ದೇಶ- ವಿದೇಶ

ಅಮೆರಿಕಾ ಪ್ರಯಾಣ ನಿರ್ಬಂಧ ಸಾಧ್ಯತೆ: ಭೂತಾನ್‌, ಪಾಕಿಸ್ತಾನ ಸೇರಿ 41 ರಾಷ್ಟ್ರಗಳಿಗೆ ನಿರ್ಬಂಧ ವಿಧಿಸಲು ಟ್ರಂಪ್‌ ಸರ್ಕಾರ ತೀರ್ಮಾನ

ವಾಷಿಂಗ್ಟನ್‌: ಹೊಸ ನಿಷೇಧದ ಭಾಗವಾಗಿ ಭೂತಾನ್‌, ಪಾಕಿಸ್ತಾನ ಸೇರಿದಂತೆ ವಿಶ್ವದ 41 ರಾಷ್ಟ್ರ ಪ್ರಜೆಗಳಿಗೆ ಅಮೆರಿಕಾದ ಪ್ರಯಾಣ ನಿರ್ಬಂಧ ವಿಧಿಸಲು ಡೊನಾಲ್ಡ್‌ ಟ್ರಂಪ್‌ ಸರ್ಕಾರ ತೀರ್ಮಾನಿಸಿದೆ.

ಅಮೆರಿಕಾವೂ 41 ರಾಷ್ಟ್ರಗಳನ್ನು ಮೂರು ಪ್ರತ್ಯೇಕ ಗುಂಪುಗಳಾಗಿ ವಿಂಗಡಿಸಿದ್ದು, ಆ ದೇಶಗಳಿಗೆ ಅಮೆರಿಕಾ ಸರ್ಕಾರ ಜ್ಞಾಪನ ಪತ್ರವನ್ನು ಹೊರಡಿಸಿದೆ.

ಅಮೆರಿಕಾ ಪ್ರಯಾಣಕ್ಕೆ ನಿರ್ಬಂಧಿಸಿರುವ ದೇಶಗಳು ಯಾವ್ಯಾವು?

ಮೊದಲ ಗುಂಪಿನಲ್ಲಿ ಬರುವ ಅಫ್ಘಾನಿಸ್ತಾನ, ಕ್ಯೂಬಾ, ಇರಾನ್, ಸಿರಿಯಾ ಹಾಗೂ ಉತ್ತರ ಕೊರಿಯಾ ಸೇರಿದಂತೆ 10 ದೇಶಗಳ ಪೂರ್ಣ ವೀಸಾ ಅಮಾನತುಗೊಳಿಸಲಾಗುವುದು ಎಂದು ಹೇಳಿದೆ.

ಎರಡನೇ ಗುಂಪಿನಲ್ಲಿರುವ ಹೈಟಿ, ಲಾವೋಸ್‌, ಎರಿಟ್ರಿಯಾ, ಮಯನ್ಮಾರ್‌, ಹಾಗೂ ದಕ್ಷಿಣ ಸುಡಾನ್‌ ದೇಶಗಳು ಕೂಡ ಅಮಾನತುಗಳನ್ನು ಎದುರಿಸಬೇಕಾಗುತ್ತದೆ. ಅಲ್ಲದೇ ಯುಸ್‌ನ ಈ ನಿರ್ಧಾರದಿಂದ ಕೆಲ ವಿನಾಯಿತಿಗಳೊಂದಿಗೆ ಪ್ರವಾಸಿಗಳು, ವಿದ್ಯಾರ್ಥಿ ವೀಸಾಗಳು ಹಾಗೂ ಇನ್ನಿತರ ವಲಸೆ ವೀಸಾಗಳ್ಳುಳ್ಳ ಪ್ರಯಾಣಿಕರ ಮೇಲೆ ಪರಿಣಾಮ ಬೀರುತ್ತದೆ.

ಇನ್ನು ಮೂರನೇ ಗುಂಪಿನಲ್ಲಿರುವ ಭೂತಾನ್‌, ಪಾಕಿಸ್ತಾನ ಹಾಗೂ ಮಯನ್ಮಾರ್‌ ಸೇರಿದಂತೆ ಒಟ್ಟು 26 ದೇಶಗಳ ಸರ್ಕಾರಗಳು 60 ದಿನಗಳಲ್ಲಿ ನ್ಯೂನತೆಗಳನ್ನು ಆದಷ್ಟು ಬೇಗ ಪರಿಹರಿಸಬೇಕು. ಇಲ್ಲವಾದರೆ ಅಮೆರಿಕಾದ ವೀಸಾ ವಿತರಣೆಯನ್ನು ಭಾಗಶಃವಾಗಿ ಸ್ಥಗಿತಗೊಳಿಸುವುದನ್ನು ಪರಿಗಣಿಸಲಾಗುವುದು ಎಂದು ತಿಳಿಸಿದೆ.

ಅರ್ಚನ ಎಸ್‌ ಎಸ್

Recent Posts

ಮಧ್ಯಪ್ರಾಚ್ಯ ಬಿಕ್ಕಟ್ಟು: ಕನ್ನಡಿಗರ ರಕ್ಷಣೆಗೆ ಕೇಂದ್ರ ಸಚಿವ ಜೈಶಂಕರ್‌ಗೆ ಮನವಿ

ನವದೆಹಲಿ: ಇಸ್ರೇಲ್-ಇರಾನ್‌ ಸಂಘರ್ಷ ಮುಂದುವರಿದಿರುವ ಹಿನ್ನೆಲೆಯಲ್ಲಿ ವಿಮಾನಗಳ ಹಾರಾಟ ಸಂಪೂರ್ಣವಾಗಿ ಬಂದ್‌ ಆಗಿದೆ. ಸೌದಿ ಅರೇಬಿಯಾ ಸೇರಿದಂತೆ ವಿವಿಧ ದೇಶಗಳಲ್ಲಿ…

32 mins ago

ಮುಂದುವರಿದ ಇರಾನ್‌-ಇಸ್ರೇಲ್‌ ಸಂಘರ್ಷ: ಬೆಂಗಳೂರಿನಲ್ಲಿ 17 ವಿಮಾನಗಳ ಹಾರಾಟ ರದ್ದು

ಬೆಂಗಳೂರು: ಇರಾನ್‌-ಇಸ್ರೇಲ್‌ ಯುದ್ಧ ಮತ್ತೆ ತೀವ್ರಗೊಂಡ ಪರಿಣಾಮ ಬೆಂಗಳೂರಿಗೆ ಆಗಮಿಸಬೇಕಿದ್ದ 8 ಮತ್ತು ನಿರ್ಗಮಿಸಬೇಕಿದ್ದ 9 ವಿಮಾನಗಳ ಹಾರಾಟ ರದ್ದಾಗಿದೆ.…

1 hour ago

ಡಿ.ಕೆ.ಶಿವಕುಮಾರ್‌ ಅತ್ಯಂತ ಯಶಸ್ವಿ ಅಧ್ಯಕ್ಷ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಇವತ್ತಿಗೆ ಆರು ವರ್ಷಗಳಾಗಿದ್ದು, ಅತ್ಯಂತ ಯಶಸ್ವಿ ಅಧ್ಯಕ್ಷ ಎನಿಸಿಕೊಂಡಿದ್ದಾರೆ ಎಂದು ಸಚಿವೆ…

2 hours ago

ಸ್ಮೃತಿ ಇರಾನಿ ಕಾಣುತ್ತಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ವ್ಯಂಗ್ಯ

ಬೆಂಗಳೂರು: ಅಡುಗೆ ಅನಿಲದ ಬೆಲೆ ಏರಿಕೆ ಮಾಡುವ ಮೂಲಕ ಮಹಿಳೆಯರಿಗೆ ಉಡುಗೊರೆ ನೀಡಿರುವ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಲು ಬಯಸುವೆ.…

2 hours ago

ಮೃಗಾಲಯದ ಆನೆ ಅಭಿ ಮತ್ತಿಗೋಡಿನಲ್ಲಿ ಕೊನೆಯುಸಿರು

ಮೈಸೂರು: ನಾಗರಹೊಳೆ ವ್ಯಾಪ್ತಿಯ ಮತ್ತಿಗೋಡು ಆನೆ ಶಿಬಿರದಲ್ಲಿದ್ದ 23 ವರ್ಷದ ಜೂನಿಯರ್ ಅಭಿ ಆನೆ ಅನಾರೋಗ್ಯದಿಂದ ಮೃತಪಟ್ಟಿದೆ.‌ ನಾಗರಹೊಳೆ ರಾಷ್ಟ್ರೀಯ…

2 hours ago

ರಾಜ್ಯದ ಹಲವೆಡೆ ತಾಪಮಾನ ಹೆಚ್ಚಳ: ಹೀಟ್‌ ಸ್ಟ್ರೋಕ್‌ ಭೀತಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬಿಸಿಲ ಝಳ ಹೆಚ್ಚುತ್ತಿದ್ದು, ಹೀಟ್‌ ಸ್ಟ್ರೋಕ್‌ ಭೀತಿ ಎದುರಾಗಿದೆ. ಹಲವೆಡೆ…

2 hours ago