ದೇಶ- ವಿದೇಶ

ಹೊರ್ಮುಜ್‌ ಜಲಸಂಧಿಯಿಂದ ನುಗ್ಗಿಬಂದ ಅಮೆರಿಕದ ಯುದ್ಧನೌಕೆಗಳು : ಇರಾನ್‌ನಿಂದ ದಾಳಿ

ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಮೂರು ಯುದ್ಧನೌಕೆಗಳ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ಮತ್ತು ಸಣ್ಣ ದೋಣಿಗಳ ಮೂಲಕ ‘ಪ್ರಚೋದನೆ ಇಲ್ಲದೆ’ ದಾಳಿ ನಡೆಸಿದ ಬೆನ್ನಲ್ಲೇ ಅಮೆರಿಕ ಸೇನೆ ಗುರುವಾರ ಇರಾನ್ ಬಂದರುಗಳ ಮೇಲೆ ‘ಆತ್ಮರಕ್ಷಣಾ’ ದಾಳಿ ನಡೆಸಿದೆ. ಆದರೂ ಉಭಯ ದೇಶಗಳ ನಡುವಿನ ಕದನ ವಿರಾಮ ಒಪ್ಪಂದ ಜಾರಿಯಲ್ಲಿದೆ ಎಂದು ಅಮೆರಿಕ ಅಧಿಕಾರಿಗಳು ಹೇಳಿದ್ದಾರೆ.

ಯುಎಸ್ ಸೆಂಟ್ರಲ್ ಕಮಾಂಡ್ ಪ್ರಕಾರ, ಹಾರ್ಮುಜ್ ಜಲಸಂಧಿಯ ಮೂಲಕ ಗಲ್ಫ್ ಆಫ್ ಒಮನ್‌ಗೆ ಸಾಗುತ್ತಿದ್ದ ಯುಎಸ್‌ಎಸ್ ಟ್ರಕ್ಸ್ಟನ್, ಯುಎಸ್‌ಎಸ್ ರಾಫೆಲ್ ಪೆರಾಲ್ಟಾ ಮತ್ತು ಯುಎಸ್‌ಎಸ್ ಮೇಸನ್ ಎಂಬ ಮೂರು ಗೈಡೆಡ್-ಮಿಸೈಲ್ ಡಿಸ್ಟ್ರಾಯರ್‌ಗಳ ಮೇಲೆ ಇರಾನ್ ಬ್ಯಾಲಿಸ್ಟಿಕ್ ಕ್ಷಿಪಣಿ, ಕ್ರೂಸ್ ಕ್ಷಿಪಣಿ ಮತ್ತು ಆತ್ಮಾಹುತಿ ಡ್ರೋನ್‌ಗಳಿಂದ ದಾಳಿ ನಡೆಸಿತು. ಸಣ್ಣ ದೋಣಿಗಳೂ ದಾಳಿಯಲ್ಲಿ ಭಾಗಿಯಾಗಿದ್ದವು.

ಅಮೆರಿಕದ ಯುದ್ಧ ವಿಮಾನಗಳು ಮತ್ತು ಹೆಲಿಕಾಪ್ಟರ್‌ಗಳು ಎಲ್ಲಾ ಕ್ಷಿಪಣಿ, ಡ್ರೋನ್‌ಗಳನ್ನು ಹೊಡೆದುರುಳಿಸಿದವು. ಸಣ್ಣ ದೋಣಿಗಳನ್ನು ನಾಶಪಡಿಸಲಾಯಿತು. ‘ಮೂರು ಯುದ್ಧನೌಕೆಗಳಿಗೆ ಯಾವುದೇ ಹಾನಿಯಾಗಿಲ್ಲ. ಆದರೆ ಇರಾನ್ ದಾಳಿಕೋರರು ಸಂಪೂರ್ಣವಾಗಿ ನಾಶವಾಗಿದ್ದಾರೆ’ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರೂತ್ ಸೋಷಿಯಲ್‌ನಲ್ಲಿ ಬರೆದುಕೊಂಡಿದ್ದಾರೆ.

ಪ್ರತೀಕಾರದ ದಾಳಿ
ದಾಳಿಯ ನಂತರ ಅಮೆರಿಕ ಇರಾನ್‌ನ ಕ್ವೆಶ್ಮ್ ಬಂದರು ಮತ್ತು ಬಂದರ್ ಅಬ್ಬಾಸ್‌ನಲ್ಲಿನ ಕ್ಷಿಪಣಿ-ಡ್ರೋನ್ ಉಡಾವಣಾ ತಾಣಗಳು, ಕಮಾಂಡ್ ಕೇಂದ್ರಗಳ ಮೇಲೆ ವೈಮಾನಿಕ ದಾಳಿ ನಡೆಸಿತು. ಟ್ರಂಪ್ ಇದನ್ನು ‘ಪ್ರೀತಿಯ ತಿವಿತ’ ಎಂದು ಬಣ್ಣಿಸಿದ್ದಾರೆ.

ಇರಾನ್ ಆರೋಪವೇನು?
ಇರಾನ್ ಸರ್ಕಾರಿ ಮಾಧ್ಯಮಗಳ ಪ್ರಕಾರ, ಅಮೆರಿಕ ಸೇನೆ ತನ್ನ ತೈಲ ಟ್ಯಾಂಕರ್ ಮೇಲೆ ದಾಳಿ ನಡೆಸಿದ್ದಕ್ಕೆ ಪ್ರತೀಕಾರವಾಗಿ ಯುದ್ಧನೌಕೆಗಳ ಮೇಲೆ ಕ್ಷಿಪಣಿ ಹಾರಿಸಲಾಯಿತು. ‘ಶತ್ರುಗಳ ಘಟಕಗಳು ಹಾರ್ಮುಜ್ ಜಲಸಂಧಿಯಲ್ಲಿ ಹಾನಿಗೊಳಗಾಗಿ ಹಿಮ್ಮೆಟ್ಟುವಂತಾಯಿತು’ ಎಂದು ಇರಾನ್ ಸೇನೆ ಹೇಳಿದೆ. ಆದರೆ ಅಮೆರಿಕ ಇದನ್ನು ನಿರಾಕರಿಸಿದೆ.

ಕದನ ವಿರಾಮ ಉಲ್ಲಂಘನೆಯೇ?
ಎರಡೂ ಕಡೆಯವರು ಕದನ ವಿರಾಮ ಉಲ್ಲಂಘನೆಯಾಗಿಲ್ಲ ಎಂದು ಹೇಳಿಕೊಂಡಿದ್ದಾರೆ. ‘ನಾವು ಉದ್ವಿಗ್ನತೆ ಬಯಸುವುದಿಲ್ಲ. ಆದರೆ ಅಮೆರಿಕ ಪಡೆಗಳನ್ನು ರಕ್ಷಿಸಲು ಸಿದ್ಧರಿದ್ದೇವೆ’ ಎಂದು ಸೆಂಟ್ಕಾಂ ಹೇಳಿದೆ.

ಯುಎಇ ಮೇಲೂ ದಾಳಿ
ಇದೇ ವೇಳೆ ಯುಎಇಯ ಫುಜೈರಾ ಬಂದರಿನ ತೈಲ ಸಂಸ್ಕರಣಾಗಾರದ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ದಾಳಿ ನಡೆಸಿದ್ದು, ಮೂವರು ಭಾರತೀಯರು ಗಾಯಗೊಂಡಿದ್ದಾರೆ.

ಹಾರ್ಮುಜ್ ಬಿಕ್ಕಟ್ಟು
ಫೆಬ್ರವರಿ 28ರಿಂದ ಆರಂಭವಾದ ಅಮೆರಿಕ-ಇಸ್ರೇಲ್-ಇರಾನ್ ಯುದ್ಧದ ನಂತರ ಹಾರ್ಮುಜ್ ಜಲಸಂಧಿ ಬಹುತೇಕ ಮುಚ್ಚಿದ್ದು, ಸುಮಾರು 2,000 ಹಡಗುಗಳು ಸಿಲುಕಿವೆ. ವಿಶ್ವದ ಕಚ್ಚಾತೈಲದ ಶೇ.20ರಷ್ಟು ಇದೇ ಮಾರ್ಗದಲ್ಲಿ ಸಾಗುತ್ತದೆ. ಟ್ರಂಪ್ ‘ಪ್ರಾಜೆಕ್ಟ್ ಫ್ರೀಡಂ’ ಹೆಸರಿನಲ್ಲಿ ಹಡಗುಗಳಿಗೆ ರಕ್ಷಣೆ ನೀಡುವುದಾಗಿ ಘೋಷಿಸಿದ್ದರು.

ಸದ್ಯ ಗಲ್ಫ್‌ನಲ್ಲಿ ಉದ್ವಿಗ್ನತೆ ಮುಂದುವರಿದಿದ್ದು, ತೈಲ ಬೆಲೆ ಏರಿಕೆಯ ಆತಂಕ ಎದುರಾಗಿದೆ.

ಆಂದೋಲನ ಡೆಸ್ಕ್

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ದೇಶದ ಪ್ರವಾಸೋದ್ಯಮವೂ, ಚಲನಚಿತ್ರ ಪ್ರವಾಸೋದ್ಯಮವೂ

ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಅವರ ಈ ಪ್ರವಾಸದ ಹಿಂದೆ ತಮ್ಮ ರಾಜ್ಯದ ಪ್ರವಾಸೋದ್ಯಮವನ್ನು…

1 hour ago

ವೈಭವದ ವಸಂತ ಮಹಲ್‌ಗೆ ಬೇಕಿದೆ ಕಾಯಕಲ್ಪ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಗರಿಮೆಯ ಕಿರೀಟದಂತಿರುವ, ಅಚ್ಚ ಹಸಿರಿನ ನಡುವಿನ ೧೮೩ ವರ್ಷಗಳ ಇತಿಹಾಸವಿರುವ ಅರಮ ನೆಯೊಂದು…

3 hours ago

ವಿರಾಜಪೇಟೆ | ಅವಘಡಕ್ಕಾಗಿ ಕಾಯುತ್ತಿದೆ ಮಾರುಕಟ್ಟೆ ಹಳೇ ಕಟ್ಟಡ..!

ಕುಸಿಯುವ ಹಂತದಲ್ಲಿದ್ದರೂ ಕ್ರಮ ಕೈಗೊಳ್ಳದ ಸ್ಥಳೀಯ ಆಡಳಿತ; ಸೂಕ್ತ ಕ್ರಮಕ್ಕೆ ಒತ್ತಾಯ ಕಾಂಗೀರ ಬೋಪಣ್ಣ ವಿರಾಜಪೇಟೆ : ಪಟ್ಟಣದ ಖಾಸಗಿ…

3 hours ago

ಗುಂಡ್ಲುಪೇಟೆ | ಶಿಥಿಲಗೊಂಡಿರುವ ಅಂಗನವಾಡಿ, ಶಾಲೆ ಕಟ್ಟಡಗಳು

ಗುಂಡ್ಲುಪೇಟೆ ತಾಲ್ಲೂಕಿನ ಕೆಲ ಗ್ರಾಮಗಳ ಅಂಗನವಾಡು, ಶಾಲೆಗಳಲ್ಲಿ ಮೇಲ್ಚಾವಣೆ ಸೋರಿಕೆ ಗುಂಡ್ಲುಪೇಟೆ : ತಾಲ್ಲೂಕಿನ ಸೋಮಹಳ್ಳಿ ಗ್ರಾಮದ ಎರಡನೇ ಅಂಗನವಾಡಿಯ…

3 hours ago

ನಂಜನಗೂಡು ನಗರಸಭೆ ವಾರ್ಡ್ ವಿಂಗಡಣೆ ; ಒಂದರಲ್ಲಿ ಸಾವಿರ ; ಮತ್ತೊಂದರಲ್ಲಿ 6 ಸಾವಿರ ಜನ

ಅವೈಜ್ಞಾನಿಕ ಜನಸಂಖ್ಯೆ ವಿಂಗಡಣೆ ಬಗ್ಗೆ ಸಾರ್ವಜನಿಕರ ಆಕ್ಷೇಪ ಎಸ್. ಎಸ್. ಭಟ್ ನಂಜನಗೂಡು : ನಗರದಲ್ಲಿ ೧,೦೨೩ ಜನರಿಗೆ ಒಂದು…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ 07 ಶುಕ್ರವಾರ  

6 hours ago