡಿತ್ತು. ಈ ಬದಲಿಗೆ ಅಮೆರಿಕವು ಭಾರತದ ಮೇಲಿನ ಸುಂಕವನ್ನು 50%ರಿಂದ 18%ಕ್ಕೆ ಇಳಿಸಲು ಒಪ್ಪಿತ್ತು. ಆದರೆ ಈ ಒಪ್ಪಂದ ಇನ್ನೂ ಅಧಿಕೃತವಾಗಿ ಸಹಿ ಆಗಿಲ್ಲ. ಕೋರ್ಟ್ ಆದೇಶದ ನಂತರ ಟ್ರಂಪ್ ಅವರು Section 122 ಅಡಿಯಲ್ಲಿ ಜಾಗತಿಕವಾಗಿ 10% ಸುಂಕವನ್ನು ಘೋಷಿಸಿದ್ದಾರೆ. Section 232 (ರಾಷ್ಟ್ರೀಯ ಭದ್ರತೆ) ಮತ್ತು Section 301 (1974 ವಾಣಿಜ್ಯ ಕಾಯ್ದೆ) ಸುಂಕಗಳು ಮುಂದುವರಿಯುತ್ತವೆ. ಭಾರತದ ಸುಮಾರು 55% ರಫ್ತುಗಳು 25% ಸುಂಕದಿಂದ ಮುಕ್ತವಾಗಿವೆ (ಸಾಮಾನ್ಯ MFN ಸುಂಕಕ್ಕೆ ಮಾತ್ರ ಒಳಪಡುತ್ತವೆ). ಉಳಿದವುಗಳಲ್ಲಿ ಸ್ಟೀಲ್ ಮತ್ತು ಅಲ್ಯೂಮಿನಿಯಂಗೆ 50%, ಕೆಲವು ಆಟೋ ಕಾಂಪೋನೆಂಟ್‌ಗಳಿಗೆ 25% ಸುಂಕ ಮುಂದುವರಿಯುತ್ತದೆ. ಸ್ಮಾರ್ಟ್‌ಫೋನ್, ಪೆಟ್ರೋಲಿಯಂ ಉತ್ಪನ್ನಗಳು, ಔಷಧಗಳು ಸೇರಿದಂತೆ 40% ರಫ್ತುಗಳು ಸುಂಕ ಮುಕ್ತವಾಗಿವೆ.

ಈ ಬೆಳವಣಿಗೆಯಿಂದ ಭಾರತೀಯ ರಫ್ತುದಾರರಿಗೆ ತಾತ್ಕಾಲಿಕ ರಿಯಾಯಿತಿ ಸಿಗುವ ಸಾಧ್ಯತೆಯಿದ್ದರೂ, ಒಪ್ಪಂದದ ಭವಿಷ್ಯ ಅನಿಶ್ಚಿತವಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕಾಂಕ್ರೋಚ್‌ಗಳ ಮೇಲೆ ಲಾಠಿಚಾರ್ಜ್:‌ ವಿಡಿಯೋ ನೋಡಲು ಟೈಮ್‌ ಇಲ್ಲ ಎಂದ ಸುಪ್ರೀಂಕೋರ್ಟ್‌

ನವದೆಹಲಿ: ನೀಟ್‌ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…

13 hours ago

ಓದುಗರ ಪತ್ರ: ರೈಲಿನಲ್ಲಿ ತಿನಿಸು ಮಾರುವವರು ವೈಯಕ್ತಿಕ ಸ್ವಚ್ಛತೆಗೂ ಗಮನ ನೀಡಲಿ

ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…

22 hours ago

ಓದುಗರ ಪತ್ರ: ‘ಗೃಹಜ್ಯೋತಿ’ ಗೊಂದಲ ನಿವಾರಿಸಿ

ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…

22 hours ago

ಓದುಗರ ಪತ್ರ: ಬರಪೀಡಿತ ಜಿಲ್ಲೆಗಳೆಂದು ಘೋಷಿಸಿ

ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…

22 hours ago

ಓದುಗರ ಪತ್ರ: ಸಂಸತ್ ಚಲೋ ತಡೆಗೆ ನಡೆದಿತ್ತೆ ಹುನ್ನಾರ?

ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ…

22 hours ago

ಇ-20 ಇಂಧನಕ್ಕೆ ಭಾರತ ಪ್ರಯೋಗಾಲಯವಾಯಿತೆ?!

ಶುಭಾ ಖಟಾವಕರ ಮ್ಹೆತ್ರಸ್ ಸುಪ್ರೀಂ ಕೋರ್ಟ್‌ನಲ್ಲಿ ಸ್ವತಃ ಅಟಾರ್ನಿ ಜನರಲ್ ಹೇಳಿಕೆ! ೨೦೨೩ರ ನಂತರ ತಯಾರಾದ ವಾಹನಗಳಿಗೆ ಮಾತ್ರ ಇ-೨೦…

22 hours ago