ದೇಶ- ವಿದೇಶ

ಹೊರ್ಮುಜ್‌ ಜಲಸಂಧಿಯಿಂದ ನುಗ್ಗಿಬಂದ ಅಮೆರಿಕದ ಯುದ್ಧನೌಕೆಗಳು : ಇರಾನ್‌ನಿಂದ ದಾಳಿ

ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಮೂರು ಯುದ್ಧನೌಕೆಗಳ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ಮತ್ತು ಸಣ್ಣ ದೋಣಿಗಳ ಮೂಲಕ ‘ಪ್ರಚೋದನೆ ಇಲ್ಲದೆ’ ದಾಳಿ ನಡೆಸಿದ ಬೆನ್ನಲ್ಲೇ ಅಮೆರಿಕ ಸೇನೆ ಗುರುವಾರ ಇರಾನ್ ಬಂದರುಗಳ ಮೇಲೆ ‘ಆತ್ಮರಕ್ಷಣಾ’ ದಾಳಿ ನಡೆಸಿದೆ. ಆದರೂ ಉಭಯ ದೇಶಗಳ ನಡುವಿನ ಕದನ ವಿರಾಮ ಒಪ್ಪಂದ ಜಾರಿಯಲ್ಲಿದೆ ಎಂದು ಅಮೆರಿಕ ಅಧಿಕಾರಿಗಳು ಹೇಳಿದ್ದಾರೆ.

ಯುಎಸ್ ಸೆಂಟ್ರಲ್ ಕಮಾಂಡ್ ಪ್ರಕಾರ, ಹಾರ್ಮುಜ್ ಜಲಸಂಧಿಯ ಮೂಲಕ ಗಲ್ಫ್ ಆಫ್ ಒಮನ್‌ಗೆ ಸಾಗುತ್ತಿದ್ದ ಯುಎಸ್‌ಎಸ್ ಟ್ರಕ್ಸ್ಟನ್, ಯುಎಸ್‌ಎಸ್ ರಾಫೆಲ್ ಪೆರಾಲ್ಟಾ ಮತ್ತು ಯುಎಸ್‌ಎಸ್ ಮೇಸನ್ ಎಂಬ ಮೂರು ಗೈಡೆಡ್-ಮಿಸೈಲ್ ಡಿಸ್ಟ್ರಾಯರ್‌ಗಳ ಮೇಲೆ ಇರಾನ್ ಬ್ಯಾಲಿಸ್ಟಿಕ್ ಕ್ಷಿಪಣಿ, ಕ್ರೂಸ್ ಕ್ಷಿಪಣಿ ಮತ್ತು ಆತ್ಮಾಹುತಿ ಡ್ರೋನ್‌ಗಳಿಂದ ದಾಳಿ ನಡೆಸಿತು. ಸಣ್ಣ ದೋಣಿಗಳೂ ದಾಳಿಯಲ್ಲಿ ಭಾಗಿಯಾಗಿದ್ದವು.

ಅಮೆರಿಕದ ಯುದ್ಧ ವಿಮಾನಗಳು ಮತ್ತು ಹೆಲಿಕಾಪ್ಟರ್‌ಗಳು ಎಲ್ಲಾ ಕ್ಷಿಪಣಿ, ಡ್ರೋನ್‌ಗಳನ್ನು ಹೊಡೆದುರುಳಿಸಿದವು. ಸಣ್ಣ ದೋಣಿಗಳನ್ನು ನಾಶಪಡಿಸಲಾಯಿತು. ‘ಮೂರು ಯುದ್ಧನೌಕೆಗಳಿಗೆ ಯಾವುದೇ ಹಾನಿಯಾಗಿಲ್ಲ. ಆದರೆ ಇರಾನ್ ದಾಳಿಕೋರರು ಸಂಪೂರ್ಣವಾಗಿ ನಾಶವಾಗಿದ್ದಾರೆ’ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರೂತ್ ಸೋಷಿಯಲ್‌ನಲ್ಲಿ ಬರೆದುಕೊಂಡಿದ್ದಾರೆ.

ಪ್ರತೀಕಾರದ ದಾಳಿ
ದಾಳಿಯ ನಂತರ ಅಮೆರಿಕ ಇರಾನ್‌ನ ಕ್ವೆಶ್ಮ್ ಬಂದರು ಮತ್ತು ಬಂದರ್ ಅಬ್ಬಾಸ್‌ನಲ್ಲಿನ ಕ್ಷಿಪಣಿ-ಡ್ರೋನ್ ಉಡಾವಣಾ ತಾಣಗಳು, ಕಮಾಂಡ್ ಕೇಂದ್ರಗಳ ಮೇಲೆ ವೈಮಾನಿಕ ದಾಳಿ ನಡೆಸಿತು. ಟ್ರಂಪ್ ಇದನ್ನು ‘ಪ್ರೀತಿಯ ತಿವಿತ’ ಎಂದು ಬಣ್ಣಿಸಿದ್ದಾರೆ.

ಇರಾನ್ ಆರೋಪವೇನು?
ಇರಾನ್ ಸರ್ಕಾರಿ ಮಾಧ್ಯಮಗಳ ಪ್ರಕಾರ, ಅಮೆರಿಕ ಸೇನೆ ತನ್ನ ತೈಲ ಟ್ಯಾಂಕರ್ ಮೇಲೆ ದಾಳಿ ನಡೆಸಿದ್ದಕ್ಕೆ ಪ್ರತೀಕಾರವಾಗಿ ಯುದ್ಧನೌಕೆಗಳ ಮೇಲೆ ಕ್ಷಿಪಣಿ ಹಾರಿಸಲಾಯಿತು. ‘ಶತ್ರುಗಳ ಘಟಕಗಳು ಹಾರ್ಮುಜ್ ಜಲಸಂಧಿಯಲ್ಲಿ ಹಾನಿಗೊಳಗಾಗಿ ಹಿಮ್ಮೆಟ್ಟುವಂತಾಯಿತು’ ಎಂದು ಇರಾನ್ ಸೇನೆ ಹೇಳಿದೆ. ಆದರೆ ಅಮೆರಿಕ ಇದನ್ನು ನಿರಾಕರಿಸಿದೆ.

ಕದನ ವಿರಾಮ ಉಲ್ಲಂಘನೆಯೇ?
ಎರಡೂ ಕಡೆಯವರು ಕದನ ವಿರಾಮ ಉಲ್ಲಂಘನೆಯಾಗಿಲ್ಲ ಎಂದು ಹೇಳಿಕೊಂಡಿದ್ದಾರೆ. ‘ನಾವು ಉದ್ವಿಗ್ನತೆ ಬಯಸುವುದಿಲ್ಲ. ಆದರೆ ಅಮೆರಿಕ ಪಡೆಗಳನ್ನು ರಕ್ಷಿಸಲು ಸಿದ್ಧರಿದ್ದೇವೆ’ ಎಂದು ಸೆಂಟ್ಕಾಂ ಹೇಳಿದೆ.

ಯುಎಇ ಮೇಲೂ ದಾಳಿ
ಇದೇ ವೇಳೆ ಯುಎಇಯ ಫುಜೈರಾ ಬಂದರಿನ ತೈಲ ಸಂಸ್ಕರಣಾಗಾರದ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ದಾಳಿ ನಡೆಸಿದ್ದು, ಮೂವರು ಭಾರತೀಯರು ಗಾಯಗೊಂಡಿದ್ದಾರೆ.

ಹಾರ್ಮುಜ್ ಬಿಕ್ಕಟ್ಟು
ಫೆಬ್ರವರಿ 28ರಿಂದ ಆರಂಭವಾದ ಅಮೆರಿಕ-ಇಸ್ರೇಲ್-ಇರಾನ್ ಯುದ್ಧದ ನಂತರ ಹಾರ್ಮುಜ್ ಜಲಸಂಧಿ ಬಹುತೇಕ ಮುಚ್ಚಿದ್ದು, ಸುಮಾರು 2,000 ಹಡಗುಗಳು ಸಿಲುಕಿವೆ. ವಿಶ್ವದ ಕಚ್ಚಾತೈಲದ ಶೇ.20ರಷ್ಟು ಇದೇ ಮಾರ್ಗದಲ್ಲಿ ಸಾಗುತ್ತದೆ. ಟ್ರಂಪ್ ‘ಪ್ರಾಜೆಕ್ಟ್ ಫ್ರೀಡಂ’ ಹೆಸರಿನಲ್ಲಿ ಹಡಗುಗಳಿಗೆ ರಕ್ಷಣೆ ನೀಡುವುದಾಗಿ ಘೋಷಿಸಿದ್ದರು.

ಸದ್ಯ ಗಲ್ಫ್‌ನಲ್ಲಿ ಉದ್ವಿಗ್ನತೆ ಮುಂದುವರಿದಿದ್ದು, ತೈಲ ಬೆಲೆ ಏರಿಕೆಯ ಆತಂಕ ಎದುರಾಗಿದೆ.

ಆಂದೋಲನ ಡೆಸ್ಕ್

Recent Posts

ವಡ್ಡರದೊಡ್ಡಿ ಮನೆಯೊಂದರಲ್ಲಿ ಕಳ್ಳತನ

ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು…

14 hours ago

ಕೇಂದ್ರ ಸಚಿವ ಜಾರ್ಜ್ ಕುರಿಯನ್ ರಾಜೀನಾಮೆ

ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ…

15 hours ago

ಕಾರು ಪಲ್ಟಿ: ಐವರಿಗೆ ಗಾಯ

ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…

16 hours ago

ಶಾಂತಳ್ಳಿ: ಮುಂದುವರೆದ ಕಾಡಾನೆ ಹಾವಳಿ

ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…

16 hours ago

ಕರ್ನಾಟಕದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಕೆ

ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.‌28ರವರೆಗೂ ಕರ್ನಾಟಕದಲ್ಲಿ ಮಳೆ…

17 hours ago

ಭಾರತದಲ್ಲಿ ಟೆಲಿಗ್ರಾಂ ನಿಷೇಧ ತೆರವು

ನವದೆಹಲಿ: ನೀಟ್‌ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಪ್ಲೇ ಸ್ಟೋರ್‌ ಹಾಗೂ…

19 hours ago